Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡವರು ಹಾಗೂ ಗೌಡರ ನಡುವೆ ಕಿಚ್ಚು ಹಚ್ಚುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ*
ಇತ್ತೀಚಿನ ಸುದ್ದಿಗಳು

*ಕೊಡವರು ಹಾಗೂ ಗೌಡರ ನಡುವೆ ಕಿಚ್ಚು ಹಚ್ಚುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ*

January 9, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.9 NEWS DESK : ಶಾಂತಿ, ಸಹಬಾಳ್ವೆಗೆ ಆದ್ಯತೆ ನೀಡುತ್ತಿರುವ ಗೌಡರನ್ನು ಗುರಿ ಮಾಡಿಕೊಂಡು ವಿನಾಕಾರಣ ಕೊಡವರು ಹಾಗೂ ಗೌಡರ ನಡುವೆ ಕಿಚ್ಚು ಹಚ್ಚುವ ಕೆಲಸವನ್ನು ಸಂಘಟನೆಯೊಂದು ಮಾಡುತ್ತಿದೆ ಎಂದು ಆರೋಪಿಸಿರುವ ಚೆಟ್ಟಳ್ಳಿಯ ಚೇರಳ ಗೌಡ ಸಂಘ, ಸಂಘಟನೆಯ ಅಧ್ಯಕ್ಷರು ಹಾಗೂ ಸಹಚರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇರಳ ಗೌಡ ಸಂಘದ ಅಧ್ಯಕ್ಷ ಅಯ್ಯಂಡ್ರ ರಾಘವಯ್ಯ ಅವರು ಕೊಡಗು ಜಿಲ್ಲೆಯ ಕಟ್ಟೆಮಾಡು ಗ್ರಾಮದ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕ ಪೂಜಾ ಕಾರ್ಯಕ್ರಮದ ಸಂದರ್ಭ ವಸ್ತ್ರ ಸಂಹಿತೆ ಕುರಿತು ಉಂಟಾದ ಕಲಹದಿಂದ ಜಿಲ್ಲೆಯಲ್ಲಿ ಸೂಕ್ಷ್ಮ ಪರಿಸ್ಥಿತಿ ಇದೆ. ಇದೇ ಸಂದರ್ಭದಲ್ಲಿ ಸ್ವಯಂ ಘೋಷಿತ ಸಂಘಟನೆಯ ಅಧ್ಯಕ್ಷರು ಹಾಗೂ ಸಹಚರರು ಜಿಲ್ಲೆಯಲ್ಲಿ ಗೌಡರು ಮತ್ತು ಕೊಡವರ ನಡುವೆ ಕಿಚ್ಚು ಹಚ್ಚುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಮೂಲ ಆಶಯದಂತೆ ಭಾರತೀಯರು ಭಾರತದ ಯಾವ ಭಾಗದಲ್ಲಿ ನೆಲೆಸಿದರೂ ಭಾರತೀಯರೇ ಆಗಿರುತ್ತಾರೆ ಹೊರತು ಪರಕೀಯರಲ್ಲ. ಗೌಡರನ್ನು ಹೊರಗಿನವರು ಎಂದು ಪ್ರತಿಬಿಂಬಿಸಿ ನಿಂದಿಸುತ್ತಿರುವುದು ಖಂಡನೀಯ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ನಾವು ಸಹಬಾಳ್ವೆಗೆ ಆದ್ಯತೆ ನೀಡುತ್ತೇವೆಯೇ ಹೊರತು ವಿಷಬೀಜ ಬಿತ್ತುವ ಕೆಲಸ ಮಾಡುವುದಿಲ್ಲ. ಇನ್ನಾದರೂ ಕೊಡಗಿನ ಜನ ಒಗ್ಗಟ್ಟಾಗಿ ಕಿಚ್ಚು ಹಚ್ಚುವ ಸಂಘಟನೆಯ ವಿರುದ್ಧ ಜಾಗೃತರಾಗಬೇಕೆಂದು ಕರೆ ನೀಡಿದರು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕೆಡಿಸುತ್ತಿರುವ ವ್ಯಕ್ತಿಗಳು ಕೊಡಗಿನ ಗೌಡರ ಜಾತಿ ನಿಂದನೆ ಮಾಡಿ, ಇವರುಗಳು ಗೌಡರೇ ಅಲ್ಲ, ಇವರಿಗೆ ಗೌಡರ ಸಾಮ್ಯತೆಯೇ ಇಲ್ಲ, ಇವರಿಗೂ ಒಕ್ಕಲಿಗರಿಗೂ ಸಂಬಂಧವೇ ಇಲ್ಲ, ಇವರು ಆಂಧ್ರಪ್ರದೇಶದಿಂದ ಬಂದವರು ಎಂಬಿತ್ಯಾದಿ ಆಘಾತಕಾರಿ ಮತ್ತು ಅಸಹನೀಯ ಹೇಳಿಕೆಗಳನ್ನು ನೀಡಿರುತ್ತಾರೆ. ಅಲ್ಲದೆ ಗೌಡರ ಅಸ್ತಿತ್ವವನ್ನು ಪ್ರಶ್ನಿಸಿ ಜನಾಂಗವನ್ನು ನಿಂದಿಸಿರುತ್ತಾರೆ. ಪ್ರಚೋದನಾಕಾರಿ ಸಂದೇಶದ ವಿರುದ್ಧ ಈಗಾಗಲೇ ದೂರು ಸಲ್ಲಿಸಿದ್ದು, ಇನ್ನೂ ಕ್ರಮ ಕೈಗೊಂಡಿಲ್ಲ. ಇದರ ನಡುವೆಯೇ ಮತ್ತೆ ಮತ್ತೆ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವುದನ್ನು ಮುಂದುವರೆಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗೌಡ ಜನಾಂಗದವರು ಜಿಲ್ಲಾಡಳಿತ ಮತ್ತು ಕೊಡಗು ಜಿಲ್ಲಾ ಪೊಲೀಸ್ ನೀಡಿದ ಕಾನೂನು ಹಾಗೂ ಶಾಂತಿ ಕಾಪಾಡುವ ಕರೆಗೆ ಸೌಮ್ಯವಾಗಿ ಸ್ಪಂದಿಸಿದ್ದಾರೆ. ಆದರೆ ಕಿಡಿಗೇಡಿಗಳು ಮಾಡುತ್ತಿರುವ ನಿಂದನೆಗಳು ಮತ್ತೆ ಜಿಲ್ಲೆಯಲ್ಲಿ ಶಾಂತಿ ಕದಡಲು ಕಾರಣವಾಗುತ್ತಿದೆ. ಕಟ್ಟೆಮಾಡು ಮಹಾಮೃತ್ಯುಂಜಯ ಶ್ರೀ ಕ್ಷೇತ್ರವನ್ನು ಆ ಗ್ರಾಮಸ್ಥರೇ ಕಷ್ಟಪಟ್ಟು ಕಟ್ಟಿದಂತಹ ಒಂದು ಕ್ಷೇತ್ರ. ಹಾಗಾಗಿ ಮೂರನೇಯವರು ಮಧ್ಯಸ್ಥಿಕೆ ವಹಿಸುವ ಅಗತ್ಯವಿಲ್ಲ. ಜಿಲ್ಲಾಡಳಿತ ಯಾವ ಕಾನೂನು ಕ್ರಮವನ್ನು ಕೈಗೊಳ್ಳುವುದೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಅಯ್ಯಂಡ್ರ ರಾಘವಯ್ಯ ಸ್ಪಷ್ಟಪಡಿಸಿದರು. ಈ ಕ್ಷೇತ್ರದ ವಿಷಯವನ್ನು ನೆಪಮಾಡಿಕೊಂಡು ಗೌಡ ಜನಾಂಗವನ್ನು ದೂಷಣೆ ಮಾಡುವುದನ್ನು ನಾವು ಸಹಿಸುವುದಿಲ್ಲ. ಕೋವಿ ವಿಷಯಕ್ಕೆ ಸಂಬಂಧಿಸಿದಂತೆ ಹಾಗೂ ಸೈನಿಕರ ನಿಂದನೆಗೆ ಸಂಬಂಧಪಟ್ಟಂತೆ ಪ್ರತಿಯೊಂದು ವಿಷಯಗಳಲ್ಲಿ ಗೌಡ ಜನಾಂಗವನ್ನು ದೂಷಣೆ ಮಾಡುವುದು ಖಂಡನೀಯ. ಕೊಡಗಿನಲ್ಲಿ ವಿಷ ಬೀಜ ಬಿತ್ತಲು ಪ್ರಚೋದನೆ ನೀಡುತ್ತಿರುವವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಅವರನ್ನು ಗಡಿಪಾರು ಮಾಡಿದರೆ ಜಿಲ್ಲೆಯಲ್ಲಿ ಶಾಂತಿ ನೆಲೆಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು. ಕೊಡಗು ಸರ್ವ ಜನಾಂಗಗಳಿಗೆ ಸೇರಿದ ಪ್ರದೇಶವಾಗಿದ್ದು, ಇದು ಕರ್ನಾಟಕದ ಒಂದು ಅವಿಭಾಜ್ಯ ಅಂಗವಾಗಿದೆ. ಇಲ್ಲಿ ಇರುವ ಎಲ್ಲರೂ ಬದುಕು ಕಟ್ಟಿಕೊಂಡಿರುವ ಮೂಲ ನಿವಾಸಿಗಳೇ ಆಗಿದ್ದು, ಎಲ್ಲರಿಗೂ ಬಂದು ಬದುಕಲು ಹಕ್ಕು ಇದೆ. ಕೊಡಗಿನ ಶಾಂತಿಯನ್ನು ಕದಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡುವುದಾಗಿ ಹೇಳಿದರು. ಗೌಡ ಸಂಘದ ಉಪ ಖಜಾಂಚಿ ಪೇರಿಯನ ಉದಯ ಮಾತನಾಡಿ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಕಟ್ಟುಪಾಡುಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ, ಗ್ರಾಮಸ್ಥರೆಲ್ಲರು ಸೇರಿ ಮಾಡಿದ ಬೈಲಾದ ಪ್ರಕಾರ ಎಲ್ಲವೂ ನಡೆಯುತ್ತಿದೆ. ಆದರೆ ಇಲ್ಲಿನ ವಿಚಾರವನ್ನು ಮುಂದಿಟ್ಟುಕೊಂಡು ಗೌಡರನ್ನು ನಿಂದಿಸುವುದನ್ನು ಸಹಿಸಲು ಸಾಧ್ಯವಿಲ್ಲವೆಂದರು. ಕೊಡಗು ಜಿಲ್ಲೆಯಲ್ಲಿ ಎಲ್ಲಾ ಜಾತಿ ಜನಾಂಗದವರು ಒಗ್ಗಟ್ಟಾಗಿ ಜೀವನ ಸಾಗಿಸುತ್ತಿದ್ದಾರೆ. ಆದರೆ ಸಂಘಟನೆಯೊಂದು ಪ್ರಚೋದನೆ ನೀಡುತ್ತಾ ಒಡಕು ಮೂಡಿಸುತ್ತಿದೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಹೊಸಮನೆ ಟಿ.ಪೂವಯ್ಯ, ಕಾರ್ಯದರ್ಶಿ ಆಜೀರ ಧನಂಜಯ, ಉಪ ಕಾರ್ಯದರ್ಶಿ ಮರದಾಳು ಜನಾರ್ಧನ ಹಾಗೂ ಖಜಾಂಚಿ ಮುಕ್ಕಾಟಿ ಪಳಂಗಪ್ಪ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ : ಕಿಸಾನ್ ಸಭಾದಿಂದ ಹಕ್ಕೊತ್ತಾಯ ದಿನ ಆಚರಣೆ*
Next Article *ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮಂಡಿರ ಯುಕ್ತಾ ನೀಲಮ್ಮ ಸಾಧನೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.