Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಕೊಡಗು: ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಕೊಡಗಾಗಿ ಉಳಿಯಬೇಕಾದರೆ ಎಲ್ಲರೂ ಒಗ್ಗೂಡಿ ಮುನ್ನಡೆಯಬೇಕು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಕೊಡಗಾಗಿ ಉಳಿಯಬೇಕಾದರೆ ಎಲ್ಲರೂ ಒಗ್ಗೂಡಿ ಮುನ್ನಡೆಯಬೇಕು*

ಜನವರಿ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.10 NEWS DESK : ಕೊಡಗಿನಲ್ಲಿರುವ ಗೌಡರು ತಲೆತಲಾಂತರಗಳಿಂದ ಇಲ್ಲೇ ಹುಟ್ಟಿ ಬೆಳೆದವರಾಗಿದ್ದು, ಎಲ್ಲಾ ಜಾತಿ ಜನಾಂಗಗಳೊಂದಿಗೆ ಅನ್ಯೋನ್ಯತೆಯಿಂದ ಬದುಕು ಸಾಗಿಸುತ್ತಿದ್ದಾರೆ. ಆದರೆ ಸಂಘಟನೆಯೊಂದು ಕೊಡಗಿನ ಗೌಡರನ್ನು ಆಂಧ್ರದಿಂದ ಬಂದವರು ಎಂದು ನಿಂದನೆ ಮಾಡುವ ಮೂಲಕ ಸಮಾಜದಲ್ಲಿ ವಿಷಬೀಜ ಬಿತ್ತುವ ಕಾರ್ಯವನ್ನು ಮಾಡುತ್ತಿದೆ ಎಂದು ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಕಾರ್ಯ ಮುಂದುವರೆದರೆ ಮುಂದಿನ ದಿನಗಳಲ್ಲಿ ಕೊಡಗು ಕೊಡಗಾಗಿ ಉಳಿಯುವುದಿಲ್ಲ. ತಲೆತಲಾಂತರಗಳಿಂದ ಕೊಡಗಿನಲ್ಲೇ ಹುಟ್ಟಿ ಬೆಳೆದ ಗೌಡರು ಎಲ್ಲರೊಂದಿಗೆ ಸಾಮರಸ್ಯದಿಂದ ಜೀವನ ನಡೆಸುತ್ತಿದ್ದಾರೆ. ಕೊಡವರು ಹಾಗೂ ಗೌಡರು ಒಗ್ಗಟ್ಟಿನಿಂದ ಇದ್ದಾರೆ, ಆದರೆ ಸಂಘನೆಯೊಂದು ಒಡಕು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇತ್ತೀಚೆಗೆ ಚೇರಂಬಾಣೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳನ್ನು ಒಂದು ಸಮುದಾಯಕ್ಕೆ ಸೀಮಿತ ಮಾಡಿ ಘೋಷಣೆ ಕೂಗಿದ್ದಾರೆ. ಇಡೀ ವಿಶ್ವವೇ ಹೆಮ್ಮೆ ಪಡುವ ಈ ಇಬ್ಬರು ಅಪ್ರತಿಮ ಸೇನಾಧಿಕಾರಿಗಳ ಬಗ್ಗೆ ಗೌಡರಿಗೂ ಅಪಾರ ಅಭಿಮಾನ ಮತ್ತು ಗೌರವವಿದೆ. ಇವರನ್ನು ಒಂದು ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲವೆಂದರು. ಕೊಡಗಿನಲ್ಲೇ ಹುಟ್ಟಿ ಬೆಳೆದ ಸರ್ವ ಜನಾಂಗದವರು ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಕೊಡಗು ಕೊಡಗಾಗಿ ಉಳಿಯಲು ಸಾಧ್ಯವೆಂದು ಕೊಡಪಾಲು ಗಣಪತಿ ಅಭಿಪ್ರಾಯಪಟ್ಟರು. ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕ ಕೊಡಗನ ತೀರ್ಥ ಪ್ರಸಾದ್ ಮಾತನಾಡಿ ದೇಶದ ಸಂವಿಧಾನದ ಮೇಲೆ ಗೌರವವಿಲ್ಲದ ಸಂಘಟನೆಯೊಂದು ಕನ್ನಡ ರಾಜ್ಯೋತ್ಸವದ ದಿನವನ್ನು ಕರಾಳ ದಿನವನ್ನಾಗಿ ಆಚರಿಸುತ್ತದೆ. ಈ ಸಂಘಟನೆಯ ಒತ್ತಡಕ್ಕೆ ಮಣಿದು ಪೊನ್ನಂಪೇಟೆ ಭಾಗದ ಕೆಲವರು ಅರೆಭಾಷೆ ಗೌಡರನ್ನು ನಿಂದಿಸಿರುವುದು ಖಂಡನೀಯ. ಒಕ್ಕಲಿಗ ಗೌಡ ಜನಾಂಗ ಮತ್ತು ಅರೆಭಾಷೆ ಜನಾಂಗದ ಮಂದಿ ಅತ್ಯಂತ ಅನ್ಯೋನ್ಯತೆಯಿಂದ ಇದ್ದಾರೆ. ಈ ಎರಡು ಜನಾಂಗಗಳ ನಡುವಿನ ಬಾಂಧವ್ಯದ ಮಹತ್ವವನ್ನು ಅರಿಯದವರು ವಿನಾಕಾರಣ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಮಾಜವನ್ನು ಒಡೆಯುವ ಮತ್ತು ಶಾಂತಿ ಕದಡುವ ಯತ್ನ ಮಾಡಿದರೆ ಗೌಡರ ಸ್ವಾಭಿಮಾನ ಹೆಚ್ಚಾಗುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ ಎಂದು ತಿಳಿಸಿದರು. ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತುವವರ ಮಾತಿಗೆ ಮರುಳಾಗದೆ ಕೊಡಗಿನಲ್ಲಿರುವ ಎಲ್ಲಾ ಜನಾಂಗದವರು ಒಗ್ಗಟ್ಟಿನಿಂದ ಇರಬೇಕು ಎಂದು ಮನವಿ ಮಾಡಿದರು.
ಕುಶಾಲನಗರ ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ ಮಾತನಾಡಿ ಕಟ್ಟೆಮಾಡು ಶ್ರೀ ಮೃತ್ಯುಂಜಯ ದೇವಸ್ಥಾನದ ವಸ್ತ್ರ ಸಂಹಿತೆ ವಿಚಾರ ದೇವಸ್ಥಾನ ಮತ್ತು ಆ ಗ್ರಾಮಕ್ಕೆ ಮಾತ್ರ ಸೀಮಿತವಾಗಿದೆ. ಜಿಲ್ಲಾಧಿಕಾರಿಗಳು ಗೊಂದಲ ನಿವಾರಣೆಗೆ ದೇವಸ್ಥಾನ ಸಮಿತಿಗೆ ಫೇ.10ರವರೆಗೆ ಕಾಲಾವಕಾಶವನ್ನು ನೀಡಿದ್ದಾರೆ. ಆದರೆ ಇದರ ನಡುವೆಯೇ ಮತ್ತೆ ಮತ್ತೆ ಗೌಡ ಜನಾಂಗವನ್ನು ಮತ್ತು ಸಂಪ್ರದಾಯವನ್ನು ನಿಂದಿಸುತ್ತಿರುವುದು ಖಂಡನೀಯ ಎಂದರು. ಜಿಲ್ಲೆಯಲ್ಲಿರುವ ಎಲ್ಲಾ ಕೊಡವರು ಹಾಗೂ ಗೌಡರು ಒಗಟ್ಟಿನಿಂದ ಜೀವನ ಸಾಗಿಸುತ್ತಿದ್ದಾರೆ. ಬೆರಳೆಣಿಕೆಯಷ್ಟು ಕಿಡಿಗೇಡಿಗಳು ಮಾತ್ರ ಒಡಕು ಮೂಡಿಸುತ್ತಿದ್ದು, ಈ ಕಿಡಿಗೇಡಿಗಳ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಯಾವುದೇ ಜಾತಿ ಅಥವಾ ವ್ಯಕ್ತಿಯನ್ನು ಯಾರೇ ನಿಂದಿಸಿದರೂ ನೇರವಾಗಿ ಪೊಲೀಸ್ ಠಾಣೆಗಳಿಗೆ ಅಥವಾ ಆನ್ ಲೈನ್ ಮೂಲಕ ದೂರು ನೀಡುವಂತೆ ಮನವಿ ಮಾಡಿದರು. ಗೌಡ ಮುಖಂಡ ಪಿ.ಎಲ್.ಸುರೇಶ್ ಮಾತನಾಡಿ ಒಕ್ಕಲಿಗರು ಹಾಗೂ ಅರೆಭಾಷೆ ಗೌಡರ ಮಧ್ಯೆ ಒಡಕು ಮೂಡಿಸಿ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನಗಳು ನಡೆಯುತ್ತಿದ್ದು, ಇದು ಫಲಿಸುವುದಿಲ್ಲ. ಒಕ್ಕಲಿಗರು ಹಾಗೂ ಅರೆಭಾಷೆ ಗೌಡರಿಗೆ ಅವಿನಾಭಾವ ಸಂಬಂಧವಿದೆ. ಈ ಕುರಿತು ಮಾಹಿತಿ ಇಲ್ಲದವರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಒಕ್ಕಲಿಗ ಮಠಗಳಲ್ಲಿ ಅರೆಭಾಷೆ ಗೌಡರು ಸ್ಥಾನ ಪಡೆದುಕೊಂಡಿದ್ದಾರೆ, ಒಕ್ಕಲಿಗ ಸಂಘಗಳಲ್ಲಿ ಪ್ರತಿನಿಧಿಗಳಾಗಿದ್ದಾರೆ. ಅರೆಭಾಷೆ ಗೌಡರು ಕೊಡಗಿನಲ್ಲೇ ಹುಟ್ಟಿ ಬೆಳೆದವರಾಗಿದ್ದು, ಹೊರಗಿನವರಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕ ತಳೂರು ದಿನೇಶ್ ಕರುಂಬಯ್ಯ ಹಾಗೂ ಗಣೇಶ ಪರ್ಮಾಲೆ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಕೊಡಗು: ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಕೊಡಗು: ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ.11 NEWS DESK : ಕೊಡಗು ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅವರು ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ್ದಾರೆ.…

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.