Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೋಟರಿ ಮಡಿಕೇರಿಯಲ್ಲಿ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು : ಮನೋಹರ್ ಕಾಮತ್*
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಗುರು-ಶಿಷ್ಯರ ಸಮ್ಮಿಲನ : ಸುಜ್ಞಾನ ಮೂಡಿಸುವ ಗುರುಗಳು ಶ್ರೇಷ್ಠರು : ನ್ಯಾಯಮೂರ್ತಿ ಎಂ.ಜಿ.ಶುಕುರೆ ಕಮಲ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಗುರು-ಶಿಷ್ಯರ ಸಮ್ಮಿಲನ : ಸುಜ್ಞಾನ ಮೂಡಿಸುವ ಗುರುಗಳು ಶ್ರೇಷ್ಠರು : ನ್ಯಾಯಮೂರ್ತಿ ಎಂ.ಜಿ.ಶುಕುರೆ ಕಮಲ್*

ಜನವರಿ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.20 NEWS DESK : ಒಳ್ಳೆಯತನವನ್ನು ಬೆಳೆಸಿ ಕೆಟ್ಟತನವನ್ನು ಅಳಿಸುವವರೇ ಗುರುಗಳು. ಅದರಲ್ಲಿಯೂ ತಾಯಿ ಅತ್ಯಂತ ಶ್ರೇಷ್ಠ ಶಿಕ್ಷಕಿ ಎಂದು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯ ಮೂರ್ತಿಗಳಾದ ಎಂ.ಜಿ. ಶುಕುರೆ ಕಮಲ್ ಹೇಳಿದರು. ಸ್ಥಳೀಯ ಸರಕಾರಿ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ಗುರು ಶಿಷ್ಯರ ಸಮ್ಮಿಲನ ಮತ್ತು ಸ್ನೇಹ ಸಂಗಮ ಜಿ.ಎಂ.ಪಿ ಶಾಲಾ ಮೈದಾನದಲ್ಲಿ ಆಯೋಜಿಸಲಾದ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಯೂ ಆಗಿರುವ ಅವರು ತಮ್ಮ ಪ್ರೌಢಶಾಲಾ ಪ್ರವೇಶಾತಿಯಿಂದ ಮೊದಲ್ಗೊಂಡು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕ ಮತ್ತು ಶಿಕ್ಷಕಿಯರು ತಿದ್ದಿ ತೀಡಿದ ಬಗ್ಗೆ ನಿದರ್ಶಗಳನ್ನು ವಿವರಿಸಿದರು. ಶಿಕ್ಷಣ ವ್ಯವಸ್ಥೆ ಬೆಳೆದು ಬಂದ ಕಾಲವನ್ನು ಪ್ರಾಚೀನ ಮಧ್ಯಮ ಮತ್ತು ಆಧುನಿಕ ಕಾಲಗಳೆಂದು ವಿಶ್ಲೇಷಿಸಿದ ಅವರು ಮಠಗಳು, ಮಸೀದಿಗಳು ಮತ್ತು ಚರ್ಚ್‍ಗಳು ಪ್ರಾಚೀನ ಕಾಲದಲ್ಲಿ ವಿದ್ಯಾದಾನದ ಕೇಂದ್ರಗಳಾಗಿದ್ದವು. ಮಧ್ಯಮ ಕಾಲದಲ್ಲಿ ಸರಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು ಶಿಕ್ಷಣ ವ್ಯವಸ್ಥೆಯನ್ನು ಮುಂದುವರಿಸಿದವು. ಆಧುನಿಕ ಕಾಲಘಟ್ಟದಲ್ಲಿ ನಾವು ಕ್ರಾಂತಿಕಾರಿ ಆಲೋಚನೆಗಳನ್ನು ಹೊಂದಿದ್ದೇವೆ. ಆದರೆ ಆಧುನಿಕ ಕಾಲಘಟ್ಟದಲ್ಲಿ ಕೃತಕ ಬುದ್ಧಿಮತ್ತೆಯನ್ನು ಬಳಸುವ ಸಂದರ್ಭದಲ್ಲಿ ಸರಕಾರಿ ಶಾಲೆಗಳಲ್ಲಿ ಇನ್ನೂ ಕೂಡ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೌಕರ್ಯ ಮತ್ತು ಸಭಾಂಗಣಗಳು ಇಲ್ಲ ಎಂಬ ಮನವಿಗಳ ಕೂಗುಗಳು ಕೇಳಿ ಬರುತ್ತಲೇ ಇವೆ ಎಂದು ಅವರು ವಿಷಾದಿಸಿದರು. ಮಾಜಿ ಶಾಸಕರು ಹಾಗೂ ಶಾಲಾ ಕೊಠಡಿ ದಾನಿಗಳಾದ ಕೆ.ಎಂ. ಇಬ್ರಾಹಿಂ ಮಾಸ್ಟರ್ ಮಾತನಾಡಿ, ತಾವು ಸುಂಟಿಕೊಪ್ಪ ಪುರಸಭಾ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಆಗ ಮುಖ್ಯಮಂತ್ರಿಗಳಾಗಿದ್ದ ಆರ್.ಗುಂಡೂರಾವ್ ಮತ್ತು ಶಿಕ್ಷಣ ಸಚಿವರು ಬಂದಿದ್ದ ಸಂದರ್ಭದಲ್ಲಿ ಪ್ರೌಢಶಾಲೆಯೊಂದನ್ನು ಮಂಜೂರು ಮಾಡುವಂತೆ ಕೋರಿದೆ. ಆದರೆ ಕಟ್ಟಡ ಇಲ್ಲದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಮಂಜೂರಾತಿಗೆ ನಿರಾಕರಿಸಿದಾಗ ಕಟ್ಟಡವನ್ನು ದಾನಿಗಳ ಮೂಲಕ ನಿರ್ಮಿಸಲಾಗುವುದು. ಪ್ರೌಢಶಾಲೆ ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದೆ. ಈ ಹಿನ್ನಲೆಯಲ್ಲಿ ತಾನು ಮತ್ತು ದಾನಿಗಳಾದ ಡಿ.ವಿನೋದ್ ಶಿವಪ್ಪ ಮತ್ತು ಡಿ.ಆನಂದ್ ಬಸಪ್ಪ ಅವರುಗಳ ಸಹಕಾರದಿಂದ 3 ಕೊಠಡಿಗಳನ್ನು 2 ತಿಂಗಳ ಅವಧಿಯಲ್ಲಿ ಕಟ್ಟಿ ಪ್ರೌಢಶಾಲೆಯನ್ನು ಪ್ರಾರಂಭಿಸಿದನ್ನು ಕೆ.ಎಂ.ಇಬ್ರಾಹಿಂ ಸ್ಮರಿಸಿದರು. ಹಿರಿಯ ಹಾಗೂ ನಿವೃತ್ತ ಶಿಕ್ಷಕರಾದ ಶಿವಪ್ಪ ಮಾತನಾಡಿ, ಪಿತೃಭಕ್ತಿ ಗುರು ಭಕ್ತಿಯೊಂದಿಗೆ ದೇಶ ಭಕ್ತಿ ಹಾಗೂ ಒಳ್ಳೆಯತನವನ್ನು ಮೈಗೂಡಿಸಿಕೊಂಡಾಗ ಓರ್ವ ವ್ಯಕ್ತಿ ಜೀವನದಲ್ಲಿ ಉನ್ನತ ಸ್ಥಾನ ಪಡೆಯಬಹುದು ಎಂದರು. ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಂ.ಎಸ್.ಸುನಿಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿ ಸಿ. ಮಹೇಂದ್ರ ದಾನಿಗಳ ಪರಿಚಯವನ್ನು ಮಾಡಿದರು. ಕೆ.ಎಂ.ಇಬ್ರಾಹಿಂ, ಮಾಸ್ಟರ್, ಡಿ.ಆನಂದ ಬಸಪ್ಪ, ಡಿ.ವಿನೋದ್ ಶಿವಪ್ಪ ಮತ್ತು ಪಟ್ಟೆಮನೆ ಕುಟುಂಬಸ್ಥರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಹಾಗೂ ವಿನೋದ್ ಶಿವಪ್ಪ ಮತ್ತು ಇತರ ಗಣ್ಯರು ನ್ಯಾಯಮೂರ್ತಿ ಎಂ.ಜಿ.ಶುಕುರೆ ಕಮಲ್ ಅವರನ್ನು ಸನ್ಮಾನಿಸಿದರು. ವೇದಿಕೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿ ಪ್ರಸ್ತುತ ಬೃಹತ್ ಬೆಂಗಳೂರು ನಗರಪಾಲಿಕೆಯಲ್ಲಿ ಸಹಾಯಕ ಆಯುಕ್ತಕರಾಗಿರುವ ಪಿ.ಎಸ್.ಮಹೇಶ್ ಕುಮಾರ್, ರಾಮನಗರ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ನಾಗಮ್ಮ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಂಗಧಾಮಯ್ಯ, ನಿವೃತ್ತ ಪ್ರಾಂಶುಪಾಲರಾದ ರಜಿನಾ ಪಿ. ಮಾಲಕಿ, ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಗೀತಾ ಪಾರ್ಥ, ಉಪ ಪ್ರಾಂಶುಪಾಲ ಬಾಲಕೃಷ್ಣ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಮೊದಲಿಗೆ ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಂದ ಸ್ವಾಗತ ನೃತ್ಯ, ಶಾಲೆಯ ಹಳೆಯ ವಿದ್ಯಾರ್ಥಿಗಳಾದ ವೀಣಾ ಮತ್ತು ಶೋಭಾ ಪ್ರಾರ್ಥಿಸಿ, ಹಳೆಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿ ವೆಂಕಪ್ಪ ಕೋಟ್ಯಾನ್ ಸ್ವಾಗತಿಸಿ, ಲಿಯೋನಾ ಸಬಾಸ್ಟೀನ್ ಕಾರ್ಯಕ್ರಮ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೋಟರಿ ಮಡಿಕೇರಿಯಲ್ಲಿ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು : ಮನೋಹರ್ ಕಾಮತ್*

ಸೆಪ್ಟೆಂಬರ್ 7, 2026

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6 : ಕೊಡಗು ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್…

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.