Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿವೇಕಾನಂದ ಪಿಯು ಕಾಲೇಜಿನಲ್ಲಿ ವೆಲ್ ಫೇರ್ ಡೇ : ಪುಸ್ತಕ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ : ಡಾ.ದೇವರಾಜು ಸಲಹೆ*
ಇತ್ತೀಚಿನ ಸುದ್ದಿಗಳು

*ವಿವೇಕಾನಂದ ಪಿಯು ಕಾಲೇಜಿನಲ್ಲಿ ವೆಲ್ ಫೇರ್ ಡೇ : ಪುಸ್ತಕ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ : ಡಾ.ದೇವರಾಜು ಸಲಹೆ*

February 1, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕಣಿವೆ ಫೆ.1 NEWS DESK : ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿಗೆ ಮಾರಕವಾಗಿರುವ ಮೊಬೈಲ್ ಎಂಬ ಮಾಯಾಪೆಟ್ಟಿಗೆಯನ್ನು ದೂರವಿಟ್ಟು ಪುಸ್ತಕ ಹಿಡಿದು ಅಧ್ಯಯನ ಮಾಡುವ ಮೂಲಕ ಜ್ಞಾನವಂತರಾಗಲು ನಿವೃತ್ತ ಪ್ರಾಂಶುಪಾಲ ಡಾ.ದೇವರಾಜು ಕರೆ ನೀಡಿದರು. ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲಿ ಜ್ಞಾನಕ್ಕೆ ಇರುವ ಬೆಲೆ ಹಣಕ್ಕಿಲ್ಲ.  ಹಣವಂತನನ್ನು ಎಲ್ಲಿಯೂ ಯಾರೂ ಕೂಡ ಸತ್ಕರಿಸಿದ ಉದಾಹರಣೆ ಇಲ್ಲ.  ಅದೇ ಕಠಿಣ ಪರಿಶ್ರಮದ ಮೂಲಕ ಜ್ಞಾನವಂತರಾದರೆ ಸಮಾಜವೇ ತನ್ನ ಬಳಿ ಬಂದು ಗೌರವಿಸುತ್ತದೆ ಎಂದರು. ಹಳ್ಳಿಗಾಡಿನಲ್ಲಿ ಪೋಷಕರು ಇಂದಿಗೂ ಕೂಡ ಕಷ್ಟಪಟ್ಟು ಮಕ್ಕಳನ್ನು ಒಳ್ಳೆಯ ಕಾಲೇಜುಗಳಲ್ಲಿ ಓದಿಸುತ್ತಿದ್ದಾರೆ.  ಮಕ್ಕಳು ಪೋಷಕರ ಹಣಕಾಸಿನ ಸ್ಥಿತಿಗತಿ ಅರಿಯಬೇಕು. ಹೆತ್ತವರು ಧರಿಸುವ ಹರಿದ ಹಾಗೂ ಹಳೆಯ ಬಟ್ಟೆಗಳ ಬೆವರು ನಿಮ್ಮ ಬದುಕನ್ನು ವರ್ಣರಂಜಿತವಾಗಿಸುತ್ತಿದೆ.  ನಿಮ್ಮೊಳಗೆ ಅಡಗಿರುವ ವಿದ್ಯೆ ಹಾಗೂ ಉತ್ತಮ ಸಂಸ್ಕಾರಗಳು ನಿಮ್ಮನ್ನು ಸುಂದರಗೊಳಿಸುತ್ತವೆಯೇ ಹೊರತು, ನೀವು ಧರಿಸುವ ಕಲರ್ ಕಲರ್ ಬಟ್ಟೆಗಳು, ನೀವು ಸುತ್ತಾಡುವ ಬೈಕುಗಳು ಹಾಗೂ ಒಳ್ಳೆಯ ಮೊಬೈಲ್ ಗಳಿಂದಲ್ಲ ಎಂದು ಡಾ.ದೇವರಾಜು ಮಾರ್ಮಿಕವಾಗಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.  ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿದ ಹೊಸ ಕಟ್ಟಡದಲ್ಲಿ ಹೊಸದಾಗಿ ಮಾರ್ಪಡಿಸಿದ ಜೀವಶಾಸ್ತ್ರ ಪ್ರಯೋಗಾಲಯ ಉದ್ಘಾಟಿಸಿದ ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಪಿಕಾ ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳ ಪಾಲಿಗೆ ದ್ವಿತೀಯ ಪಿಯುಸಿ ಇಡೀ ಜೀವನದ ದಿಕ್ಕನ್ನೇ ಬದಲಿಸುವ ಪ್ರಮುಖ ಘಟ್ಟವಾಗಿದ್ದು, ಸತತ ಅಧ್ಯಯನ, ಏಕಾಗ್ರತೆ ಹಾಗೂ ನಿರಂತರ ಸಂವಹನಗಳಿಂದ ಗುರಿ ಸಾಧಿಸಬಹುದಾಗಿದೆ.  ಆದ್ದರಿಂದ ಪಿಯು ಹಂತವನ್ನು ಬಹಳಷ್ಟು ಜತನ ಹಾಗೂ ಜೋಪಾನವಾಗಿ ಯಶಸ್ವಿ ಪಥದತ್ತ ಕೊಂಡೊಯ್ಯಲು ಕರೆ ನೀಡಿದರು. ಕಾಲೇಜಿನ ಗೌರವ ಪ್ರಾಂಶುಪಾಲ ನಾಗೇಶ್ ಮಾತನಾಡಿ, ವಿದ್ಯಾರ್ಥಿಗಳು ದುಷ್ಚಟ ಹಾಗೂ ದುರಭ್ಯಾಸಗಳಿಂದ ದೂರವಿದ್ದು, ನಿರಂತರವಾಗಿ ಅಧ್ಯಯನ ಮಾಡುವ ಮೂಲಕ ಶೈಕ್ಷಣಿಕವಾಗಿ ಸಾಧನೆ ಹೊಂದಬೇಕಿದೆ.  ಇತ್ತೀಚಿನ ದಶಕಗಳಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಕೃಷಿ ಕ್ಷೇತ್ರವನ್ನು ಹೊರತು ಪಡಿಸಿ ಉಳಿದೆಲ್ಲಾ ಕ್ಷೇತ್ರಗಳ ಮೇಲಿನ ಮಮಕಾರದಿಂದಾಗಿ ಕೃಷಿ ಕ್ಷೇತ್ರ ಕೃಷವಾಗುತ್ತಿದೆ. ವಿದ್ಯಾರ್ಥಿಗಳು ಬೇರೆ ಬೇರೆ ರಂಗಗಳ ಸಾಧನೆ ಜೊತೆಗೆ ಕೃಷಿಯನ್ನು ಪ್ರೀತಿಸಬೇಕು. ಕೃಷಿ ರಂಗದಲ್ಲಿ ಹೊಸ ಸಂಶೋಧನೆಗಳಾಗಬೇಕು.  ಕೃಷಿಯನ್ನೇ ನಂಬಿರುವ ಹಳ್ಳಿಗಾಡಿನ ಕೃಷಿಕರ ಹಿತಕ್ಕಾಗಿ ಸರ್ಕಾರಗಳು ಹೊಸ ಕೃಷಿ ನೀತಿ ಜಾರಿಗೊಳಿಸಬೇಕಿದೆ ಎಂದರು.  ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಮಾತನಾಡಿ, ಕಾಲೇಜಿನಲ್ಲಿ ಕಲಿಯುವ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ದೃಷ್ಟಿಯಿಂದ ರಾಷ್ಟ್ರೀಯ ಮಟ್ಟದ ಸಾಧಕರನ್ನು ಸಂಸ್ಥೆಗೆ ಕರೆ ತಂದು ವಿದ್ಯಾರ್ಥಿಗಳಿಗೆ ಕೋಚಿಂಗ್ ಕೊಡಿಸಲಾಗುತ್ತಿದೆ. ವಿದ್ಯಾರ್ಥಿಗಳು ಕೂಡ ಕಷ್ಟ ಪಟ್ಟು ಓದಿದಲ್ಲಿ ಹೆತ್ತವರು ಹಾಗೂ ಸಂಸ್ಥೆಗೂ ಹೆಸರು ಬರುತ್ತದೆ ಎಂದರು. ದ್ವಿತೀಯ ಪಿಯುಸಿಯಲ್ಲಿ ಗರಿಷ್ಠ ಅಂಕಗಳೊಂದಿಗೆ ವೈದ್ಯಕೀಯ ಶಿಕ್ಷಣ ಪೂರೈಸಿ ಕೂಡಿಗೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡ ಡಾ.ದೀಪಿಕಾ ಮೂರ್ತಿ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.  ವಿದ್ಯಾರ್ಥಿಗಳಿಂದ ವಿದ್ಯುತ್ ಅಲಂಕೃತ ವೇದಿಕೆಯಲ್ಲಿ ವೈವಿಧ್ಯಮಯವಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪಿಯು ಕಾಲೇಜಿನ ಪ್ರಾಂಶುಪಾಲೆ ಕ್ಲಾರಾ ರೇಷ್ಮಾ, ಪದವಿ ವಿಭಾಗದ ಪ್ರಾಂಶುಪಾಲೆ ಲಿಖಿತಾ, ಕಾಲೇಜಿನ ಅಧೀಕ್ಷಕ ಎನ್.ಎನ್. ನಂಜಪ್ಪ, ಮಹೇಶ್ ಅಮೀನ್, ಹಿರಿಯ ಉಪನ್ಯಾಸಕರಾದ ವಿಕ್ರಂ, ಮಂಜುನಾಥ್, ನಮಿತಾ, ಸೌಮ್ಯಶ್ರೀ, ಮೇರಿಪ್ರಿಯಾ, ಸ್ವಾಮಿಗೌಡ ಮೊದಲಾದವರಿದ್ದರು.  ವಿದ್ಯಾರ್ಥಿನಿ ರಿಲಾ ಸಾರಮ್ಮ ಹಾಗೂ ಕೀರ್ತನಾ ನಿರೂಪಿಸಿದರು. ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ಸ್ವಾಗತಿಸಿದರು. ರಶ್ಫಾ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಯುವ ಸಮಾವೇಶ : ವಿವೇಕಾನಂದ-ಸುಭಾಷ್ ಚಂದ್ರ ಬೋಸ್ ಯುವ ಸಮುದಾಯದ ಪ್ರೇರಣಾ ಶಕ್ತಿಗಳು : ಶ್ರೀಶಾ*
Next Article *ಕೊಡಗು : ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

Website design development company services in Mangalore

Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.