
ಮಡಿಕೇರಿ ಫೆ.3 NEWS DESK : ತಾಳತ್ತಮನೆ ಶ್ರೀ ದುರ್ಗಾಭಗವತಿ ದೇವಾಲಯದ ವಾರ್ಷಿಕೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ದೇವಾಲಯದ ವಾರ್ಷಿಕೋತ್ಸವದ ಆಹ್ವಾನ ಪತ್ರಿಕೆಯನ್ನು ಚೌಡೇಶ್ವರಿ ದೇವಾಲಯದ ಮುಖ್ಯ ಅರ್ಚಕ ಸತ್ಯೇಶ್ ಭಟ್ ಅನಾವರಣಗೊಳಿಸಿದರು. ಸಭೆಯಲ್ಲಿ ದೇವಾಲಯದ ಮುಖ್ಯ ಅರ್ಚಕ ಕೃಷ್ಣ ಪ್ರಸಾದ್ ಹಾಗೂ ದೇವಾಲಯ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಜರಿದ್ದರು.









