Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*
  • *ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಮಡಿವಾಳ ಮಾಚಿದೇವರ ಜಯಂತಿ : ಮನುಕುಲದ ಒಳಿತಿಗಾಗಿ ದುಡಿದ ಮಡಿವಾಳ ಮಾಚಿದೇವ : ಕೆ.ಬಿ.ರಾಜು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಮಡಿವಾಳ ಮಾಚಿದೇವರ ಜಯಂತಿ : ಮನುಕುಲದ ಒಳಿತಿಗಾಗಿ ದುಡಿದ ಮಡಿವಾಳ ಮಾಚಿದೇವ : ಕೆ.ಬಿ.ರಾಜು*

ಫೆಬ್ರವರಿ 4, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಫೆ.4 NEWS DESK : ಹನ್ನೆರಡನೇ ಶತಮಾನದಲ್ಲಿ ಅಂದು ಸಮಾಜದಲ್ಲಿ ತಾಂಡವಿಸಿದ್ದ ಮೂಢನಂಬಿಕೆ, ಮೇಲು ಕೀಳು ಹಾಗೂ ವರ್ಣ ವ್ಯವಸ್ಥೆಯ ವಿರುದ್ಧ  ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ ದಿಟ್ಟ ಹೋರಾಟಗಾರ ಮಡಿವಾಳ ಮಾಚಿದೇವರು ಎಂದು ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಭೀಮವಾದದ ಅಧ್ಯಕ್ಷ ಕೆ.ಬಿ.ರಾಜು ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಗುಂಡೂರಾವ್ ಬಡಾವಣೆಯಲ್ಲಿನ ದೇವರಾಜ ಅರಸು ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಹಮ್ಮಿಕೊಂಡಿದ್ದ  ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಲ್ಕು ಗೋಡೆಗಳ ನಡುವೆ ಬಂಧಿಯಾಗಿದ್ದ  ಮಹಿಳೆಯರ ಸ್ವಾತಂತ್ರ್ಯಕ್ಕಾಗಿ  12ನೇ ಶತಮಾನದಲ್ಲಿ  ಶರಣರು  ಹೋರಾಟ ನಡೆಸಿದ್ದರು.  ತರುವಾಯ 21 ನೇ ಶತಮಾನದಲ್ಲಿ  ಶೋಷಿತರ, ದೀನ ದಲಿತರ ಆಶಾಕಿರಣವಾಗಿ ಉದ್ಭವಿಸಿದ   ಡಾ.ಅಂಬೇಡ್ಕರ್ ಸಂವಿಧಾನ  ಬಸವಾದಿ ಶರಣರ ಬರೆಯಲು ವಚನಗಳೂ ಕೂಡ ಪ್ರೇರಕವಾದವು ಎಂದು ಅವರು ಹೇಳಿದರು. ಮಡಿವಾಳ ಮಾಚಿದೇವರ ಕುರಿತು ಉಪನ್ಯಾಸ ನೀಡಿದ ಕುಶಾಲನಗರ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಹಾಗೂ ಸರ್ಕಾರಿ ಪ್ರೌಢ ಶಾಲೆಯ  ಕನ್ನಡ ಶಿಕ್ಷಕಿ ಹೇಮಲತಾ, ಬಸವಣ್ಣನು ಕಟ್ಟಿದ ಅನುಭವ ಮಂಟಪದಕ್ಕೆ ಅಂದು ದೇಶ ವಿದೇಶಗಳಿಂದ ಬರುತ್ತಿದ್ದ ಶರಣರಿಗೆ  ಬಟ್ಟೆಗಳನ್ನು  ಹಾಸಿ ಸ್ವಾಗತಿಸಿ ಅವರನ್ನು ಪರೀಕ್ಷಿಸುತ್ತಿದ್ದ ಮಡಿವಾಳ ಮಾಚಿದೇವರು, ಬಸವಣ್ಣನಿಗಿಂತ ಹಿತಿಯರಾದರೂ ಕೂಡ ಅವರ  ಆಜ್ಞೆಯನ್ನು ಚಾಚು ತಪ್ಪದೇ ಪಾಲಿಸುತ್ತಿದ್ದರು. ಅರಸುತನ ಮೇಲಲ್ಲ – ಅಗಸತನ ಕೀಳಲ್ಲ ಎನ್ನುವ ಮೂಲಕ ಸತ್ಯ ಶುದ್ಧವಾದ ಕಾಯಕಕ್ಕೆ ವಿಶೇಷ  ಪ್ರಾಮುಖ್ಯತೆಯನ್ನು  ಅಂದಿನ ಶರಣರು ಕಲ್ಪಿಸಿದ್ದರು. ಕಾಯಕ ಮಾಡದೇ ಏನನ್ನೂ ಕೂಡ   ಶರಣರು ಪಡೆದವರಲ್ಲ ಎಂದು ಆಯ್ದಕ್ಕಿ ಲಕ್ಕಮ್ಮ ಹಾಗೂ ಅಯ್ದಕ್ಕಿ ಮಾರಯ್ಯರ ಸಂಗತಿಯನ್ನು ಹೇಮಲತಾ ವಿಶ್ಲೇಷಿಸಿದರು. ಮುಖ್ಯ ಅತಿಥಿಯಾಗಿದ್ದ ಹೆಬ್ಬಾಲೆ ಪ್ರೌಢಶಾಲೆ ಕನ್ನಡ ಶಿಕ್ಷಕ ಮೆ.ನಾ.ವೆಂಕಟನಾಯಕ್ ಹನ್ನೆರಡನೇ ಶತಮಾನದ ಬಸವಾದಿ ಶರಣರ ವಚನಗಳನ್ನು ವ್ಯಾಖ್ಯಾನಿಸಿದರು. ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಶ್ರೀಕಾಂತ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಬೇಕು. ಬಸವಾದಿ ಶರಣರ ವಿಚಾರಧಾರೆಗಳನ್ನು ಅರಿತು ಅವರ ಆಶಯದಂತೆ ನಡೆಯುವ ದಿಟ್ಟ ನಿಲುವು ಕೈಗೊಂಡಾಗ ಮಾತ್ರ ಸಮಾಜದಲ್ಲಿ ಇಂದು ಘಟಿಸುತ್ತಿರುವ ಲಂಚಗುಳಿತನ, ಮೋಸ, ವಂಚನೆಗಳನ್ನು ನಿರ್ಮೂಲನೆ ಮಾಡಬಹುದಾಗಿದೆ  ಎಂದರು. ಹರದೂರು ಗ್ರಾಪಂ ಅಭಿವೃದ್ದಿ ಅಧಿಕಾರಿ ಡಿ.ವೀಣಾ ಮಾತನಾಡಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಪರಿಷತ್ತಿನ ಕೋಶಾಧಿಕಾರಿ ಪರಮೇಶ್,  ಕದಳಿ ವೇದಿಕೆ ಗೌರವಾಧ್ಯಕ್ಷೆ ವಿಜಯಾ ಪಾಲಾಕ್ಷ, ನಿರ್ದೇಶಕರಾದ ಸರೋಜಾ ಆರಾಧ್ಯ, ಪುಷ್ಪಹೇಮಣ್ಣಾ,  ಶಿಲ್ಪಾ ಲೋಕೇಶ್,  ನಂದಿನಿ ಸುಬ್ಬಯ್ಯ  ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ…

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.