
ಮಡಿಕೇರಿ ಫೆ.12 NEWS DESK : ಬಾಳುಗೋಡು ಕೊಡವ ಸಮಾಜದ ಮೈದಾನ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಬಾಳುಗೋಡು ಕೊಡವ ಸಮಾಜ ಇದೇ ರೀತಿ ಕಾರ್ಯನಿರ್ವಹಿಸುತ್ತ ಮುಂದಿನ ದಿನಗಳಲ್ಲಿ ಸಮಾಜದ ಯುವಕರಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಮೈದಾನದ ಅಭಿವೃದ್ಧಿ ಕೈಗೊಂಡಿರುವುದಾಗಿ ತಿಳಿಸಿದರು. ಸಮಾಜ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳವಂತೆ ಸಲಹೆ ನೀಡಿದರು. ಗುತ್ತಿಗೆದಾರರಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಇದೇ ಸಂದರ್ಭ ಸೂಚಿಸಿದರು. ಸಮಾಜದ ಪ್ರಮುಖರ ಕೋರಿಕೆ ಮೇರೆಗೆ ಸಮಾಜದ ಮೈದಾನ ಅಭಿವೃದ್ಧಿಗೆ ಈಗ ವಿಶೇಷ ಅನುದಾನ ಬಿಡುಗಡೆ ಮಾಡಿದ್ದು, ಕೊಡವ ಸಮಾಜದ ಅಭಿವೃದ್ಧಿ ಕಾಮಗಾರಿಗಳಿಗೆ ಈ ಹಿಂದಿನಿಂದಲೂ ಅನೇಕ ಅನುದಾನಗಳನ್ನು ನೀಡುತ್ತಾ ಬಂದಿರುವುದಾಗಿ ಸಮಾಜದ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿದರು. ಈ ಸಂದರ್ಭ ವಿಧಾನಪರಿಷತ್ ಸದಸ್ಯ ಸುಜಾಕುಶಾಲಪ್ಪ, ಬಾಳುಗೋಡು ಕೊಡವ ಸಮಾಜ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.










