
ಮಡಿಕೇರಿ ಫೆ.12 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಮೊಗರಗಲ್ಲಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಅಂಗನವಾಡಿಗಳ ಮಹತ್ವವನ್ನು ಪ್ರಸ್ತಾಪಿಸಿದರು. ಸರಕಾರವು ಪುಟಾಣಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವಂತೆ ಇಂದು ಅಂಗನವಾಡಿಗಳನ್ನು ತೆರೆಯುತ್ತಿದೆ. ವಿದ್ಯಾಭ್ಯಾಸದ ಮೊದಲನೇ ಹಂತವಾದ ಅಂಗನವಾಡಿ ಕೇಂದ್ರಗಳು ಮಕ್ಕಳಲ್ಲಿ ವಿದ್ಯಾಭ್ಯಾಸದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಅಂಗನವಾಡಿ ಮೇಲ್ವಿಚಾರಕರು ಕಾರ್ಯನಿರ್ವಹಿಸಬೇಕಾಗಿದೆ ಎಂದರು. ನಿಗದಿತ ಸಮಯದೊಳಗೆ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಯನ್ನು ಸಂದರ್ಭ ಗುತ್ತಿಗೆದಾರರಿಗೆ ಸೂಚಿಸಿದರು. ಪುರಸಭಾ ಅಧ್ಯಕ್ಷರು, ಪುರಸಭಾ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಟೌನ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.









