Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
  • *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
  • *ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.23 ರಂದು ಮಡಿಕೇರಿಯಲ್ಲಿ ರೋಟರಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.23 ರಂದು ಮಡಿಕೇರಿಯಲ್ಲಿ ರೋಟರಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿ* 

ಫೆಬ್ರವರಿ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.19 NEWS DESK : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಬಾಗಿತ್ವದಲ್ಲಿ,  ಫೆ.23 ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ರೋಟರಿ ಜಿಲ್ಲೆ 3181 ಗೆ ಸೇರಿದ ರೋಟರಿ ಕ್ಲಬ್ ತಂಡಗಳ ನಡುವೆ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಮಧುಸೂದನ್, ಫೆ.23 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಇದೇ ಮೊದಲ ಬಾರಿಗೆ ರೋಟರಿ ಜಿಲ್ಲೆ 3181 ನ ರೋಟರಿ ಸದಸ್ಯರಿಗಾಗಿ ಕಬ್ಬಡಿ ಪಂದ್ಯಾವಳಿ ಆಯೋಜಿಸಲಾಗಿದೆ. ಇದೇ ಸಂದಭ೯ ಮಿಸ್ಟಿ ಹಿಲ್ಸ್ ವತಿಯಿಂದ ರೆಡ್ ಕ್ರಾಸ್ ಕೊಡಗು ಮತ್ತು ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಸ್ಥೆಗಳ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು. ರೋಟರಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾವಳಿ ಸಮಿತಿ ಅಧ್ಯಕ್ಷ ಜಯಂತ್ ಪೂಜಾರಿ ಮಾಹಿತಿ ನೀಡಿ, ಫೆ.23 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಡ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ ದೊರಕಲಿದೆ.ಇದೇ ಮೊದಲ ಬಾರಿಗೆ ರೋಟರಿ ಜಿಲ್ಲೆ 3181 ನಿಂದ ಕಬಡ್ಡಿ ಪಂದ್ಯಾವಳಿಆಯೋಜಿತವಾಗಿದ್ದು, ಈ ಮೂಲಕ ರೋಟರಿ ಸಂಸ್ಥೆಯ ಸದಸ್ಯರಲ್ಲಿ ಗ್ರಾಮೀಣ ಕ್ರೀಡೆಯಾದ ಕಬಡ್ಡಿ ಕ್ರೀಡೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.  ಮೊದಲ ವಷ೯ದ ಪಂದ್ಯಾಟದಲ್ಲಿ ಮಡಿಕೇರಿ, ಶನಿವಾರಸಂತೆ, ಸೋಮವಾರಪೇಟೆ, ಗೋಣಿಕೊಪ್ಪ,ವೀರಾಜಪೇಟೆ, ಆಲೂರು ಸಿದ್ದಾಪುರ, ಪಿರಿಯಾಪಟ್ಟಣ, ಹುಣಸೂರು, ಮೈಸೂರು, ಪುತ್ತೂರು,ಮಂಗಳೂರು, ಸುಳ್ಳ್ಯಾ ಸೇರಿದಂತೆ ವಿವಿಧ ರೋಟರಿ ಸಂಸ್ಥೆಗಳ 15 ತಂಡಗಳು ಪಾಲ್ಗೊಳ್ಳುತ್ತಿದೆ. ಪೈಪೋಟಿಗಿಂತ ಮನೋರಂಜನೆ ಮತ್ತು ಕ್ರೀಡಾಸ್ಪೂತಿ೯ಗೆ ಆದ್ಯತೆಯನ್ನು ನೀಡಲಾಗಿದೆ ಎಂದೂ ಜಯಂತ್ ತಿಳಿಸಿದರು. ರೋಟರಿ ಜಿಲ್ಲಾ ಮಟ್ಟದ ಮಡ್ ಕಬಡ್ಡಿ ಪಂದ್ಯಾವಳಿಯ ಪ್ರಥಮ ಬಹುಮಾನ ವಿಜೇತರಿಗೆ 25 ಸಾವಿರ ರು. ನಗದು, ದ್ವಿತೀಯ ಬಹುಮಾನವಾಗಿ 15 ಸಾವಿರ ರು ನಗದು ಮತ್ತು ತೖತೀಯ ಮತ್ತು ಚತುರ್ಥ ಬಹುಮಾನ ವಾಗಿ ತಲಾ 8000 ಸಾವಿರ ರು. ನಗದು ಹಾಗೂ ವಿಜೇತರಿಗೆ ಆಕಷ೯ಕ ಟ್ರೋಫಿ ನೀಡಲಾಗುತ್ತದೆ. ಎಂದು ಜಯಂತ್ ಪೂಜಾರಿ ಮಾಹಿತಿ ನೀಡಿದರು. ಕನಾ೯ಟಕ ಆಮೆಚೂರ್ ಕಬಡ್ಡಿ ಅಸೋಸಿಯೇಷನ್ ನ ನುರಿತ ತಂತ್ರಜ್ಞರು, ತೀಪು೯ಗಾರರು ರೋಟರಿ ಕಬಡ್ಡಿ ಪಂದ್ಯಾವಳಿಗೆ ಸಹಕಾರ ನೀಡುತ್ತಿದ್ದು ಪಂದ್ಯಾವಳಿಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಎಲ್ಲಾ ರೀತಿಯ ಸೌಕಯ೯ ಕಲ್ಪಿಸಲಾಗಿದೆ. ಅಂದಾಜು 4 ಲಕ್ಷ ರು. ವೆಚ್ಚದಲ್ಲಿ ದಾನಿಗಳ ಸಹಕಾರದಿಂದ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗುತ್ತಿದೆ ಎಂದು ಕಬ್ಬಡಿ ಪಂದ್ಯಾಟದ ಸಂಚಾಲಕರಾದ ಕಪಿಲ್ ತಿಳಿಸಿದರು. ಫೆ.23 ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಕಬಡ್ಡಿ ಪಂದ್ಯಾವಳಿಯ ಉದ್ಘಾಟನಾ ಕಾಯ೯ಕ್ರಮದಲ್ಲಿ ರೋಟರಿ ಜಿಲ್ಲೆ 3181 ನ ಗವನ೯ರ್ ವಿಕ್ರಂದತ್ತ, ಶಾಸಕರುಗಳಾದ ಎ.ಎಸ್. ಪೊನ್ನಣ್ಣ, ಡಾ.ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ, ಪೊಲೀಸ್ ವರಿಷ್ಟಾಧಿಕಾರಿ ರಾಮರಾಜನ್, ನಗರಸಭಾ ಪೌರಾಯುಕ್ತ ರಮೇಶ್, ಆಮೇಚೂರ್ ಕಬಡ್ಡಿ ಅಸೋಸಿಯೇಷನ್ ಸೆಕ್ರೆಟರಿ ಹೊಸೋಕ್ಲು ಉತ್ತಪ್ಪ, ರೋಟರಿ ವಲಯ 6 ರ ಸಹಾಯಕ ಗವನ೯ರ್ ದೇವಣಿರ ಕಿರಣ್, ವಲಯ ಸೇನಾನಿ ಅನಿತಾ ಪೂವಯ್ಯ ಪಾಲ್ಗೊಳ್ಳಲಿದ್ದಾರೆ. ಸಂಜೆ 7 ಗಂಟೆಗೆ ಮಡಿಕೇರಿಯ ರೋಟರಿ ಸಭಾಂಗಣದಲ್ಲಿ ರೋಟರಿ ಜಿಲ್ಲಾ ಗವನ೯ರ್ ವಿಕ್ರಂದತ್ತ ಅವರು ವಿಜೇತ ತಂಡಗಳಗೆ ಬಹುಮಾನ ವಿತರಿಸಲಿದ್ದಾರೆ ಎಂದೂ ಕಪಿಲ್ ಹೇಳಿದರು.  ರೋಟರಿ ಮಾಜಿ ಸಹಾಯಕ ಗವನ೯ರ್ ಅನಿಲ್ ಹೆಚ್.ಟಿ. ಮಾತನಾಡಿ, 20 ವಷ೯ಗಳನ್ನು ಪೂರೈಸಿರುವ ರೋಟರಿ ಮಿಸ್ಟಿ ಹಿಲ್ಸ್ ಈವರೆಗೂ 12 ಜಿಲ್ಲಾ ಕಾಯ೯ಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದೆ. ಇದೇ ಮೊದಲ ಬಾರಿಗೆ ಕಬ್ಬಡಿ ಪಂದ್ಯಾವಳಿ ಮೂಲಕ ಕಬ್ಬಡಿಯಲ್ಲಿ ರೋಟರಿ ಸದಸ್ಯರೂ ಪಾಲ್ಗೊಂಡು ಆಸಕ್ತಿ ಬೆಳೆಸಿಕೊಳ್ಳುವಂತೆ ಮಾಡುತ್ತಿದೆ. 86 ರೋಟರಿ ಕ್ಲಬ್ ಗಳಿರುವ ರೋಟರಿ ಜಿಲ್ಲೆ 3181 ನಲ್ಲಿ ಮೊದಲ ಬಾರಿಗೆ ಕಬಡ್ಡಿ ಪಂದ್ಯಾಟ ಪ್ರಾರಂಭಿಸಿರುವ ದಾಖಲೆಯೂ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನದ್ದಾಗಿದೆ ಎಂದರು. ರೋಟರಿ ಕಬಡ್ಡಿ ಪಂದ್ಯಾಟದ ವೀಕ್ಷಣೆಗೆ ಸಾವ೯ಜನಿಕರಿಗೂ ಮುಕ್ತ ಅವಕಾಶ ಇದೆ ಎಂದೂ ಅನಿಲ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನ ಕಬಡ್ಡಿ ಪಂದ್ಯಾವಳಿ ಆಯೋಜಕ ಸಮಿತಿ ಪ್ರಮುಖರಾದ ಮೋಹನ್ ಪ್ರಭು, ಪ್ರಕಾಶ್ ಪೂವಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, ಆ.16 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಬೆಂಗಳೂರಿನ…

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 2026

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.