
ಮಡಿಕೇರಿ ಫೆ.21 NEWS DESK : ಕನ್ನಡದ ಹೆಸರಾಂತ ಸಾಹಿತಿಗಳಾಗಿದ್ದ, ಮಡಿಕೇರಿಯ ಜೂನಿಯರ್ ಕಾಲೇಜಿನಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಪಂಜೆ ಮಂಗೇಶರಾಯರ ನೆನಪನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅವರು ಕತ೯ವ್ಯ ಸಲ್ಲಿಸಿದ್ದ ಶಾಲೆಯ ಕೊಠಡಿಯೊಂದನ್ನು ಸ್ಮಾರಕವಾಗಿಸಿ, ಶಾಲೆಯಲ್ಲಿ ಪಂಜೆಯವರ ಪುತ್ತಳಿ ಸ್ಥಾಪಿಸಬೇಕೆಂದು ಶಕ್ತಿ ಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್ ಸಲಹೆ ನೀಡಿದ್ದಾರೆ. ನಗರದ ಸರಕಾರಿ ಪ್ರಥಮ ದಜೆ೯ ಕಾಲೇಜಿನ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ಕೊಡಗು ಘಟಕದಿಂದ ಆಯೋಜಿತ ಪಂಜೆ ಮಂಗೇಶರಾಯರ 150 ನೇ ವಷಾ೯ಚರಣೆ ಸಂದಭ೯ದ ಸಾಂಸ್ಕೃತಿಕ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಚಿದ್ವಿಲಾಸ್, ಮಡಿಕೇರಿಯ ಅಂದಿನ ಸೆಂಟ್ರಲ್ ಹೈಸ್ಕೂಲಿನಲ್ಲಿ ಪಂಜೆ ಮಂಗೇಶರಾಯರು ಮುಖ್ಯೋಪಾಧ್ಯಾಯರಾಗಿದ್ದರು ಎಂಬುದೇ ಕೊಡಗಿಗೆ ಅತ್ಯಂತ ಹೆಮ್ಮೆಯ ವಿಚಾರವಾಗಿದೆ. ಹೀಗಿರುವಾಗ ಪಂಜೆ ಮಂಗೇಶರಾಯರ ಸಾಹಿತ್ಯ ಲೋಕದ ಬಗ್ಗೆ ವಿದ್ಯಾಥಿ೯ಗಳಿಗೆ ಮತ್ತಷ್ಟು ರೀತಿಯಲ್ಲಿ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಅವರು ಪಾಠ ಮಾಡುತ್ತಿದ್ದ ತರಗತಿಯನ್ನು ಪಂಜೆಯವರ ಹೆಸರಿನಲ್ಲಿ ಗುರುತಿಸಿ, ಉತ್ತಮ ಕೖತಿಗಳ ಗ್ರಂಥಾಲಯವನ್ನು ಸ್ಥಾಪಿಸಬೇಕು. ಆ ಮೂಲಕ ಸಾಹಿತ್ಯ ಪ್ರೇಮಿಗಳ ಮನದಲ್ಲಿ ಪಂಜೆಯವರ ನೆನಪನ್ನು ಚಿರಸ್ಥಾತಿಯಾಗಿಸಬೇಕೆಂದರು. ಅಂತೆಯೇ, ಜೂನಿಯರ್ ಕಾಲೇಜಿನ ಆವರಣದಲ್ಲಿ ಪಂಜೆ ಮಂಗೇಶರಾಯರ ಪುತ್ತಳಿಯನ್ನು ಸ್ಫಾಪಿಸುವ ಮೂಲಕ ಅವರನ್ನು ಸದಾ ಸ್ಮರಿಸುವಂತಾಗಬೇಕೆಂದೂ ಚಿದ್ವಿಲಾಸ್ ಅಭಿಪ್ರಾಯಪಟ್ಟರು. ಸಾಂಸ್ಕೃತಿಕ ಕಾಯ೯ಕ್ರಮಗಳನ್ನು ಡೊಳ್ಳು ಬಾರಿಸಿ ಉದ್ಠಾಟಿಸಿದ ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ, ಮಾತನಾಡಿ, ಕವಿಶಿಷ್ಯ ಎಂಬ ಹೆಸರಿನಿಂದ ಅನೇಕ ಸಾಹಿತ್ಯ ಲೇಖನ, ಕವಿತೆಗಳನ್ನು ಬರೆಯುವ ಮೂಲಕ ಕವಿಋಷಿಯಾಗಿದ್ದ ಪಂಜೆ ಮಂಗೇಶರಾಯರು ನಿಜವಾದ ಅಥ೯ಧಲ್ಲಿ ಕವಿಗುರುವಿನಂತೆ ಇದ್ದರು. ಕೊಡಗಿನ ಕುರಿತಾದ ಎಲ್ಲಿ ಭೂರಮೆಯಂಥ ಪದ್ಯದ ಮೂಲಕ ಇಡೀ ಜಗತ್ತೇ ಕೊಡಗನ್ನು ಹಾಡಿನ ಮೂಲಕ ಗುರುತಿಸುವಂತೆ ಮಾಡಿದ್ದರು. ಕೇರಳ ಪ್ರವಾಸೋದ್ಯಮ ಇಲಾಖೆಯು ದೇವರ ನಾಡು ಎಂದು ಬಿಂಬಿಸಿಕೊಳ್ಳುತ್ತಿದೆಯಾದರೂ 1923 ರಲ್ಲಿಯೇ ಪಂಜೆಯವರು ಕೊಡಗನ್ನು ಭೂರಮೆ ದೇವನ ಸನ್ನಿಧಿ ಬಯಸಿ ಭಿಮ್ಮನೆ ಬಂದ ನಾಡೆಂದು ವಣಿ೯ಸಿದ್ದರು ಎಂದು ಹೇಳಿದರು. ಮಡಿಕೇರಿಗೆ ಮುಖ್ಯೋಪಾಧ್ಯಾಯರಾಗಿ ಕತ೯ವ್ಯಕ್ಕೆ ಬಂದ ಮೊದಲ ಭಾರತೀಯ ಮುಖ್ಯೋಪಾಧ್ಯಾಯರಾಗಿದ್ದ ಪಂಜೆಯವರಿಗೆ ನಿರೀಕ್ಷಿತ ರೀತಿಯಲ್ಲಿ ಸ್ವಾಗತ ದೊರಕಲಿಲ್ಲ. ಯುರೋಪಿಯನ್ ಮುಖ್ಯೋಪಾದ್ಯಾಯರನ್ನೇ ಬಯಸಿದ್ದ ಶಿಕ್ಷಖ ವೖಂದ ಪಂಜೆಯವರನ್ನು ಹತ್ತಿರಕ್ಕೆ ಸೇರಿಸಿರಲಿಲ್ಲ. ಹೀಗಿದ್ದರೂ ಬೇಸರಿಸಿಕೊಳ್ಳದೇ, ಕಾಲಕ್ರಮೇಣ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿ ಕೊಡಗಿನ ಜನತೆ ಇಂದಿಗೂ ತಮ್ಮ ನಾಡಗೀತೆಯಂತೆ ಸ್ವೀಕರಿಸಿರುವ ಹುತ್ತರಿ ಹಾಡನ್ನು ಪಂಜೆಯವರು ಬರೆದರು ಎಂದೂ ಅನಿಲ್ ಸ್ಮರಿಸಿಕೊಂಡರು. ಕನ್ನಡ ಸಾಹಿತ್ಯ ಪರಿಷತ್ ನ ಕೊಡಗು ಘಟಕದ ಜಿಲ್ಲಾ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಮಡಿಕೇರಿಯ ಜ್ಯೂನಿಯರ್ ಕಾಲೇಜು ರಸ್ತೆಗೆ ಮತ್ತೊಮ್ಮೆ ಕಸಾಪ ವತಿಯಿಂದ ಮಂಜೆ ಮಂಗೇಶರಾಯರ ಹೆಸರಿನ ನಾಮಫಲಕವನ್ನು ಲೋಕಾಪ೯ಣೆ ಮಾಡಲಾಗಿದ್ದು ಅಂತೆಯೇ ವಿವಿಧ ಶಾಲಾಕಾಲೇಜುಗಳಿಗೆ ಪಂಜೆ ಮಂಗೇಶರಾಯರ ಭಾವಚಿತ್ರವನ್ನು ಕೊಡುಗೆಯಾಗಿ ನೀಡಿಲಾಗಿದೆ ಎಂದರು. ಈ ಮೊದಲು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರಕಟಿಸಲಾಗಿದ್ದ ಪಂಜೆ ಮಂಗೇಶರಾಯರ ಕೖತಿಗಳನ್ನು ಮರುಮುದ್ರಣ ಮಾಡುವಂತೆಯೂ ರಮೇಶ್ ಕಸಾಪಕ್ಕೆ ಸಲಹೆ ನೀಡಿದರು. ಕಸಾಪ ಜಿಲ್ಲಾ ಅಧ್ಯಕ್ಷ ಎಂ.ಪಿ. ಕೇಶವಕಾಮತ್, ಪ್ರಧಾನ ಕಾಯ೯ದಶಿ೯ ಎಸ್.ಐ. ಮುನೀರ್ ಅಹಮ್ಮದ್, ಗೌರವ ಕಾಯ೯ದಶಿ೯ ಪುದಿಯನೆರವನ ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಸಹಕಾಯ೯ದಶಿ೯ ಜಲಜಾಶೇಖರ್, ಸಹಕಾಯ೯ದಶಿ೯ ಎ.ವಿ. ಮಂಜುನಾಥ್, ಸಂಘಟನಾ ಕಾಯ೯ದಶಿ೯ಗಳಾದ ಆರ್. ಪಿ. ಚಂದ್ರಶೇಖರ್, ಕೆ.ಎನ್. ದೇವರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ, ಪ್ರೌಡಶಾಲಾ ಅಭಿವೖದ್ದಿ ಸಮಿತಿ ಅಧ್ಯಕ್ಷ ಜಿ.ಡಿ.ಶಿವಶಂಕರ್, ಪ್ರಾಥಮಿಕ ಶಾಲಾ ಅಭಿವೖದ್ದಿ ಸಮಿತಿ ಅಧ್ಯಕ್ಷ ಎನ್ ಜಗದೀಶ್, ಸಕಾ೯ರಿ ಪ್ರಥಮ ದಜೆ೯ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ವರ ಪ್ರಸನ್ನ, ಪ. ಪೂ ಕಾಲೇಜಿು ಪ್ರಾಂಶುಪಾಲ ಪಿ.ಆರ್. ವಿಜಯ, ಮಡಿಕೇರಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ, ಸಕಾ೯ರಿ ಪ್ರೌಡಶಾಲೆಯ ಮುಖ್ಯೋಪಾದ್ಯಾಯಿನಿ ಕೆ.ವಿ. ಶಶಿಕಲಾ, ಸಕಾ೯ರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಹೆಚ್.ಕೆ. ಸುಶೀಲಾ, ವೇದಿಕೆಯಲ್ಲಿದ್ದರು. ಡಾ.ಕಾವೇರಿ ಪ್ರಕಾಶ್ ನಿರೂಪಿಸಿ, ಮೆ.ನಾ.ವೆಂಕಟನಾಯಕ ಸ್ವಾಗತಿಸಿದ ಕಾಯ೯ಕ್ರಮವನ್ನು ಈರಮಂಡ ಹರಿಣಿ, ಚೊಕ್ಕಾಡಿ ಪ್ರೇಮಾ ರಾಘವಯ್ಯ ಪಿ.ಎಫ್. ಸಬಾಸ್ಟಿನ್ ನಿವ೯ಹಿಸಿದರು. ಪಂಜೆ ಮಂಗೇಶರಾಯರ ಪ್ರಸಿದ್ದ ಹಾಡುಗಳನ್ನು ಆಧರಿಸಿ ವಿವಿಧ ಶಾಲಾ ವಿದ್ಯಾಥಿ೯ಗಳಿಂದ ವೈವಿಧ್ಯಮಯ ಸಾಂಸ್ಕೖತಿಕ ಕಾಯ೯ಕ್ರಮಗಳು ಮನಸೂರಗೊಂಡವು.









