
ಮಡಿಕೇರಿ ಫೆ.24 NEWS DESK : ಎನ್ಐಎಂಎ ಕೊಡಗು (ನೀಮಾ) ಇದರ 25ನೇ ವರ್ಷದ ಆಚರಣೆಯ ಸಲುವಾಗಿ ಮೇಕೇರಿ ಗ್ರಾಮದ ಶ್ರೀ ಸತ್ಯಸಾಯಿ ಮಂದಿರದಲ್ಲಿ ಉಚಿತ ಆಯುರ್ವೇದ ಹಾಗೂ ದಂತ ತಪಾಸಣಾ ಶಿಬಿರ ನಡೆಯಿತು. ಕೊಡಗು ಮಹಿಳಾ ಎನ್ಐಎಮ್ಎ ಘಟಕದ ಅಧ್ಯಕ್ಷೆ ಡಾ. ಶೈಲಜಾ ರಾಜೇಂದ್ರ, ಕಾರ್ಯದರ್ಶಿ ಡಾ.ಸೌಮ್ಯ ಗಣರಾಜ್, ಮಡಿಕೇರಿ ತಾಲೂಕು ಮುಖ್ಯಸ್ಥರಾದ ಡಾ.ಸಾವಿತ್ರಿ ರಾಜಗೋಪಾಲ್ ತಪಾಸಣೆಯನ್ನು ಉಚಿತವಾಗಿ ನಡೆಸಿಕೊಟ್ಟರು. ದಂತವೈದ್ಯೆ ಶಾಂಭವಿ ದಂತ ಚಿಕಿತ್ಸಾಲಯದ ವೈದ್ಯರಾದ ಡಾ.ಶ್ರೇಯಾ ರಾಜಗೋಪಾಲ್ ಭಾಗವಹಿಸಿದ್ದರು. ಶ್ರೀ ಸತ್ಯಸಾಯಿ ಮಂದಿರದ ಮುಖ್ಯಸ್ಥ ಗಜರಾಜ ನಾಯ್ಡು, ನೀಮಾ ಕೊಡಗು ಅಧ್ಯಕ್ಷ ಡಾ. ರಾಜಾರಾಮ್ ಉಪಸ್ಥಿತರಿದ್ದರು. ಮೇಕೇರಿ ಗ್ರಾಮಸ್ಥರು, ವಿದ್ಯಾರ್ಥಿಗಳು, ವತ೯ಕರು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.









