
ಮಡಿಕೇರಿ ಮಾ.1 NEWS DESK : ವಿರಾಜಪೇಟೆ ತಾಲೂಕಿನ ಅರಮೇರಿಯಲ್ಲಿ, ಜೇನು ಹುಳ ಕಡಿತಕ್ಕೆ ಬಲಿಯಾಗಿ ಸಾವಿಗಿಡದ ಲೋಹಿತ್ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾoತ್ವನ ಹೇಳಿ ಸಹಾಯ ಹಸ್ತ ನೀಡಿದರು. ಈ ಸಂದರ್ಭ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣ್ಣಚ್ಚ, ಪುರಸಭೆ ಸದಸ್ಯರಾದ ರಾಫಿ, ಮತೀನ್, ಉದಯ್ ಮಾದಪ್ಪ ಹಾಗೂ ಪ್ರಮುಖರು ಹಾಜರಿದ್ದರು.









