

ಸೋಮವಾರಪೇಟೆ ಮಾ.3 NEWS DESK : ಮಹಾಶಿವರಾತ್ರಿ ಅಂಗವಾಗಿ ತಾಲ್ಲೂಕು ಕದಳಿ ವೇದಿಕೆ ವತಿಯಿಂದ ವಚನ ಗಾಯನ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಕದಳಿ ಅಧ್ಯಕ್ಷೆ ಉಷಾರಾಣಿ, ವಚನಗಾಯನದಿಂದಾಗಿ ಮನತೃಪ್ತಿ ಹಾಗೂ ಆತ್ಮ ತೃಪ್ತಿ ಸಿಗುತ್ತದೆ. ಪ್ರತಿಯೊಬ್ಬರು ಪ್ರತಿದಿನವೂ ತಪ್ಪದೇ ದಿನಕ್ಕೊಂದು ವಚನಗಳನ್ನು ಹೇಳುವ ಮೂಲಕ ವಚನ ಜಾಗೃತಿ ಮೂಡಿಸಬೇಕೆಂದು ಕರೆಕೊಟ್ಟರು. ವಿವಿಧ ಮಹಿಳಾ ತಂಡಗಳಿಂದ ವಚನ ಗಾಯನ ಹಾಗೂ ಶಿವಸ್ತ್ರೋತ್ರಗಳು ನೆರವೇರಿದವು. ಸೋಮವಾರಪೇಟೆ ತಾಲ್ಲೂಕು ಕದಳಿ ವೇದಿಕೆ ಅಧ್ಯಕ್ಷೆ ಉಷಾರಾಣಿ ಗುರುಪ್ರಸಾದ್, ಪ್ರಮುಖರಾದ ಗೀತಾರಾಜು, ಜಲಜಾ ವಿಜಯಕುಮಾರ್, ನಾಗಮಣಿ ಯುವರಾಜ್, ಕವಿತಾ ಸಂಜಯ್, ಸರಿತಾ ಮಲ್ಲಿಕಾರ್ಜುನ್, ದಿವ್ಯ ದಿವಾಕರ್, ಜಗದಾಂಬ ಗುರುಪ್ರಸಾದ್, ಯಶೋಧ ನಾಗೇಶ್, ದೀಪ್ತಿ ಹಾಗೂ ತೃಪ್ತಿ ಇದ್ದರು.









