
ಮಡಿಕೇರಿ ಮಾ.5 NEWS DESK : ನಿಟ್ಟೂರು ಗ್ರಾ.ಪಂ ನೂತನ ಉಪಾಧ್ಯಕ್ಷರಾಗಿ ಕಾಟಿಮಾಡ ಶರೀನ್ ಮುತ್ತಣ್ಣ ಅವಿರೋಧ ಆಯ್ಕೆಯಾಗಿದ್ದಾರೆ.ನಿಟ್ಟೂರು ಗ್ರಾ.ಪ0 ಉಪಾಧ್ಯಕ್ಷರಾಗಿದ್ದ ಚಕ್ಕೇರ ಸೂರ್ಯ ಅಯ್ಯಪ್ಪ ಅಂತರಿಕ ಒಳ ಒಪ್ಪಂದಂತೆ ಕಾಟಿಮಾಡ ಶರೀನ್ ಮುತ್ತಣ್ಣನವರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಉಪಾಧ್ಯಕ್ಷರ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದ್ದರು. ಇಂದು ಚುನಾವಣಾ ಅಧಿಕಾರಿಗಳಾದ ತಾಲ್ಲೂಕು ಮೀನುಗಾರಿಗೆ ಇಲಾಖೆಯ ಸಹಾಯ ನಿರ್ದೇಶಕ ಸಚಿನ್ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರೀಯೆಯಲ್ಲಿ ಕಾಟಿಮಾಡ ಶರೀನ್ ಮುತ್ತಣ್ಣ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾದರು. ನಂತರ ನಡೆದ ಸರಳ ಸಮಾರಂಭದಲ್ಲಿ ನಿಕಟಪೂರ್ವ ಉಪಾಧ್ಯಕ್ಷ ಚಕ್ಕೇರ ಅಯ್ಯಪ್ಪ ಅವರ ಅಧಿಕಾರ ಅವಧಿಯಲ್ಲಿ ಮಾಡಿದ ಕೆಲಸ ಕಾರ್ಯಗಳನ್ನು ಶ್ಲಾಘಿಸಿ ನೂತನ ಉಪಾಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ ಅವರನ್ನು ಅಭಿನಂದಿಸಿದರು. ಗ್ರಾ.ಪಂ ಅದ್ಯಕ್ಷ ಅಮ್ಮಣಿ ಬೆಂಡೆಕುತ್ತಿ, ಸದಸ್ಯರುಗಳಾದ ಪಡಿಞರಂಡ ಕವಿತಾಪ್ರಭು, ರಾಜು, ಅಮ್ಮಯ್ಯ, ಸುಮತಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುರೇಶ್, ಪ್ರಮುಖರಾದ ಕೊಟ್ಟಂಗಡ ಮಂಜುನಾಥ್, ಮಾಚಂಗಡ ವಿಕಾಸ್, ಪೊನ್ನಿಮಾಡ ಸಂತೋಷ್, ಅಳಮೇಂಡ ಸೋಮಯ್ಯ, ಚಕ್ಕೇರ ಬೋಪಣ್ಣ ಮುಂತಾದವರು ಹಾಜರಿದ್ದರು.









