Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
  • *ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಸದರ ವಿರುದ್ಧ ಆಧಾರ ರಹಿತ ಆರೋಪ ಮಾಡಿದರೆ ಕಾನೂನು ಹೋರಾಟ : ವಿರಾಜಪೇಟೆ ಬಿಜೆಪಿ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಸದರ ವಿರುದ್ಧ ಆಧಾರ ರಹಿತ ಆರೋಪ ಮಾಡಿದರೆ ಕಾನೂನು ಹೋರಾಟ : ವಿರಾಜಪೇಟೆ ಬಿಜೆಪಿ ಎಚ್ಚರಿಕೆ*

ಮಾರ್ಚ್ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.5 NEWS DESK : ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಮತ್ತು ಪಕ್ಷದಲ್ಲಿ ಭದ್ರನೆಲೆ ಕಂಡುಕೊಳ್ಳಲು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದರ ವಿರುದ್ಧ ಜಿಲ್ಲಾ ಕಾಂಗ್ರೆಸ್ ವಕ್ತಾರರೊಬ್ಬರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು, ಇವರ ವಿರುದ್ಧ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೈಸೂರು- ಕೊಡಗು ಕ್ಷೇತ್ರದ ಜನತೆಯ ಆಶೀರ್ವಾದದಿಂದ ಸಂಸದರಾಗಿ ಆಯ್ಕೆಯಾಗಿರುವ ಯದುವೀರ್ ಒಡೆಯರ್ ಅವರ ಕಾರ್ಯವೈಖರಿಯ ಕುರಿತು ವಿಶ್ಲೇಶಿಸುವ ನೈತಿಕತೆ ಕಾಂಗ್ರೆಸ್ ವಕ್ತಾರರಿಗೆ ಇಲ್ಲ. ಕಾಂಗ್ರೆಸ್ ನಾಯಕರನ್ನು ಮೆಚ್ಚಿಸುವುದಕ್ಕೋಸ್ಕರ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಜನರಿಗೆ ತಪ್ಪು ಸಂದೇಶ ರವಾನಿಸಲಾಗುತ್ತಿದೆ. ಅಲ್ಲದೆ ಅತ್ಯಂತ ಗೌರವಯುತ ಸ್ಥಾನದಲ್ಲಿರುವ ಸಂಸದರ ಕುರಿತು ಅಪಪ್ರಚಾರ ಮಾಡಲಾಗುತ್ತಿದ್ದು, ಕಾಂಗ್ರೆಸ್ ವಕ್ತಾರನೆಂದು ಹೇಳಿಕೊಳ್ಳುತ್ತಿರುವ ಈ ವ್ಯಕ್ತಿಯ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಜಿಲ್ಲೆ ಮಾತ್ರವಲ್ಲದೆ ರಾಜ್ಯದ ಇತರೆಡೆಯೂ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಕುರಿತು ಮತ್ತು ಜನರಿಗೆ ರಕ್ಷಣೆ ನೀಡಬೇಕಾದ ಪೊಲೀಸರಿಗೇ ರಕ್ಷಣೆ ಇಲ್ಲದ ಪರಿಸ್ಥಿತಿ ಉದ್ಭವಿಸಿರುವುದನ್ನು ಸಂಸದರು ಉಲ್ಲೇಖಿಸಿರುವುದೇ ತಪ್ಪು ಎನ್ನುವ ರೀತಿಯಲ್ಲಿ ನೀಡಿರುವ ಹೇಳಿಕೆ ಖಂಡನೀಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ವಿವಿಧೆಡೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಪ್ರಕರಣಗಳು ನಡೆಯುತ್ತಲೇ ಇದೆ. ಕೊಡಗು ಜಿಲ್ಲೆಯಲ್ಲೂ ಪೊಲೀಸರು ಸ್ವತಂತ್ರ್ಯವಾಗಿ ಸೇವೆ ಸಲ್ಲಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ. ಕಾಂಗ್ರೆಸ್ ಕಾರ್ಯಕರ್ತರು ಕಾನೂನನ್ನು ಕೈಗೆ ತೆಗೆದುಕೊಳ್ಳುವ ಬೆಳವಣಿಗೆಗಳು ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರಕರಣ ದಾಖಲಿಸಿಕೊಂಡರೆ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಯತ್ನ ಮಾಡಲಾಗುತ್ತಿದೆ ಎಂದು ರಾಕೇಶ್ ದೇವಯ್ಯ ಆರೋಪಿಸಿದ್ದಾರೆ. ಲಕ್ಷಾಂತರ ಜನರ ಪ್ರೀತಿ ಗಳಿಸಿ ಆಯ್ಕೆಯಾದ ಸಂಸದರ ಕುರಿತು ಪ್ರಚಾರಕ್ಕಾಗಿ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ, ಅಭಿವೃದ್ಧಿಯ ಹಿನ್ನಡೆ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ತರುತ್ತಿರುವವರ ವಿರುದ್ಧ ಕಾಂಗ್ರೆಸ್ ವಕ್ತಾರರು ಮೊದಲು ಮಾತನಾಡಲಿ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕೊಡಗು ಜಿಲ್ಲೆಗೆ ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆ ಏನು ಎನ್ನುವ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಅವರು ಒತ್ತಾಯಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಅನುಷ್ಠಾನಗೊಳಿಸಿದ ಕೊಡಗು ವಿಶ್ವ ವಿದ್ಯಾನಿಲಯವನ್ನು ಮುಚ್ಚುವ ತಪ್ಪು ನಿರ್ಧಾರದ ಮೂಲಕ ಜಿಲ್ಲೆಯ ಜನರಿಂದ ಹಾಗೂ ಸ್ವತ: ಕಾಂಗ್ರೆಸ್ಸಿಗರಿಂದಲೇ ರಾಜ್ಯ ಸರ್ಕಾರ ಟೀಕೆಗೆ ಗುರಿಯಾಗಿದೆ. ಇದನ್ನು ಮರೆಮಾಚಲು ಮತ್ತು ಜನರ ಹಾದಿ ತಪ್ಪಿಸಲು ಕಾಂಗ್ರೆಸ್ ವಕ್ತಾರರು ದಕ್ಷ ಆಡಳಿತಗಾರ ಸಂಸದ ಯದುವೀರ್ ಒಡೆಯರ್ ಅವರನ್ನು ಗುರಿಯಾಗಿಸಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇದನ್ನು ಬಿಜೆಪಿ ಎಂದಿಗೂ ಸಹಿಸುವುದಿಲ್ಲ, ಇದೇ ರೀತಿಯ ಹೇಳಿಕೆಗಳನ್ನು ಮುಂದುವರಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಲೋಕಸಭಾ ಸದಸ್ಯರಾಗಿ ಕೇವಲ ಒಂದು ವರ್ಷವನ್ನಷ್ಟೇ ಪೂರೈಸಿರುವ ಯದುವೀರ್ ಅವರ ಅಭಿವೃದ್ಧಿಪರ ಚಿಂತನೆಯ ವೇಗವನ್ನು ಸಹಿಸದ ವಕ್ತಾರರು ಶೂನ್ಯ ಸಾಧನೆಯ ಹೇಳಿಕೆ ನೀಡಿರುವುದು ಹಾಸ್ಯಾಸ್ಪದವಾಗಿದೆ. ಕಳೆದ ಎರಡು ವರ್ಷಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಡಗು ಜಿಲ್ಲೆಗೆ ನೀಡಿದ ಕೊಡುಗೆ ಏನು ಎನ್ನುವುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ರಾಕೇಶ್ ದೇವಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮಾತುಗಳನ್ನಾಡಿ ಅವಮಾನಿಸಿರುವ ವ್ಯಕ್ತಿಯನ್ನು…

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.