
ಪೊನ್ನಂಪೇಟೆ ಮಾ.8 NEWS DESK : ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕದ ಪೊನ್ನಂಪೇಟೆ ತಾಲ್ಲೂಕು ನೂತನ ಪದಾಧಿಕಾರಿಗಳನ್ನು ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನಿರ್ದೇಶನದ ಮೇರಗೆ ಆಯ್ಕೆ ಮಾಡಲಾಗಿದೆ ಎಂದು ತಾಲ್ಲೂಕು ಅಧ್ಯಕ್ಷೆ ಬೊಟ್ಟಂಗಡ ಸುಮನ್ ಸೀತಮ್ಮ ತಿಳಿಸಿದ್ದಾರೆ. ಉಪಾಧ್ಯಕ್ಷರಾಗಿ ಚಂಗುಲಂಡ ಅಜಿತ್ ಅಯ್ಯಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಆರ್.ನಳಿನಿ, ಜಿಲ್ಲಾ ಸಮಿತಿ ಸದಸ್ಯರಾಗಿ ಮಲ್ಲಂಡ ಶೃತಿಯ ಮುದ್ದಪ್ಪ, ಸದಸ್ಯರುಗಳಾಗಿ, ಕೋಟ್ರಂಗಡ ಸಜಿನಿ ಸೋಮಯ್ಯ, ಪಿ.ಹೆಚ್.ಅಲಿಮಾ, ಕೊಟ್ಟಂಗಡ ವಿದ್ಯಾ ಕಾರ್ಯಪ್ಪ, ನೂರೇರ ಜೀವನ್ ಅಯ್ಯಪ್ಪ ಹಾಗೂ ತಿತೀರ ಸ್ವರಾಜ್ ಕುಟ್ಟಪ್ಪ ಅವರನ್ನು ಜಿಲ್ಲಾ ಸಮಿತಿಯ ಅನುಮೋದನೆಯೊಂದಿಗೆ ನೇಮಿಸಲಾಗಿದೆ ಎಂದು ಸುಮನ್ ಸೀತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









