
ಮಡಿಕೇರಿ NEWS DESK ಮಾ.9 : ಕಾಫಿ ಖರೀದಿ ಸಂದರ್ಭ ರಶೀದಿ ನೀಡದೆ ಹಾಗೂ ಮಾರಾಟ ಮಾಡುವವರ ಸಂಪೂರ್ಣ ವಿವರವನ್ನು ಪಡೆದುಕೊಳ್ಳದೆ ವ್ಯವಹಾರ ನಡೆಸಿದಲ್ಲಿ ಮತ್ತು ಕಳ್ಳತನ ಮಾಡಿರುವ ಕಾಫಿಯನ್ನು ಖರೀದಿ ಮಾಡಿರುವುದು ಕಂಡುಬಂದಲ್ಲಿ ಕಾಫಿ ಟ್ರೇಡರ್ಸ್ ಮಾಲೀಕರನ್ನು ನೇರ ಹೊಣೆಗಾರರನ್ನಾಗಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ.









