Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾ ಕೂಟ : ಕ್ರೀಡೆಗಳು ಯಶಸ್ಸಿನ ಮೂಲ : ದೈಹಿಕ ಶಿಕ್ಷಣ ಶಿಕ್ಷಕಿ ಬಿ.ಪ್ರೇಮಾ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾ ಕೂಟ : ಕ್ರೀಡೆಗಳು ಯಶಸ್ಸಿನ ಮೂಲ : ದೈಹಿಕ ಶಿಕ್ಷಣ ಶಿಕ್ಷಕಿ ಬಿ.ಪ್ರೇಮಾ*

ಮಾರ್ಚ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪುತ್ತೂರು ಮಾ.11 NEWS DESK : ಸಮಚಿತ್ತದಿಂದ ನಿರ್ದಿಷ್ಟ ಗುರಿಯನ್ನು ಮುಟ್ಟಲು ಮಾನವನಿಗೆ ದೈಹಿಕ ಸಾಮರ್ಥ್ಯ ಮುಖ್ಯವಾಗಿದೆ. ಈ ದೈಹಿಕ ಸಾಮರ್ಥ್ಯವನ್ನು ಗಳಿಸಿಕೊಳ್ಳಲು ನಿತ್ಯ ಮಿತವಾದ ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ಅಗತ್ಯ ಎಂದು ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಬಿ.ಪ್ರೇಮಾ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾರ್ಷಿಕ ಕ್ರೀಡಾ ಕೂಟದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಶಿಕ್ಷಣವು ಮಾನವನ ಜೀವನವನ್ನು ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ. ಅದರಂತೆಯೇ ಕ್ರೀಡೆಗಳೂ ಸಹ ಯಶಸ್ಸಿನ ದೊಡ್ಡ ಮೂಲವಾಗಿದೆ. ಆದರೆ ಕೇವಲ ಸಂಪತ್ತಿನ ಹಿಂದೆ ಓಡುವ ನಾವು ದೈಹಿಕ ಸಮತೋಲನವೂ ಒಂದು ಸಂಪತ್ತೆಂದು ತಿಳಿದುಕೊಳ್ಳದೇ ಇರುವುದು ವಿಪರ್ಯಾಸ ಎಂದರು. ಶಿಕ್ಷಣದೊಂದಿಗೆ ಕ್ರೀಡೆಗೂ ಸಮಾನ ಮಹತ್ವವನ್ನು ನೀಡುವುದರ ಜತೆಯಲ್ಲಿ ಯುವಜನತೆ ದೇಶದ ಪ್ರಜ್ಞಾವಂತ ನಾಗರಿಕರಾಗುವಂತೆ ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ನಿರಂತರ ಪ್ರೋತ್ಸಾಹ, ಉತ್ತಮ ತರಬೇತಿ ಹಾಗೂ ಉನ್ನತ ಸಾಧನೆ ಇದ್ದಾಗ ನಾವು ಖಂಡಿತವಾಗಿಯೂ ಮೇಲ್ಮಟ್ಟಕ್ಕೆ ಏರಬಲ್ಲೆವು ಎಂದರು. ಸತತ ಮೂರು ವರ್ಷಗಳಿಂದ ನಮ್ಮ ಕಾಲೇಜಿನ ತಂಡವು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಚಾಂಪಿಯನ್ ಆಗಿರುವುದೇ ಇದಕ್ಕೆ ಉದಾಹರಣೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ, ಸೋಲನ್ನು ಸವಾಲಾಗಿ ಸ್ವೀಕರಿಸುವ ಮನೊಭಾವವನ್ನು ಎಲ್ಲರೂ ಬೆಳೆಸಿಕೊಂಡರೆ ಸಣ್ಣ ಸಣ್ಣ ವಿಷಯಗಳಿಗೆ ಧೃತಿಗೆಡುವ ಪ್ರಮೇಯವು ಬರಲಾರದು ಎಂದರು. ಉತ್ತಮ ಕ್ರೀಡಾಪಟುವಾಗಬೇಕಾದರೆ ಸಮತೋಲಿತ ಆಹಾರ, ಪರಿಶ್ರಮದ ಅಭ್ಯಾಸ ಅಗತ್ಯ ಎಂದರು. ವಿದ್ಯಾರ್ಥಿಗಳ ಕ್ರೀಡಾ ಸಾಧನೆಯ ಹಿಂದೆ ಅನೇಕರ ಪರಿಶ್ರಮವಿದೆ ಅವರೆಲ್ಲರೂ ಅಭಿನಂದನಾರ್ಹರು ಎಂದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು, ತರಬೇತಿ ಮತ್ತು ನೇಮಕಾತಿ ವಿಭಾಗ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್, ವಿಧ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಚೇತನ್.ಪಿ.ಡಿ ಮತ್ತು ಎಲ್ಲಾ ವಿಭಾಗಗಳ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಆಕರ್ಷಕ ಪಥ ಸಂಚಲನವನ್ನು ಮಾಡಿದ ತಂಡಗಳನ್ನು ಗುರುತಿಸಿ ಗೌರವಿಸಲಾಯಿತು. ಇದರಲ್ಲಿ ಎಂಸಿಎ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಾಗೂ ಎಂಬಿಎ ವಿಭಾಗದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಅನ್ವಿತ್.ಬಿ.ಎನ್ ಪ್ರತಿಜ್ಞಾವಿಧಿ ಬೋಧಿಸಿದರು, ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕದ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳಾದ ವಿದ್ಯಾ.ಸಿ.ಎಸ್, ಭುವನ್ ರಾಂ, ದೀಕ್ಷಿತಾ, ಅನಘಾ, ವರ್ಷಿತಾ, ಅರ್ಪಿತಾ, ಭುವನ್ ಕುಮಾರ್ ಮತ್ತು ಜೀವನ್ ಕ್ರೀಡಾ ಜ್ಯೋತಿಯನ್ನು ಮುಖ್ಯ ಅತಿಥಿಗಳಿಗೆ ಹಸ್ತಾಂತರಿಸಿ ಜ್ಯೊತಿಯನ್ನು ಬೆಳಗಿದರು. ಸನ್ಮಿತ್ ಸ್ವಾಗತಿಸಿ, ಅನೂಷಾ.ಎ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.