Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಸುಲೋಚನಾ ಮತ್ತು ಡಾ.ಎಂ.ಜಿ.ನಾಗರಾಜ್ ದಂಪತಿ ದತ್ತಿ ಕಾರ್ಯಕ್ರಮ : ಜಾನಪದ ಕಲೆ ದಾಖಲೀಕರಿಸಿ: ಕೋಡಿರ ಲೋಕೇಶ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಸುಲೋಚನಾ ಮತ್ತು ಡಾ.ಎಂ.ಜಿ.ನಾಗರಾಜ್ ದಂಪತಿ ದತ್ತಿ ಕಾರ್ಯಕ್ರಮ : ಜಾನಪದ ಕಲೆ ದಾಖಲೀಕರಿಸಿ: ಕೋಡಿರ ಲೋಕೇಶ್ ಸಲಹೆ*

ಮಾರ್ಚ್ 11, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.11 NEWS DESK : ಸಾಹಿತ್ಯ, ಜಾನಪದ ಕಲೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕೊಡಗು ಜಿಲ್ಲೆ ಶ್ರೀಮಂತಿಕೆ ಹೊಂದಿದ್ದು, ಇವುಗಳನ್ನು ದಾಖಲೀಕರಣ ಮಾಡುವಂತಾಗಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ನಿವೃತ್ತ ಮುಖ್ಯಸ್ಥರಾದ ಕೋಡಿರ ಲೋಕೇಶ್ ಅವರು ಸಲಹೆ ಮಾಡಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುಲೋಚನಾ ಡಾ.ಎಂ.ಜಿ.ನಾಗರಾಜ್ ದಂಪತಿಯವರ ದತ್ತಿ ಇವರ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲೆಯ ಪುರಾತತ್ವ ಜಾನಪದ ಮತ್ತು ಪರಿಸರ ವಿಚಾರಗೋಷ್ಠಿ-ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕೊಡಗು ಜಿಲ್ಲೆ ಬಹುಸಂಸ್ಕೃತಿ ಒಳಗೊಂಡಿದ್ದು, ಕಲೆ, ಸಾಹಿತ್ಯ, ಸಾಂಸ್ಕೃಕ ಕ್ಷೇತ್ರವನ್ನು ಮತ್ತಷ್ಟು ಪಸರಿಸುವಲ್ಲಿ ಮುಂದಾಗಬೇಕು. ಆ ನಿಟ್ಟಿನಲ್ಲಿ ಪ್ರಾಚೀನ ಸಂಸ್ಕೃತಿ, ಕಲೆಗಳನ್ನು ಉಳಿಸಿ ಬೆಳೆಸುವಂತಾಗಬೇಕು ಎಂದು ಕೋಡಿರ ಲೋಕೇಶ್ ಅವರು ಪ್ರತಿಪಾದಿಸಿದರು. ಸಾಹಿತ್ಯ, ಇತಿಹಾಸ, ಜಾನಪದವು ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದೆ. ಅವುಗಳನ್ನು ಮುಂದಿನ ಜನಾಂಗಕ್ಕೂ ಕೊಂಡೊಯ್ಯಬೇಕು ಎಂದು ಅವರು ಹೇಳಿದರು. ಕೊಡಗಿನಲ್ಲಿ ಹುಟ್ಟಿ ಬೆಳೆದವರು ಹಾಗೂ ಹತ್ತಿರದ ಜಿಲ್ಲೆಗಳಿಂದ ಕೊಡಗು ಜಿಲ್ಲೆಗೆ ಆಗಮಿಸಿ ಇಲ್ಲಿನ ಪರಂಪರೆಯನ್ನು ಸಾಹಿತ್ಯ ಮೂಲಕ ತಿಳಿಸಿರುವುದು ಮತ್ತೊಂದು ಕಡೆಯಾಗಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಶ್ರೀಮಂತಿಕೆ ಪರಂಪರೆ ಬೆಳಕು ಚೆಲ್ಲುವಲ್ಲಿ ಹಲವರು ಶ್ರಮಿಸಿದ್ದಾರೆ ಎಂದು ಅವರು ಹೇಳಿದರು. ಸಾಹಿತಿ ಎಂ.ಜಿ.ನಾಗರಾಜ್ ಕೊಡಗು ಜಿಲ್ಲೆಯ ಬಗ್ಗೆ ತುಂಬಾ ಅದ್ಭುತವಾಗಿ ಸಾಹಿತ್ಯ ರಚನೆ ಮಾಡಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕೊಡಗು ಜಿಲ್ಲೆಯ ಬಗ್ಗೆ ವೈವಿದ್ಯವಾಗಿ ಬರೆದಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಎಂ.ಜಿ.ನಾಗರಾಜ್ ಅವರು ಒಂದು ರೀತಿ ನಡೆದಾಡುವ ಅರ್ಥಕೋಶ ಎಂದರೆ ತಪ್ಪಾಗಲಾರದು. ಸಾಹಿತ್ಯ, ಜಾನಪದ, ಇತಿಹಾಸ ಅಗಾಧ ಪಾಂಡಿತ್ಯ ಹೊಂದಿ, ತಮ್ಮದೇ ಆದ ಶೈಲಿಯಲ್ಲಿ ವರ್ಣಿಸಿದ್ದಾರೆ ಎಂದು ಕೋಡಿರ ಲೋಕೇಶ್ ವಿವರಿಸಿದರು. ಕನ್ನಡ ಸಾಹಿತ್ಯ, ಸಾಂಸ್ಕøತಿಕ, ಕಲಾ ಕ್ಷೇತ್ರದಲ್ಲಿ ಬದುಕು ಕಟ್ಟಿಕೊಳ್ಳುವಲ್ಲಿ ಶ್ರಮಿಸಿದ್ದಾರೆ. ಬದುಕು ಹಸನ್ಮುಖವಾಗಬೇಕು. ಜಾನಪದ, ಕಲೆ, ಸಾಹಿತ್ಯ, ಇತಿಹಾಸವನ್ನು ಎಂ.ಜಿ.ನಾಗರಾಜ್ ಸೃಷ್ಟಿಸಿದ್ದಾರೆ ಎಂದು ಹೇಳಿದರು. ಕೊಡಗಿನ ಪರಿಸರ, ದೇವರ ಕಾಡುಗಳನ್ನು ಸಂರಕ್ಷಿಸುವಲ್ಲಿ ಹಲವರು ಶ್ರಮಿಸಿದ್ದಾರೆ. ಆ ನಿಟ್ಟಿನಲ್ಲಿ ಮುಂದೆಯೂ ಸಹ ಕೊಡಗಿನ ಪ್ರಾಕೃತಿಕ ಸೌಂದರ್ಯವನ್ನು ಸಂರಕ್ಷಿಸಬೇಕು. ನಾಗರಿಕತೆ ಬೆಳೆದಂತೆ ಮಾನವ ಮತ್ತು ವನ್ಯಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದೆ. ಈ ಬಗ್ಗೆ ಚಿಂತಿಸಬೇಕು ಎಂದರು. ವಿದ್ಯಾರ್ಥಿಗಳು ಸಾಹಿತ್ಯ, ಸಾಂಸ್ಕøತಿಕ, ಅಭಿರುಚಿ ಬೆಳೆಸಿಕೊಳ್ಳಬೇಕು. ಸಾಹಿತ್ಯಕ್ಕೆ ಒತ್ತು ನೀಡಬೇಕು. ಭಾರತೀಸುತ, ಐ.ಮ.ಮುತ್ತಣ್ಣ, ಬಿ.ಡಿ.ಗಣಪತಿ, ಶಂಕರ್ ನಾರಾಯಣ ಭಟ್ ಸೇರಿದಂತೆ ಹಲವರು ಕೊಡಗಿನ ಸಾಹಿತ್ಯ ರಚನೆಗೆ ಶ್ರಮಿಸಿದ್ದಾರೆ ಎಂದರು. ವಿರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜು ಉಪನ್ಯಾಸಕಿ ಪ್ರತಿಮಾ ರೈ ಅವರು ಮಾತನಾಡಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕವಿರಾಜ ಮಾರ್ಗ, ಅಮೋಘ ವರ್ಷ ಸೇರಿದಂತೆ ಹಲವರು ಸಾಹಿತ್ಯ ರಚಿಸಿದ್ದಾರೆ. ಪ್ರಾಚೀನ ಇತಿಹಾಸ, ಪುರಾಣಗಳನ್ನು ಕಾಣುತ್ತೇವೆ. ಇತಿಹಾಸ ಮತ್ತು ಪುರಾಣಗಳಲ್ಲಿ ಪ್ರಾತಿನಿದ್ಯ ಹೊಂದಿದೆ. ಹಾಲೇರಿ ವಂಶಸ್ಥರು ಹೀಗೆ ಹಲವರ ಬಗ್ಗೆ ಬರೆದಿರುವುದನ್ನು ಕಾಣುತ್ತೇವೆ. ಬುಡಕಟ್ಟು ಜನರ ಬದುಕು ಮತ್ತು ಜಾನಪದ ಪರಿಸರ ಒಂದಕ್ಕೊಂದು ಸಂಬಂಧವಿದ್ದು, ಕೃಷಿ ಪ್ರದಾನ ಜಿಲ್ಲೆಯಲ್ಲಿ ಸಾಹಿತ್ಯ, ಸಾಂಸ್ಕøತಿಕ ಕ್ಷೇತ್ರವು ತನ್ನದೇ ಆದ ಸ್ಥಾನ ಹೊಂದಿದೆ ಎಂದರು. ಪ್ರಕೃತಿಯ ಆರಾಧನೆ, ಮರ ಗಿಡಗಳನ್ನು ದೇವರ ರೂಪದಲ್ಲಿ ಪೂಜಿಸುವುದು, ಜಾನಪದ ಕಲೆಗಳನ್ನು ಪ್ರೀತಿಸುವುದು, ಗೌರವಿಸುವುದು, ಕೊಡಗಿನ ಸಾಂಸ್ಕøತಿಕ ಹಬ್ಬಗಳಾದ ಹುತ್ತರಿ, ಕೈಪೋಳ್ದ್, ಕಾವೇರಿ ಸಂಕ್ರಮಣ, ಹಬ್ಬಗಳು ವೈಶಿಷ್ಯತೆಯಿಂದ ಕೂಡಿವೆ ಎಂದರು. ಕೊಡಗು ಜಿಲ್ಲೆಯ ಆಚಾರ-ವಿಚಾರ, ಪರಂಪರೆ, ಪದ್ಧತಿ ಸ್ಮರಣೀಯವಾಗಿದ್ದು, ಎಲ್ಲರೂ ಒಟ್ಟುಗೂಡಿದಾಗ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಹುದು. ಕೊಡಗಿನ ಸಾಂಸ್ಕøತಿಕ ಪರಂಪರೆ ಉಳಿಸಬೇಕು. ಮೌಲ್ಯಗಳು ಕುಸಿಯದಂತೆ ಎಚ್ಚರವಹಿಸಬೇಕು ಎಂದರು. ಸಾಹಿತಿ, ಖ್ಯಾತ ಸಂಶೋಧಕರು ಹಾಗೂ ದತ್ತಿದಾನಿಗಳಾದ ಡಾ.ಎಂ.ಜಿ.ನಾಗರಾಜ್ ಮಾತನಾಡಿ ಕನ್ನಡ ಸಾಹಿತ್ಯ, ಸಂಸ್ಕøತಿ, ಕಲೆಗಳನ್ನು ಉಳಿಸಬೇಕು. ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ಹೆಚ್ಚಿನ ಜನರು ತೊಡಗಿಸಿಕೊಳ್ಳಬೇಕು ಎಂದರು. ಎಫ್‍ಎಂಸಿ ಕಾಲೇಜಿನ ಪ್ರಾಂಶುಪಾಲರಾದ ಮೇ.ಪ್ರೊ.ಬಿ.ರಾಘವ ಅವರು ಮಾತನಾಡಿ ಆಧುನಿಕತೆ ಹೆಸರಿನಲ್ಲಿ ಸಮಾಜ ಯಾವ ದಿಕ್ಕಿನೆಡೆ ಸಾಗುತ್ತಿದೆ ಎಂಬ ಬಗ್ಗೆ ಯೋಚಿಸಬೇಕು. ಅಭಿವೃದ್ಧಿ ಹೆಸರಿನಲ್ಲಿ ದೌರ್ಜನ್ಯ ನಿಲ್ಲಬೇಕು. ಬುಡಕಟ್ಟು ಸಂಸ್ಕøತಿಯ ಮೇಲೆ ಒಂದಲ್ಲ ಒಂದು ರೀತಿ ದಾಳಿ ನಡೆಯುತ್ತಿದ್ದು, ಇದು ಕೊನೆಯಾಗಬೇಕು ಎಂದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿ ಮುನಿರ್ ಅಹಮದ್ ಅವರು ಮಾತನಾಡಿದರು. ವಿಚಾರಗೋಷ್ಠಿಯಲ್ಲಿ ಕನ್ನಡ ಪ್ರಾಧ್ಯಾಪಕರಾದ ಡಾ.ಜಮೀರ್ ಅಹ್ಮದ್, ನಿವೃತ್ತ ಪ್ರಾಂಶುಪಾಲರಾದ ಡಾ.ಜೆ.ಸೋಮಣ್ಣ, ಅರಣ್ಯ ಕಾಲೇಜಿನ ನಿವೃತ್ತ ಮುಖ್ಯಸ್ಥರಾದ ಡಾ.ಸಿ.ಜಿ.ಕುಶಾಲಪ್ಪ, ಪುರಾತತ್ವ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ ಅವರು ಮಾತನಾಡಿದರು. ಕಸಾಪ ಗೌರವ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್, ಚೊಕ್ಕಾಡಿ ಪ್ರೇಮ ರಾಘವಯ್ಯ ಇದ್ದರು. ಕವಿಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಸಾಹಿತಿ ಬಿ.ಎ.ಷಂಶುದ್ದೀನ್, ಪ್ರಾಧ್ಯಾಪಕರಾದ ಡಾ.ನಯನ ಕಶ್ಯಪ್ ಮಾತನಾಡಿದರು. ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಎಫ್‍ಎಂಸಿ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಶೈಲಶ್ರೀ, ಎಚ್.ಕೆ.ರೇಣುಶ್ರೀ ಇತರರು ಇದ್ದರು. ಲೀಲಾವತಿ ತೊಡಿಕಾನ, ಶ್ವೇತ ರವೀಂದ್ರ, ಡಾ.ಕಾವೇರಿ ಪ್ರಕಾಶ್, ಪುಪ್ಪಲತಾ ಶಿವಪ್ಪ, ವಿಮಲದಶರಥ, ಗಿರೀಶ್ ಕಿಗ್ಗಾಲು, ಜಗದೀಶ್ ಜೋಡುಬೀಟಿ, ಅರ್ಪಿತ ಕೆ.ಜಿ., ಟಾಮಿ ತೋಮಸ್, ಹವ್ಯಾಸ್ ವೈಲೇಶ್, ಪುದಿಯ ನೆರವನ ರೇವತಿ ರಮೇಶ್ ಕವಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.