Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಏ.26 ರಿಂದ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ : ಜಾನುವಾರುಗಳ ರಕ್ಷಣೆ ಎಲ್ಲರ ಹೊಣೆ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಪೊಲೀಸ್ ನ್ಯೂಸ್

*ಕೊಡಗು : ಏ.26 ರಿಂದ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ : ಜಾನುವಾರುಗಳ ರಕ್ಷಣೆ ಎಲ್ಲರ ಹೊಣೆ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ಏಪ್ರಿಲ್ 16, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.16 NEWS DESK : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಇದೇ ಏಪ್ರಿಲ್, 26 ರಿಂದ 45 ದಿನಗಳ ಕಾಲ 7 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಈ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ ರಕ್ಷಣೆ ಸಂಬಂಧಿಸಿದಂತೆ ಎಲ್ಲರೂ ಎಚ್ಚರವಹಿಸಬೇಕು. ಆ ನಿಟ್ಟಿನಲ್ಲಿ ಶೇಕಡಾವಾರು ಯಶಸ್ಸಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ರೈತರಿಗೆ ಆರ್ಥಿಕ ಸಂಕಷ್ಟ ಉಂಟುಮಾಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸುವಲ್ಲಿ ಎಲ್ಲರೂ ಮುಂದಾಗಬೇಕು. ಸರ್ಕಾರದ ನಿರ್ದೇಶನದಂತೆ ಜಾನುವಾರುಗಳಿಗೆ ಲಸಿಕಾ ಅಭಿಯಾನ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರಾದ ಡಾ.ಲಿಂಗರಾಜ ದೊಡ್ಡಮನಿ ಮಾತನಾಡಿ, ಕಾಲುಬಾಯಿ ರೋಗವು ವೈರಾಣುನಿಂದ ಬರುವ ಅಂಟು ಜಾಡ್ಯವಾಗಿದ್ದು, ಲಸಿಕೆ ಹಾಕುವುದರಿಂದ ಕಾಲುಬಾಯಿ ರೋಗವನ್ನು ನಿಯಂತ್ರಿಸಬಹುದಾಗಿದೆ ಎಂದರು. ಕಾಲುಬಾಯಿ ರೋಗವು ಎತ್ತು, ಹೋರಿ, ಹಸು, ಎಮ್ಮೆ ಮತ್ತು ಹಂದಿಗಳಿಗೆ ತಗಲುವ ಮಾರಕ ರೋಗವಾಗಿದ್ದು, ಇದನ್ನು ತಡೆಯುವುದು ಅಭಿಯಾನದ ಉದ್ದೇಶವಾಗಿದೆ ಎಂದರು. ವರ್ಷದಲ್ಲಿ ಕನಿಷ್ಠ ಎರಡು ಬಾರಿ ದನ ಮತ್ತು ಎಮ್ಮೆಗಳಿಗೆ ಲಸಿಕೆ ಹಾಕುವುದರಿಂದ ರೋಗ ತಡೆಗಟ್ಟಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಕರುಗಳಿಗೆ ತಪ್ಪದೇ ಒಮ್ಮೆ ಲಸಿಕೆ ಹಾಕಿಸಿದ ನಂತರ ಮತ್ತೊಮ್ಮೆ 3 ರಿಂದ 5 ವಾರದೊಳಗೆ ಬೂಸ್ಟರ್ ಲಸಿಕೆ ಹಾಕಿಸಬೇಕಿದೆ. ಹಾಗೆಯೇ ಗರ್ಭಧರಿಸಿದ ಹಸು ಮತ್ತು ಎಮ್ಮೆಗಳಿಗೂ ತಪ್ಪದೇ ಲಸಿಕೆ ಹಾಕಿಸಬೇಕಿದೆ ಎಂದು ಕೋರಿದರು. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದರೂ ಸಹ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕಿದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಮನವಿ ಮಾಡಿದರು. ‘ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿದೆ. ಈ ರೋಗದ ವಿರುದ್ಧ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬಾರದಂತೆ ತಡೆಗಟ್ಟಬಹುದಾಗಿರುತ್ತದೆ. 20 ನೇ ಜಾನುವಾರು ಗಣತಿಯಂತೆ ಜಿಲ್ಲೆಯಲ್ಲಿ ದನ ಹಾಗೂ ಎಮ್ಮೆಗಳ ಸಂಖ್ಯೆ 76,920 ಇದ್ದು ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವ ಸಿದ್ಧ್ದತೆ ಮಾಡಿಕೊಳ್ಳಲಾಗಿದ್ದು, 75 ಲಸಿಕಾದಾರರನ್ನೊಳಗೊಂಡ ಲಸಿಕಾದಾರರು ರೈತರ/ ಜಾನುವಾರು ಮಾಲೀಕರ ಮನೆ ಮನೆಗೆ ತೆರಳಿ ಲಸಿಕೆ ಹಾಕಲಿದ್ದಾರೆ ಎಂದು ಮಾಹಿತಿ ನೀಡಿದರು.’ ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗಳಿಗೆ ಬಂದಾಗ ಸಹಕಾರ ನೀಡಿ 4 ತಿಂಗಳ ಮೇಲ್ಪಟ್ಟ ಎಲ್ಲಾ ದನ/ ಎಮ್ಮೆ ಲಸಿಕೆ ಹಾಕಿಸುವಂತೆ ಕೋರಿದರು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಮಡಿಕೇರಿ 9448647276, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಸೋಮವಾರಪೇಟೆ 9980360200, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ವಿರಾಜಪೇಟೆ 9901303996, ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಕುಶಾಲನಗರ 9448422269 ಹಾಗೂ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಪೊನ್ನಂಪೇಟೆ 9740556311 ನ್ನು ಸಂಪರ್ಕಿಸಬಹುದು ಎಂದು ಲಿಂಗರಾಜ ದೊಡ್ಡಮನಿ ವಿವರಿಸಿದರು. ಪಾಲಿಕ್ಲಿನಿಕ್ ಉಪ ನಿರ್ದೇಶಕರಾದ ಡಾ.ತಿಮ್ಮಯ್ಯ, ನೋಡಲ್ ಅಧಿಕಾರಿ ಡಾ.ಶಿಲ್ಪ, ತಾಲ್ಲೂಕು ಪಶು ವೈದ್ಯಾಧಿಕಾರಿಗಳಾದ ಡಾ.ಪ್ರಸನ್ನ, ಡಾ.ರಾಜಶೇಖರ್, ಡಾ.ಗಿರೀಶ್, ಡಾ.ನವೀನ್, ಡಾ.ಶಿಂದೆ, ಸಂಚಾರಿ ಪಶುಚಿಕಿತ್ಸಾ ಘಟಕದ ಡಾ.ಶರತ್, ಹಾಸನ ಕೆಎಂಎಫ್ ಪ್ರಧಾನ ವ್ಯವಸ್ಥಾಪಕರಾದ ಡಾ.ರೂಪೇಶ್ ಕುಮಾರ್ ಇತರರು ಇದ್ದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭಿತ್ತಿಪತ್ರ ಬಿಡುಗಡೆ ಮಾಡಿದರು.
ಮತ್ತಷ್ಟು ಮಾಹಿತಿ: ಕೊಡಗು ಜಿಲ್ಲೆಯಲ್ಲಿ 2025ರ ಏಪ್ರಿಲ್, 26 ರಿಂದ ಜೂನ್, 04 ರವರೆಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 07ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಇದು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ. ಕಾಲುಬಾಯಿ ಜ್ವರವು ಒಂದು ವೈರಾಣುರೋಗವಾಗಿದ್ದು, ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿರುತ್ತದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು/ ಹೋರಿಗಳಲ್ಲಿ ಕೆಲಸ ಮಾಡುವ ಸಾಮಥ್ರ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.