Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಲಾಕಾವ್ಯ ನಾಟ್ಯ ಶಾಲೆಯ ಏಳನೇ ವರ್ಷದ ವಾರ್ಷಿಕೋತ್ಸವ : ಏಕಕಾಲಕ್ಕೆ 7776 ಗೆಜ್ಜೆಗಳ ನಿನಾದ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಲಾಕಾವ್ಯ ನಾಟ್ಯ ಶಾಲೆಯ ಏಳನೇ ವರ್ಷದ ವಾರ್ಷಿಕೋತ್ಸವ : ಏಕಕಾಲಕ್ಕೆ 7776 ಗೆಜ್ಜೆಗಳ ನಿನಾದ*

ಏಪ್ರಿಲ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.17 NEWS DEWSK  : ಕಲಾಕಾವ್ಯ ನಾಟ್ಯ ಶಾಲೆಯ ಏಳನೇ ವರ್ಷದ ವಾರ್ಷಿಕೋತ್ಸವವವು ಸಂಭ್ರಮದಿಂದ ನಡೆಯಿತು. ಮಡಿಕೇರಿಯ ಕೆಳಗಿನ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮವನ್ನು ಭರತನಾಟ್ಯ ಕಲಾವಿದೆ ಮಿಲನ ಭರತ್ ಹಾಗೂ ಯೋಗ ಗುರು ಶಿಲ್ಪ ರವೀಂದ್ರ ರೈ  ಉದ್ಘಾಟಿಸಿದರು. ಬಳಿಕ ಮಾತನಾಡಿದ ಮಿಲನಾ ಭರತ್, ಒಂದು ನಾಟ್ಯಶಾಲೆಯನ್ನು ಸ್ಥಾಪಿಸುವುದು ಸುಲಭದ ವಿಷಯವಲ್ಲ, ತಾನು ಕಲಿತು ಬಳಿಕ ಇತರರಿಗೆ ಆ ವಿದ್ಯೆಯನ್ನು ಧಾರೆಯೆರೆಯಬೇಕಾಗಿರುತ್ತದೆ, ಇದಕ್ಕೆ ಬಹಳ ಆತ್ಮಸ್ಥೈರ್ಯದ ಅಗತ್ಯವಿರುತ್ತದೆ. ಕಾವ್ಯಶ್ರೀ ಅವರು ಎಲ್ಲವನ್ನೂ ಮೀರಿ ಈ ಶಾಲೆಯನ್ನು ಕಟ್ಟಿದ್ದಾರೆ ಅವರ ಸಾಧನೆ ನಿಜಕ್ಕೂ ಅಭಿನಂದನೀಯ ಎಂದರು.  ಶಿಲ್ಪಾ ರವೀಂದ್ರ ರೈ ಮಾತನಾಡಿ, ಇಂದು ಭಾರತೀಯ ನೃತ್ಯಕಲೆ ಕಲಿಯುವವರ ಸಂಖ್ಯೆ ದಿನದಿಂದ ದಿನಕ್ಕೆ ಕುಂಠಿತವಾಗುತ್ತಿದೆ, ಜನರು ಆಸಕ್ತಿ ಕಳೆದುಕೊಳ್ಳುತ್ತಿರುವುದು ಇದಕ್ಕೆ ಮೂಲ ಕಾರಣ. ಆದರೆ ಕಾವ್ಯಶ್ರೀ ಅವರು ದಕ್ಷಿಣ ಭಾರತದ ಪ್ರಮುಖ ನೃತ್ಯ ಪ್ರಕಾರವಾದ ಭರತನಾಟ್ಯದ ಮೇಲಿಟ್ಟಿರುವ ಗೌರವ, ಅಭಿಮಾನ  ನಿಜಕ್ಕೂ ಮೆಚ್ಚುವಂತದ್ದು. ಈ ನೃತ್ಯಶಾಲೆ ಸ್ಥಾಪಿಸಲು ಅವರು ಅಂದು ಇಟ್ಟ ದಿಟ್ಟ ಹೆಜ್ಜೆ ಇಂದು ಹೆಮ್ಮರವಾಗಿದೆ. ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲೆಂದು ಹಾರೈಸಿದರು. ಕಳೆದ ಏಳು ವರ್ಷಗಳಲ್ಲಿ ಕಲಾಕಾವ್ಯ ನಾಟ್ಯಶಾಲೆ ನಡೆದುಬಂದ ಹಾದಿಯ ಕುರಿತು ವಿದೂಷಿ ಕಾವ್ಯಶ್ರೀ ಕಪಿಲ್  ಪ್ರಾಸ್ತಾವಿಕವಾಗಿ ಮಾತನಾಡಿ, ಕಲಾಕಾವ್ಯ ನಾಟ್ಯಶಾಲೆ ಆರಂಭವಾದಲ್ಲಿಂದ ಇಲ್ಲಿಯವರೆಗೆ ಇದ್ದ ಸವಾಲುಗಳು, ಏಳುಬೀಳುಗಳು ಹಾಗೂ ತಮಗಿದ್ದಂತಹ ಯೋಜನೆ, ಯೋಚನೆಗಳನ್ನು ಹಂಚಿಕೊಂಡರು, ಇಂದಿನ ಯುವಜನತೆ ಸಂಸ್ಕೃತಿದತ್ತವಾಗಿ ಬಂದ ಕಲಾ ಪ್ರಕಾರಗಳನ್ನು ತ್ಯಜಿಸಿ ಆಧುನಿಕ ನೃತ್ಯ ಕಲೆಗಳಿಗೆ ಪ್ರಾಮುಖ್ಯತೆ ಕೊಡುತ್ತಿದ್ದಾರೆ, ಆದರೆ ಭಾರತೀಯ ಸಂಸ್ಕೃತಿಯನ್ನು ಸದಾ ಉನ್ನತಿಗೆ ಕೊಂಡೊಯ್ಯುವುದು ಇಲ್ಲಿನ ಭರತನಾಟ್ಯದಂತಹ ಕಲಾ ಪ್ರಕಾರಗಳು, ಪೋಷಕರು ತಮ್ಮ ಮಕ್ಕಳಿಗೆ ಸಂಸ್ಕೃತಿಯ ಹಿರಿಮೆಯನ್ನು ಧಾರೆಯೆರೆಯಬೇಕಿದೆ ಎಂದರು. ತಮ್ಮ ಈ ನೃತ್ಯಶಾಲೆಯ ಯಶಸ್ಸಿನ ಜೊತೆ ಬೆಂಬಲವಾಗಿ ನಿಂತ ತಮ್ಮ ಕುಟುಂಬದ ಕುರಿತು ಸಂತಸ ವ್ಯಕ್ತಪಡಿಸಿದರು. ಕಲಾಕಾವ್ಯ ನಾಟ್ಯಶಾಲೆಯ ವಿದ್ಯಾರ್ಥಿಗಳು ಸಾಧನೆಯಲ್ಲಿ ಸದಾ ಮುಂದು, ಈ ವರ್ಷ ಗಂಗೂಬಾಯಿ ಹಾನಗಲ್ ಯೂನಿವರ್ಸಿಟಿ ನಡೆಸಿದ ಭರತನಾಟ್ಯ ಪರೀಕ್ಷೆಯಲ್ಲಿ ಕಲಾಕಾವ್ಯ ನಾಟ್ಯಶಾಲೆಯ ವಿದ್ಯಾರ್ಥಿ ಮಂಡೀರ ಯುಕ್ತಾನ್ ನೀಲಮ್ಮ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು, ಐದು  ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ ಇತರ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಅವರನ್ನು ಗೌರವಿಸಲಾಯಿತು.  ನಾಟ್ಯಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ  ಹದಿನೆಂಟು ನೃತ್ಯಗಳ ವೈಭವ ನೆರೆದ ಜನರ ಕಣ್ಮನಗಳನ್ನು ತಣಿಸಿತು. ತೊಂಭತ್ತಾರು ಮಕ್ಕಳ 7,776 ಗೆಜ್ಜೆಯ ನಾದ ಹೊಸ ಲೋಕವನ್ನೇ ಸೃಷ್ಟಿಸಿದಂತಿತ್ತು. ಕಾರ್ಯಕ್ರಮದಲ್ಲಿ ದುಗ್ಗಳ ಕಪಿಲ್, ಸೂರ್ತಲೆ ಸೋಮಣ್ಣ, ನವೀನ್ ಅಂಬೆಕಲ್ಲು, ತಹಶೀಲ್ದಾರ್ ಪ್ರವೀಣ್, ರೋಟರಿ ಮಿಸ್ಟ್ ಹಿಲ್ಸ್ ಸದಸ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರು ಹಾಜರಿದ್ದರು. ಆನಂದ್ ಕೊಡಗು ಕಾರ್ಯಕ್ರಮವನ್ನು ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.