
ಸುಂಟಿಕೊಪ್ಪ, ಏ.19 NEWS DESK : ಶುಭಶುಕ್ರವಾರದ ಅಂಗವಾಗಿ ಸಂತ ಮೇರಿ ಶಾಲಾ ಸಭಾಂಗಣದಲ್ಲಿ ಕ್ರೈಸ್ತ ಭಾಂದವರು ಆರಾಧನೆ, ದ್ಯಾನ ಹಾಗೂ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಧರ್ಮಗುರುಗಳಾದ ವಿಜಯಕುಮಾರ್ ಹಾಗೂ ಕನ್ಯಾಸ್ತ್ರಿಯರು ವಿಶೇಷ ಪ್ರಾರ್ಥನೆ ನೇರವೇರಿಸಿದರು. ಧರ್ಮಗುರುಗಳಾದ ರೇ.ಫಾ.ವಿಜಯಕುಮಾರ್ ದಿನದ ಸಾಂಘ್ಯವನ್ನು ನೇರವೇರಿಸಿದರು. ಮಧ್ಯಾಹ್ನ ಸಂತ ಅಂತೋಣಿ ಶಾಲಾವರಣದಿಂದ ದೇವಾಲಯದಿಂದ ಕ್ರೈಸ್ತ ಶಿಲುಬೆ ಮೆರವಣಿಗೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಪಾಲ್ಗೊಂಡಿದ್ದರು.









