


ಮಡಿಕೇರಿ ಏ.20 NEWS DESK : ಸ್ಥಳೀಯ ಸಂಸ್ಥೆಗಳಿಂದ ರೆಡ್ ಕ್ರಾಸ್ ಗೆ ನಿಯಮ ಪ್ರಕಾರ ಸಲ್ಲಬೇಕಾದ ಅನುದಾನವನ್ನು ವಿಳಂಭರಹಿತವಾಗಿ ಪಡೆದುಕೊಂಡು ನಿಯಮಾನುಸಾರ ಜನರಿಗೆ ಪ್ರಯೋಜನಕಾರಿಯಾಗುವ ಯೋಜನೆಗಳಿಗೆ ಬಳಸಿಕೊಳ್ಳುವಂತೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಕನಾ೯ಟಕ ರಾಜ್ಯದ ಅಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ ಸೂಚಿಸಿದ್ದಾರೆ. ನಗರದಲ್ಲಿನ ಕೊಡಗು ರೆಡ್ ಕ್ರಾಸ್ ಭವನಕ್ಕೆ ಭೇಟಿ ನೀಡಿದ ಬಳಿಕ ರೆಡ್ ಕ್ರಾಸ್ ನಿದೇ೯ಶಕರೊಂದಿಗೆ ಸಮಾಲೋಚನೆ ನಡೆಸಿ ಜಿಲ್ಲೆಯಲ್ಲಿ ರೆಡ್ ಕ್ರಾಸ್ ಕಾಯ೯ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ರಾಜೀವ್ ಶೆಟ್ಟಿ, ಸ್ಥಳೀಯ ಸಂಸ್ಥೆಗಳಾದ ಜಿ.ಪಂ. ಗ್ರಾ..ಪಂ. ತಾ.ಪಂ. ನಗರ ಮತ್ತು ಪುರಸಭೆ, ಪ.ಪಂ.ಗಳಿಂದ ಇನ್ನು ಕೂಡ ನಿಯಮಪ್ರಕಾರ ರೆಡ್ ಕ್ರಾಸ್ ಗೆ ಪಾವತಿಸಬೇಕಾದ ವಾಷಿ೯ಕ ಅನುದಾನ ಪಾವತಿಯಾಗದೇ ಇರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ವಿಳಂಭರಹಿತವಾಗಿ ಕಾಯ೯ಪ್ರವೖತ್ತವಾಗಿ ರಡ್ ಕ್ರಾಸ್ ಗೆ ಸಲ್ಲಿಸಬೇಕಾದ ಅನುದಾನವನ್ನು ನೀಡುವಂತೆಯೂ ಅವರು ಸೂಚಿಸಿದರು. ರಾಜ್ಯದ 31 ಜಿಲ್ಲೆಗಳಲ್ಲಿಯೂ ಮುಂದಿನ ದಿನಗಳಲ್ಲಿ ಯೂತ್ ರೆಡ್ ಕ್ರಾಸ್ ನ್ನು ಪ್ರಬಲಗೊಳಿಸಲಾಗುತ್ತದೆ ಎಂದು ಹೇಳಿದ ಬಸ್ರೂರು ರಾಜೀವ್ ಶೆಟ್ಟಿ ಕೊಡಗಿನಲ್ಲಿ ರಕ್ತದಾನ ಶಿಬಿರಗಳ ಹೆಚ್ಚಳದ ಜತೆಯಲ್ಲಿಯೇ ಖಾಸಗಿ ಆಸ್ಪತ್ರೆಯ ಸಹಭಾಗಿತ್ವದಲ್ಲಿ ರಕ್ತನಿಧಿ ಕೇಂದ್ರವನ್ನೂ ಪ್ರಾರಂಭಿಸುವ ನಿಟ್ಟಿನಲ್ಲಿ ಚಿಂತನೆ ಹರಿಸಲಾಗುತ್ತದೆ ಎಂದು ಹೇಳಿದರು.
ರೆಡ್ ಕ್ರಾಸ್ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ.ರವೀಂದ್ರ ರೈ ಮಾತನಾಡಿ, ಜಿಲ್ಲಾ ರೆಡ್ ಕ್ರಾಸ್ ನಲ್ಲಿ ಪ್ರಸ್ತುತ 775 ಸದಸ್ಯರಿದ್ದಾರೆ. ಸದಸ್ಯತ್ವ ಹೆಚ್ಚಿಸುವ ಗುರಿ ಹೊಂದಲಾಗಿದೆ.ಎಂದು ತಿಳಿಸಿದರಲ್ಲದೇ, ಮಡಿಕೇರಿಯಲ್ಲಿ ಸ್ಥಾಪಿಸಲಾಗಿರುವ ರೆಡ್ ಕ್ರಾಸ್ ಭವನದ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ರಾಜ್ಯ ರೆಡ್ ಕ್ರಾಸ್ ನಿಂದ ಹೆಚ್ಚಿನ ಅನುದಾನದ ಅಗತ್ಯವಿದೆ ಎಂದು ಕೋರಿದರು. ಕೊಡಗು ರೆಡ್ ಕ್ರಾಸ್ ಉಪಾಧ್ಯಕ್ಷ ಅನಿಲ್ ಹೆಚ್.ಟಿ. ಸ್ವಾಗತಿಸಿ, ನಿರೂಪಿಸಿದ ಕಾಯ೯ಕ್ರಮದಲ್ಲಿ ಗೌರವ ಕಾಯ೯ದಶಿ೯ ಮುರಳೀಧರ್ ಹೆಚ್. ಆರ್.ವರದಿ ಮಂಡಿಸಿದರು. ಮೂರನೇ ಅವಧಿಗೆ ಕನಾ೯ಟಕ ರೆಡ್ ಕ್ರಾಸ್ ನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಮೆ ಹೊಂದಿರುವ ಬಸ್ರೂರು ರಾಜೀವ್ ಶೆಟ್ಟಿ ದಂಪತಿಯನ್ನು ಕೊಡಗು ರೆಡ್ ಕ್ರಾಸ್ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ರೆಡ್ ಕ್ರಾಸ್ ನಿದೇ೯ಶಕರಾದ ಅಂಬೆಕಲ್ ಜೀವನ್ ಕುಶಾಲಪ್ಪ, ಮಧುಕರ್, ಪ್ರಸಾದ್ ಗೌಡ, ಕೆ.ಡಿ.ದಯಾನಂದ್, ಡಾ.ಚೆರಿಯಮನೆ ಪ್ರಶಾಂತ್, ಸತೀಶ್ ರೈ ಸತೀಶ್ ಸೋಮಣ್ಣ, ದಶ೯ನ್ ಬೋಪಯ್ಯ , ಸಿಬ್ಬಂದಿ ಕೌಶಿ ಪೊನ್ನಮ್ಮ ಹಾಜರಿದ್ದರು. ಇದೇ ಸಂದಭ೯ ಕೊಡಗು ರೆಡ್ ಕ್ರಾಸ್ ಭವನವನ್ನು ವೀಕ್ಷಿಸಿದ ಬಸ್ರೂರು ರಾಜೀವ್ ಶೆಟ್ಟಿ ಮುಂಬರುವ ಮುಂಗಾರಿನಲ್ಲಿ ಪ್ರಾಕೖತ್ತಿಕ ವಿಕೋಪವೇನಾದರೂ ಸಂಭವಿಸಿದ ಸಂದಭ೯ದಲ್ಲಿ ಭವನವನ್ನು ಸುಸಜ್ಜಿತವಾಗಿರಿಸಿಕೊಳ್ಳುವಂತೆ ಸೂಚಿಸಿದರು.









