


ಮಡಿಕೇರಿ ಏ.20 NEWS DESK : ವಿರಾಜಪೇಟೆ ಪುರಸಭೆಯ ಕಾಂಗ್ರೆಸ್ ಸದಸ್ಯರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವಿಶೇಷ ಸಭೆ ನಡೆಸಿದರು. ಸಭೆಯಲ್ಲಿ ಪುರಸಭೆಯ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರುಗಳನ್ನು ಆಯ್ಕೆ ಮಾಡುವ ಕುರಿತು ಚರ್ಚಿಸಿ, ಒಮ್ಮತದ ಇಬ್ಬರನ್ನು ಸ್ಥಾಯಿ ಸಮಿತಿಗಳಿಗೆ ಆಯ್ಕೆ ಮಾಡಲು ತೀರ್ಮಾನಿಸಲಾಯಿತು. ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದ ಶಾಸಕರು ಸದಸ್ಯರುಗಳೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ವಿರಾಜಪೇಟೆ ನಗರದ ಜನತೆಗೆ ಅನುಕೂಲ ಆಗುವ ನಿಟ್ಟಿನಲ್ಲಿ, ಪುರಸಭೆ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸದಸ್ಯರುಗಳೊಂದಿಗೆ ಚರ್ಚಿಸಿದರು. ಸಭೆಯಲ್ಲಿ ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ಸದಸ್ಯರುಗಳು ಉಪಸ್ಥಿತರಿದ್ದರು.









