Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವ ಭೂಮಿ ದಿನ-2025 : World Earth Day : ಥೀಮ್: ನಮ್ಮ ಶಕ್ತಿ ನಮ್ಮ ಗ್ರಹ: ಇರುವುದೊಂದೇ ಭೂಮಿ ಇದನ್ನು ಸಂರಕ್ಷಿಸೋಣ ಬನ್ನಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವ ಭೂಮಿ ದಿನ-2025 : World Earth Day : ಥೀಮ್: ನಮ್ಮ ಶಕ್ತಿ ನಮ್ಮ ಗ್ರಹ: ಇರುವುದೊಂದೇ ಭೂಮಿ ಇದನ್ನು ಸಂರಕ್ಷಿಸೋಣ ಬನ್ನಿ*

ಏಪ್ರಿಲ್ 23, 20254 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.23 NEWS DESK :: ಪ್ರತಿ ವರ್ಷ ಜಗತ್ತಿನ ಎಲ್ಲ ದೇಶಗಳಲ್ಲಿ ಏಪ್ರಿಲ್ 22 ರಂದು ವಿಶ್ವ ಭೂ ದಿನ (ಅರ್ಥ್-ಡೇ) ವನ್ನು ಆಚರಿಸಲಾಗುತ್ತಿದೆ. ಅರ್ಥ್-ಡೇ ಅಂದರೆ ಭೂಮಿಯ ಬರ್ಥ್- ಡೇ ! ಅಂದರೆ ಭೂಮಿಯ ಹುಟ್ಟುಹಬ್ಬ. ಅಂದರೆ ಅಮ್ಮನ ಹುಟ್ಟುಹಬ್ಬದ ದಿನ ಅವಳು ತುಂಬ ಸುಂದರವಾಗಿ, ನಗುನಗುತ್ತ ಓಡಾಡುವ ಹಾಗೂ ಭೂಮಾತೆಯ ಮಡಿಲ್ಲಲ್ಲೂ ಈ ದಿನಗಳಲ್ಲಿ ಪರಿಸರದಲ್ಲಿ ಗಿಡಮರ, ಹೂ ಬಳ್ಳಿ, ಪಶು-ಪಕ್ಷಿಗಳಿಗೂ ಸಡಗರ -ಸಂಭ್ರಮ. ನಾವೀಗ ಬಾಹ್ಯಾಕಾಶ ಯುಗದಲ್ಲಿದ್ದೇವೆ. ಹಾಗೆಂದು ಭೂಮಿಯ ಯುಗವನ್ನು ಮರೆತುಬಿಟ್ಟರೆ ಹೇಗೆ ? ಮನುಕುಲ ಸೇರಿದಂತೆ ಸಕಲ ಜೀವಿಗಳ ಸಂರಕ್ಷಣೆಗೆ ಭೂಮಿಯ ಸಂರಕ್ಷಣೆ ಕೂಡ ಅಗತ್ಯವಲ್ಲವೇ ? ಆದ್ದರಿಂದ, ನಾವು ಈ ಭೂ ದಿನದ ಸಂದರ್ಭ ಭೂಮಿಯ ಸಂರಕ್ಷಣೆ ಮತ್ತು ಭೂ ಮಂಡಲದ ಎಲ್ಲಾ ಜೀವಿಗಳ ಸಂರಕ್ಷಣೆ, ನೀರು ಮತ್ತು ವಾಯುಮಂಡಲದ ರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವ ಮೂಲಕ ಭೂ ಸಂರಕ್ಷಣೆಗಾಗಿ ಈ ದಿನವನ್ನು ಆಚರಿಸಲೇಬೇಕಾಗಿದೆ. ಈಗಾಗಲೇ ಬೇಸಿಗೆ ಆರಂಭವಾಗಿದೆ. ಬೇಸಿಗೆಯ ವಸಂತ ಕಾಲದಲ್ಲಿ ಗಿಡಮರಗಳು ಹಸಿರೆಲೆ ಚಿಗುರಿಸಿ, ಹೂ ಅರಳಿಸಿ ನಿಂತಿವೆ. ಈಗ ಸ್ವಲ್ಪ ಪ್ರಮಾಣದ ಮಳೆಯ ಸಿಂಚನವಾಗಿದೆ. ನಾನಾ ಬಣ್ಣಗಳ ಕಪ್ಪೆ-ಕೀಟ-ಪ್ರಾಣಿ-ಪಕ್ಷಿಗಳು ತಮ್ಮ ಮರಿಗಳೊಂದಿಗೆ ಸಂಗೀತ ಹಾಡಲು ತೊಡಗಿವೆ. ಜೀವಲೋಕದ ಎಲ್ಲಡೆ ನಲಿವು, ಸಂತಸ ಹೊಮ್ಮುತ್ತಿದೆ. ಈ ಸುಂದರ ಪೃಥ್ವಿಯ ಹುಟ್ಟುಹಬ್ಬ (ಭೂಮಿಯ ದಿನ) ವನ್ನು ಆಚರಿಸುವ ಸಮಯ ಬಂದಿದೆ.
ಪರಿಸರ – ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ನಮ್ಮ ದೈನಿಕ ಬದುಕನ್ನು ನಿಯಂತ್ರಿಸುವ ಪರಿಸರವನ್ನು ನಾಳಿನ ಜನಾಂಗಕ್ಕೆ ಉಳಿಸುವ ದಿಸೆಯಲ್ಲಿ ಪರಿಸರವನ್ನು ನಾವು ಕಾಪಾಡಿ ಸಂರಕ್ಷಿಸಬೇಕಿದೆ. ಭವಿಷ್ಯತ್ತಿಗಾಗಿ ನಾವು ನೆಲ -ಜಲ, ಅರಣ್ಯ, ವನ್ಯಜೀವಿಗಳು ಹಾಗೂ ಜೀವಿ ವೈವಿಧ್ಯ ಸಂರಕ್ಷಿಸುವ ಮೂಲಕ ಪರಿಸರ ಸಂರಕ್ಷಿಸಬೇಕಿದೆ. ಪರಿಸರದ ಬಗ್ಗೆ ನಿರ್ಲಕ್ಷ್ಯ ವಹಿಸಿದಲ್ಲಿ ಭವಿಷ್ಯತ್ತಿನಲ್ಲಿ ತೀವ್ರ ಗಂಡಾಂತರ ಪರಿಸ್ಥಿತಿ ಎದುರಿಸಬೇಕಾಗುತ್ತದೆ.
ನದಿ, ಕೆರೆ ಹಾಗೂ ಜಲಮೂಲಗಳು ಸೇರಿದಂತೆ ಅಂತರ್ಜಲ ಸಂರಕ್ಷಣೆಗೆ ನಾವು ಹೆಚ್ಚಿನ ಜಾಗೃತಿ ವಹಿಸಬೇಕಿದೆ. ಪ್ರಕೃತಿಯಲ್ಲಿ ಈಗಾಗಲೇ ನೂರಾರು ಸಸ್ತನಿಗಳು ಹಾಗೂ ಪಕ್ಷಿ ಪ್ರಬೇಧಗಳು ಶಾಶ್ವತವಾಗಿ ನಾಶಗೊಂಡಿವೆ. ಅಪರೂಪದ ಸಸ್ಯ ಮತ್ತು ಜೀವಿಗಳನ್ನೊಳಗೊಂಡ ಅರಣ್ಯ ಹಾಗೂ ಜೀವಿ ವೈವಿಧ್ಯ ಸಂಪತ್ತನ್ನು ಹೊಂದಿರುವ ಪಶ್ಚಿಮ ಘಟ್ಟ ಸಂರಕ್ಷಣೆಗೆ ನಾವು ಹೆಚ್ಚಿನ ಕಾಳಜಿ ವಹಿಸದಿದ್ದಲ್ಲಿ ಇಡೀ ಜೀವ ಸಂಕುಲವೇ ನಾಶವಾಗುವ ಅಪಾಯವಿದೆ.
ಇರುವುದೊಂದೇ ಭೂಮಿ : ಪ್ರಕೃತಿಯಲ್ಲಿ ಏಕಾಂಗಿ ಎಂಬುದೇ ಇಲ್ಲ. ಪ್ರತಿಯೊಂದು ಜೀವಿಗೂ ಜೀವಿಸುವ ಸಮಾನ ಹಕ್ಕಿದೆ. ಜೀವಿಗಳಿರುವ ಏಕೈಕ ಗ್ರಹವಾದ ಭೂಮಿಯೇ ನಮ್ಮ ಮನೆ, ಹಾಗಾಗಿ ಎಲ್ಲಾ ಜೀವಿಗಳು ಜೀವಿಸಲು ಇರುವುದೊಂದೇ ಭೂಮಿ. ನಾವು ಇದನ್ನು ಸಂರಕ್ಷಿಸಿ, ಸಂಪೋಷಿಸಿ ಮುಂದಿನ ಪೀಳಿಗೆಗೆ ಜೋಪಾನವಾಗಿ ಹಸ್ತಾಂತರಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ನಾವೆಲ್ಲರೂ ಭೂಮಿಯಲ್ಲಿರುವ ಅಮೂಲ್ಯ ಸಂಪತ್ತನ್ನು ರಕ್ಷಿಸುವ ಗುರುತರ ಜವಾಬ್ದಾರಿ ಎಲ್ಲರ ಮೇಲಿದೆ. ಭಾರತೀಯರಾದ ನಮಗೆ ಭೂಮಿಯ ಪಾವಿತ್ರ್ಯದ ಕಲ್ಪನೆ ಹೊಸದೇನಲ್ಲ. ಪುರಾತನ ಕಾಲದಿಂದಲೂ ಭೂಮಿಯನ್ನು ‘ಭೂ
ಮಾತೆ ’ ಎಂದು ಕರೆದು ಗೌರವ,ಆದರ ನೀಡುತ್ತಾ ಬಂದವರು ನಾವು. 2007 ರಲ್ಲಿ ವಿವಿಧ ದೇಶಗಳ ಅಂದಾಜು ನೂರುಕೋಟಿ ಜನರು ಭೂ ದಿನಾಚರಣೆಗೆ ಮುಂದೆ ಬಂದು ಭೂ ದಿನವನ್ನು ಸಡಗರದಿಂದ ಹಬ್ಬವನ್ನಾಚರಿಸಿದರು. ಕ್ರಮೇಣ ಭೂಮಿಯ ತಾಪಮಾನ ಹೆಚ್ಚುತ್ತ ಹೋದರೆ ಶಾಂತ ಸಾಗರದ ನಡುವೆ ಇರುವ ‘ ಟುವಾಲು’ ಹೆಸರಿನ ಪುಟ್ಟ ದ್ವೀಪದೇಶ ಮುಳುಗಿಯೇ ಹೋದೀತೆಂದು ವಿಜ್ಞಾನಿಗಳು ಎಚ್ಚರಿಸಿದ್ದನ್ನು ಮನಗಂಡು ಅಲ್ಲಿನ ನಿವಾಸಿಗಳೂ ಭೂದಿನವನ್ನು ಆಚರಿಸಲೆಂದು ಮುಂದೆ ಬಂದರು. ಈಚಿನ ವರ್ಷಗಳಲ್ಲಿ ಭೂದಿನವನ್ನು ಎಲ್ಲಾ ದೇಶಗಳಲ್ಲಿ ಎಳೆಯರು, ಯುವಜನರು ಹಾಗೂ ಹಿರಿಯ ನಾಗರಿಕರು ತುಂಬಾ ಉತ್ಸಾಹದಿಂದ ಆಚರಿಸುತ್ತಾರೆ. ನಂತರ ವಿಶ್ವಸಂಸ್ಥೆಯೇ 2009 ರಲ್ಲಿ ಭೂ ದಿನದಲ್ಲಿ ಪಾಲ್ಗೊಂಡು ಏಪ್ರಿಲ್ 22 ನ್ನು ಅಂತರಾಷ್ಟ್ರೀಯ ‘ ಭೂ ದಿನ ’ ಎಂದು ಘೋಷಿಸಿತು. ವಿಶ್ವ ಭೂ ದಿನದ ಈ ವರ್ಷದ ಕೇಂದ್ರ ವಿಷಯವು ‘ನಮ್ಮ ಶಕ್ತಿ ನಮ್ಮ ಗ್ರಹ’ ಆಗಿದೆ. ಭೂ ದಿನದ ಸಂದರ್ಭ ನಮಗೆ ಮತ್ತು ಭೂಮಿಗೆ ಇರುವ ಸಂಬಂಧವನ್ನು ನೆನಪಿಸಿಕೊಳ್ಳುವ ದಿನ. ನಾವು ನಿಸರ್ಗದಿಂದ ಅದೆಷ್ಟೇ ದೂರ ಬಂದರೂ ನಮ್ಮ ಮತ್ತು ಭೂಮಿಯ ಸಂಬಂಧ ಮಾತ್ರ ಸಡಿಲವಾಗುವುದಿಲ್ಲ. ನಮ್ಮ ಪ್ರತಿಯೊಂದು ಚಟುವಟಿಕೆಯೂ ಆ ಸಂಬಂಧವನ್ನು ಉತ್ತಮಗೊಳಿಸುತ್ತದೆ ಇಲ್ಲವೆ ಬಿಗಡಾಯಿಸುತ್ತದೆ. ಯಾವುದು ಉತ್ತಮಗೊಳಿಸುತ್ತದೆ ಎಂಬ ತಿಳುವಳಿಕೆ ನಮಗಿರಬೇಕು. ನಾವು ಈ ‘ ಭೂ ದಿನ ’ವನ್ನು ಹಿಂದೆಂದಿಗಿಂತಲೂ ವ್ಯಾಪಕವಾಗಿ ಮತ್ತು ಶ್ರದ್ಧೆಯಿಂದ ಆಚರಿಸಬೇಕಾದ ದಿನಗಳು ಬಂದಿವೆ. ಏಕೆಂದರೆ ಭೂಮಿಯ ಒಟ್ಟಾರೆ ಸ್ಥಿತಿಗತಿ ನಿಜಕ್ಕೂ ದಿನದಿನಕ್ಕೆ ಆತಂಕಕಾರಿ ಆಗುತ್ತಿದೆ. ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಹಾಗೂ ನೆಲ ಮಾಲಿನ್ಯ ಎಲ್ಲವೂ ಹೆಚ್ಚುತ್ತಿವೆ. ಭೂಮಿಯ ಧಾರಣ ಸಾಮಥ್ರ್ಯವನ್ನು ಕಡಿಮೆ ಮಾಡುತ್ತಿವೆ. ಸಹನಾ ಶಕ್ತಿಯನ್ನು ಒಡ್ಡುತ್ತಿವೆ. ದಿನೇ ದಿನೇ ಭೂಮಿ ಬಿಸಿಯಾಗುತ್ತಿದೆ. ಅದರಿಂದಾಗಿ ಹವಾಮಾನ ಸಮತೋಲ ಬಿಗಡಾಯಿಸುತ್ತಿದೆ. ಭೀಕರ ಮಳೆಗಾಲ, ಪ್ರಕೃತಿ ವಿಕೋಪ ಇಲ್ಲವೆ ಭೀಕರ ಬರಗಾಲಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. ಇಂದು ನಾವು ಗಾಳಿಶಕ್ತಿ, ಸೌರಶಕ್ತಿ, ಜೀವದ್ರವ್ಯಶಕ್ತಿ(ಜೈವಿಕ ಇಂಧನ), ಅಲೆಶಕ್ತಿಗಳೆಲ್ಲವನ್ನೂ ಮತ್ತೆ ಬಳಕೆಗೆ ಈಗೀಗ ತರುತ್ತಿದ್ದೇವಾದರೂ ಫಾಸಿಲ್ ಇಂಧನ(ಪೆಟ್ರೋಲಿಯಂ)ಗಳು ಇಲ್ಲದಿದ್ದರೆ ನಮ್ಮ ಒಂದು ದಿನವನ್ನೂ ಕಳೆಯುವುದು ನಮಗೆ ಕಷ್ಟವಾಗುತ್ತಿದೆ. ಈ ಬಗೆಯೆ ಪೆಟ್ರೋಲ್ ದಾಸ್ಯದಿಂದ ಹೊರಬರುವ ಮಾರ್ಗಗಳನ್ನು ನಾವು ಆದಷ್ಟು ಶೀಘ್ರವಾಗಿ ಹುಡುಕಬೇಕಿದೆ.
ವೈಯಕ್ತಿಕ ಮಟ್ಟದಲ್ಲಿ ನಮ್ಮ ನಡವಳಿಕೆಗಳು ಬದಲಾಗಬೇಕಿದೆ. ಪರಿಸರ ರಕ್ಷಣೆಯ ಕಾನೂನುಗಳಿಗೆ ನಾವೆಲ್ಲ ಬದ್ಧರಾಗಬೇಕಾಗಿದೆ. ಸಾಮೂಹಿಕ ಸ್ತರದಲ್ಲಿ ಇಡೀ ಸಮಾಜವೇ ಒಂದಾಗಿ ಭೂ ಸಂರಕ್ಷಣೆಯಲ್ಲಿ ತೊಡಗಬೇಕಾಗಿದೆ. ನಮ್ಮ ಅಜ್ಞಾನದಿಂದಾಗಿ ಅಥವಾ ನಿರ್ಲಕ್ಷ್ಯದಿಂದಾಗಿ ಭೂಮಿಗೆ ಮತ್ತು ಇತರ ಭೂವಾಸಿಗಳಿಗೆ ಏನೇನು ಅನ್ಯಾಯ, ಅಪಚಾರವಾಗುತ್ತಿದೆ ಎಂಬುದನ್ನು ನಾವು ಮನಗಾಣಬೇಕಿದೆ. ಆದ್ದರಿಂದ ನಿಜವಾದ ಭೂ ದಿನಾಚರಣೆ ನಮ್ಮ ನಮ್ಮ ಮನೆಗಳಲ್ಲಿ, ನಸುಕಿನಲ್ಲಿ ಆರಂಭವಾಗಬೇಕು. ಕಸದ ತೊಟ್ಟಿಯಿಂದಲೇ ಆರಂಭವಾದರೆ ಉತ್ತಮ. ಇವೋತ್ತಿನಿಂದ ಕಸವನ್ನು ವಿಂಗಡಣೆ ಮಾಡಿ, ಜೈವಿಕ ಮತ್ತು ಅಜೈವಿಕ ತ್ಯಾಜ್ಯವನ್ನು ಬೇರ್ಪಡಿಸಿ ಸೂಕ್ತವಾಗಿ ವಿಲೇವಾರಿ ಮಾಡೋಣ. ಮನೆಯ ಪರಿಸರದ ಹಿತ್ತಿಲ್ಲಲ್ಲೇ ಜೈವಿಕ ಕಸವನ್ನು ಕೊಳೆಯಿಸಿ ಕಾಂಪೋಸ್ಟ್ ಮಾಡುವ ನಿರ್ಧಾರವನ್ನು ಕೈಗೊಳ್ಳಲು ಸೂಕ್ತ ದಿನ. ಹಸಿದ ಭೂಮಿಗೆ ಸತ್ವ ತುಂಬುವ ಮೊದಲ ಹೆಜ್ಜೆ ಇದು. ಮನೆಯಲ್ಲಿರುವ ಬುರುಡೆ ಬಲ್ಬ್‍ಗಳನ್ನೂ, ಟ್ಯೂಬ್‍ಲೈಟ್‍ಗಳನ್ನೂ ತೆಗೆದು ಹಾಕಿ ಸಿ.ಎಫ್.ಎಲ್., ಎಲ್.ಇ.ಡಿ. ಬಲ್ಬ್‍ಗಳನ್ನು ಅಲವಡಿಸುವ ದಿನ ಇದು. ನೀರು ಕಾಯಿಸಲು ವಿದ್ಯುತ್ ಗೀಸರ್ ಬಳಕೆ ಮಾಡುವುದಿಲ್ಲ ಎಂದು ಪ್ರತಿಜ್ಞೆ ಕೈಗೊಂಡು, ಸೋಲಾರ್(ಸೌರಶಕ್ತಿ) ಶಾಖದಿಂದಲೇ ನೀರನ್ನು ಕಾಯಿಸುವ ಉಪಕರಣವನ್ನು ಹಾಕಿಸಿಕೊಳ್ಳಬೇಕಾದ ದಿನ ಇದು. ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಬಳಕೆಯನ್ನು ಆದಷ್ಟು ತ್ಯಜಿಸಿ ಪರ್ಯಾಯವಾಗಿ ಬಟ್ಟೆ, ಸೆಣಬಿನ ಬ್ಯಾಗ್ ಬಳಕೆಗೆ ಒತ್ತು ಕೊಡುವ ದಿನ ಇದು. ಮಳೆನೀರನ್ನು ಸಂಗ್ರಹಿಸಿ ಬಳಸಲು ನಿರ್ಧರಿಸಿ ಕಾರ್ಯಪ್ರವೃತರಾಗುವ ದಿನ ಇದು. ಮನೆಯಿಂದ ಒಂದೆರಡರು ಕಿಲೋಮೀಟರ್ ದೂರದವರೆಗಿನ ಯಾವುದೇ ಪ್ರಯಾಣಕ್ಕೂ ವಾಹನದ ಬದಲಿಗೆ ಬೈಸಿಕಲ್‍ಅನ್ನು ಬಳಸುತ್ತೇನೆ ಎಂಬ ನಿರ್ಣಯ ಕೈಗೊಳ್ಳುವ ದಿನ ಇದು. ಹೀಗೆ ಇನ್ನೂ ಹತ್ತು ಹಲವು ಪರಿಸರಪೂರಕ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ನಾವು ಭೂ ದಿನವನ್ನು ಆಚರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಪ್ರತಿಜ್ಞೆ ಕೈಗೊಳ್ಳೋಣ. ಈ ದಿಸೆಯಲ್ಲಿ ನಾವು ಪರಿಸರಕ್ಕೆ ಯಾವುದೇ ಧಕ್ಕೆಯನ್ನುಂಟು ಮಾಡದೆ ಭೂಮಿಯನ್ನು ಸಂರಕ್ಷಿಸಬೇಕಿದೆ. ಭೂ ಮಾಲಿನ್ಯ ತಡೆಗಟ್ಟುವ ಮೂಲಕ ನೆಲ- ಜಲ, ಜೀವಿ ವೈವಿಧ್ಯ ಹಾಗೂ ಪರಿಸರ ಸಂರಕ್ಷಣೆಗೆ ದಿಟ್ಟ ಹೆಜ್ಜೆ ಇಡಬೇಕಿದೆ. ಈ ದಿಸೆಯಲ್ಲಿ ನಮ್ಮ ನಡಿಗೆ ಪರಿಸರದೆಡೆಗೆ ಆಗಬೇಕಿದೆ.
ನಾವು ನಮ್ಮ ಆಸ್ತಿ- ಪಾಸ್ತಿ, ವೈಯಕ್ತಿಕ ಸ್ವಚ್ಛತೆ ಮತ್ತು ನಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ಹಾಗೂ ನಮ್ಮ ಮನೆಯ ಬಗ್ಗೆ ಕಾಳಜಿ ವಹಿಸಿದಂತೆಯೇ ನಮ್ಮನ್ನು ರಕ್ಷಿಸುತ್ತಿರುವ ಭೂಮಿಯ ಸಂರಕ್ಷಣೆ ಬಗ್ಗೆಯೂ ವಿಶೇಷ ಕಾಳಜಿ ವಹಿಸಬೇಕಿದೆ. ಹಾಗಾದರೆ , ಬನ್ನಿ ! ಇರುವುದೊಂದೇ ಭೂಮಿ ; ಇದನ್ನು ಸಂರಕ್ಷಿಸಿ, ಸಂಪೋಷಿಸಿ ಮುಂದಿನ ಪೀಳಿಗೆಗೆ ವಸುಂಧರೆಯನ್ನು ಪುನಃಶ್ಚೇತಗೊಳಿಸೋಣ.

ಲೇಖನ :: ಟಿ.ಜಿ.ಪ್ರೇಮಕುಮಾರ್,
ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಶಿಕ್ಷಕರು,
ಮುಖ್ಯ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಕೂಡುಮಂಗಳೂರು,
ಕೊಡಗು ಜಿಲ್ಲೆ (ಮೊ.ನಂ:94485 88352)

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.