Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಖಿಲ ಭಾರತ ಸೈನಿಕ ಶಾಲೆಗಳ ಫುಟ್ಬಾಲ್ ಪಂದ್ಯಾವಳಿ : ಕೊಡಗು ಸೈನಿಕ ಶಾಲೆಯ ತಂಡ ಚಾಂಪಿಯನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಖಿಲ ಭಾರತ ಸೈನಿಕ ಶಾಲೆಗಳ ಫುಟ್ಬಾಲ್ ಪಂದ್ಯಾವಳಿ : ಕೊಡಗು ಸೈನಿಕ ಶಾಲೆಯ ತಂಡ ಚಾಂಪಿಯನ್*

ಏಪ್ರಿಲ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.25 NEWS DESK : ಅಖಿಲ ಭಾರತ ಸೈನಿಕ ಶಾಲೆಗಳ ಫುಟ್ಬಾಲ್ ಕ್ರೀಡಾಕೂಟದಲ್ಲಿ ಕೊಡಗು ಸೈನಿಕ ಶಾಲೆಯ ತಂಡ ಮೂರು ವಿಭಾಗಗಳಲ್ಲೂ ಪ್ರಥಮ ಸ್ಥಾನ ಪಡೆಯುವ ಮೂಲಕ ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ಕೊಡಗು ಸೈನಿಕ ಶಾಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆದ ಅಖಿಲ ಭಾರತ ಸೈನಿಕ ಶಾಲೆಗಳ ಪುಟ್ಬಾಲ್ ಕ್ರೀಡಾಕೂಟದಲ್ಲಿ ಕೇರಳದ ಕಝಕೊಟ್ಟಂ ಸೈನಿಕ ಶಾಲೆ, ತಮಿಳುನಾಡಿನ ಅಮರಾವತಿ ಸೈನಿಕ ಶಾಲೆ, ಆಂಧ್ರಪ್ರದೇಶದ ಕಲಿಕಿರಿ ಸೈನಿಕ ಶಾಲೆ ಹಾಗೂ ಅತಿಥೇಯ ಕೊಡಗು ಸೈನಿಕ ಶಾಲೆಗಳು ಭಾಗವಹಿಸಿದ್ದವು. ಬಾಲಕರ ಜೂನಿಯರ್, ಬಾಲಕರ ಸಬ್ ಜೂನಿಯರ್ ಹಾಗೂ ಬಾಲಕಿಯರ ಜೂನಿಯರ್ ಎಂಬ ಮೂರು ವಿಭಾಗಗಳಲ್ಲಿ ನಡೆದ ಪಂದ್ಯಾವಳಿಯಲ್ಲಿ ಅತಿಥೇಯ ಸೈನಿಕ ಶಾಲೆ ಕೊಡಗು ತಂಡ ಎಲ್ಲಾ ಮೂರು ವಿಭಾಗಗಳಲ್ಲಿಯೂ ಪ್ರಥಮ ಸ್ಥಾನವನ್ನುಗಳಿಸಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ಬಾಲಕರ ಜೂನಿಯರ್ ವಿಭಾಗದಲ್ಲಿ ಸೈನಿಕ ಶಾಲೆ ಕಝಕೊಟಂ, ಬಾಲಕರ ಸಬ್ ಜೂನಿಯರ್ ವಿಭಾಗದಲ್ಲಿ ಸೈನಿಕ ಶಾಲೆ ಕಲಿಕಿರಿ ಹಾಗೂ ಬಾಲಕಿಯರ ಜೂನಿಯರ್ ವಿಭಾಗದಲ್ಲಿ ಕಲಿಕಿರಿ ತಂಡವು ರನ್ನರ್ ಅಪ್ ತಂಡವಾಗಿ ದ್ವಿತೀಯ ಸ್ಥಾನ ಪಡೆದುಕೊಂಡಿತು.
ವೈಯಕ್ತಿಕ ಬಹುಮಾನ :: ವೈಯಕ್ತಿಕ ವಿಭಾಗದಲ್ಲಿ ಅತ್ತುತ್ತಮ ಆಟಗಾರ ಪ್ರಶಸ್ತಿಯನ್ನು ಜೂನಿಯರ್ ವಿಭಾಗದಲ್ಲಿ ಸೈನಿಕ ಶಾಲೆ ಕೊಡಗಿನ ಕೆಡೆಟ್ ರೋಹಿತ್ ರಾಜ್, ಸಬ್ ಜೂನಿಯರ್ ವಿಭಾಗದಲ್ಲಿ ಸೈನಿಕ ಶಾಲೆ ಕೊಡಗಿನ ಕೆಡೆಟ್ ಶಿವೇಂದ್ರ, ಹಾಗೂ ಬಾಲಕಿಯರ ಜೂನಿಯರ್ ವಿಭಾಗದಲ್ಲಿ ಸೈನಿಕ ಶಾಲೆ ಕಲಿಕಿರಿಯ ಕೆಡೆಟ್ ಗೊಲ್ಲ ಮೋಕ್ಷಶ್ರೀ ಪಡೆದರು. ಅತ್ಯುತ್ತಮ ಗೋಲ್ ಕೀಪರ್ ಪ್ರಶಸ್ತಿಯನ್ನು ಬಾಲಕರ ಜೂನಿಯರ್ ವಿಭಾಗದಿಂದ ಸೈನಿಕ ಶಾಲೆ ಕೊಡಗಿನ ಕೆಡೆಟ್ ಆರ್ಯ ಚಿರಾಗ್, ಬಾಲಕರ ಸಬ್ ಜೂನಿಯರ್ ವಿಭಾಗದಲ್ಲಿ ಸೈನಿಕ ಶಾಲೆ ಕೊಡಗಿನ ಕೆಡೆಟ್ ಶಮಂತ್ ಹಾಗೂ ಬಾಲಕಿಯ ಜೂನಿಯರ್ ವಿಭಾದಲ್ಲಿ ಸೈನಿಕ ಶಾಲೆ ಕಝೊಟ್ಟಂನ ಕೆಡೆಟ್ ಹರಿನಂದ ವಿ.ಎಸ್ ಪಡೆದರು. ಹಾಗೆಯೇ ಕ್ರೀಡಾಕೂಟದಲ್ಲಿ ಅಸಾಧಾರಣ ಸಾಧನೆಗೈದು ಕ್ರೀಡಾಕೂಟದ ಪಂದ್ಯಪುರುಷ ಪ್ರಶಸ್ತಿಯನ್ನು ಸೈನಿಕ ಶಾಲೆ ಕೊಡಗಿನ ಕೆಡೆಟ್ ಯಶ್ ಪ್ರತಾಪ್ ಪಡೆದರು.
ಸಮಾರೋಪ ಸಮಾರಂಭ :: ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಕೊಡಗು ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಮಾತನಾಡಿ, ಕ್ರೀಡಾಕೂಟಗಳು ಕೇವಲ ಸ್ಪರ್ಧೆಯ ವೇದಿಕೆಗಳು ಮಾತ್ರವಲ್ಲ, ಪ್ರತಿಯೊಬ್ಬ ಸ್ಪರ್ಧಾಳುವಿನ ಪ್ರತಿಭೆಯ ಅನಾವರಣ, ಕಲಿಕೆ, ಬಾಂಧವ್ಯ ಹಾಗೂ ವಿಚಾರಗಳ ವಿನಿಮಯಗಳ ಸಮಾಗಮಕ್ಕೆ ಅವಕಾಶ ನೀಡುತ್ತವೆ. ಈ ಅಂಶಗಳು ಕ್ರೀಡಾಂಗಣದಿಂದಾಚೆಯೂ ಸಹ ಮುಂದುವರೆಯುವ ಬಾಂಧವ್ಯಗಳಾಗಿರುತ್ತವೆ. ಭಾಗವಹಿಸಿದ ಕ್ರೀಡಾಪಟುಗಳು ಇಲ್ಲಿ ಕಲಿತ ಅನುಭವ ಮತ್ತು ಮೌಲ್ಯಗಳನ್ನು ತಮ್ಮ ಭವಿಷ್ಯದ ಜೀವನ ಯಾತ್ರೆಯಲ್ಲಿ ಅನ್ವಯಿಸಿಕೊಂಡು, ಉಜ್ವಲ ಬದುಕಿಗೆ ಸಾಕಾರವಾಗಲಿ ಎಂದು ಹಾರೈಸಿದರು. ಇತಿಹಾಸದಲ್ಲಿ ಮೊದಲ ಬಾರಿಗೆ ಕೊಡಗಿನ ಸೈನಿಕ ಶಾಲೆಯು ನಿಗದಿಪಡಿಸಿದ್ದ ಎಲ್ಲಾ ಮೂರು ವಿಭಾಗಗಳಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವುದು ಪ್ರಶಂಸನೀಯ ಎಂದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಸ್ಕ್ವಾಡ್ರನ್ ಲೀಡರ್ ಮೊಹಮ್ಮದ್ ಶಾಜಿ, ಪ್ರಥಮ ಮಹಿಳೆ ದಿವ್ಯಾ ಸಿಂಗ್, ಶಾಲಾ ವೈದ್ಯಾಧಿಕಾರಿ ಡಾ.ಚಿನ್ಮಯಿ ಹಾಗೂ ಹಿರಿಯ ಶಿಕ್ಷಕರಾದ ವಿಬಿನ್ ಕುಮಾರ್, ವಿವಿಧ ತಂಡಗಳ ಮೇಲ್ವಿಚಾರಕರು, ಶಾಲೆಯ ಬೋಧಕ-ಬೋಧಕೇತರ ವರ್ಗದವರು, ದೈಹಿಕ ಶಿಕ್ಷಕರು, ಎನ್ ಸಿ ಸಿ ಸಿಬ್ಬಂದಿವರ್ಗ ಹಾಗೂ ಎಲ್ಲಾ ವಿದ್ಯಾರ್ಥಿಗಳು ಹಾಜರಿದ್ದರು. ಸ್ಪರ್ಧಾಳುಗಳು ಸಮಾರೋಪ ಸಮಾರಂಭದ ಪಥಸಂಚಲನವನ್ನು ನಡೆಸಿಕೊಟ್ಟರು. ನಂತರ ಶಾಲಾ ವಿದ್ಯಾರ್ಥಿ ನಾಯಕ ಕೆಡೆಟ್ ಹೃದಯ್ ಶಾಲೆಯ ಪ್ರಾಂಶುಪಾಲರಿಗೆ ಸೈನಿಕ ಶಾಲಾ ಸೊಸೈಟಿಯ ಧ್ವಜವನ್ನು ಹಸ್ತಾಂತರಿಸುವುದರ ಮೂಲಕ ಕ್ರೀಡಾಕೂಟವು ಸಂಪನ್ನಗೊಂಡಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.4 NEWS DESK : ಹೆರವಾನಾಡು ಗ್ರಾಮದ ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ…

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.