
ಸುಂಟಿಕೊಪ್ಪ ಏ.25 NEWS DESK : 7ನೇ ಹೊಸಕೋಟೆ ಗ್ರಾ.ಪಂ ಆವರಣದಲ್ಲಿ ಸಂಜೀವಿನಿ ಒಕ್ಕೂಟ ಹಾಗೂ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಮೊಂಬತ್ತಿ ಹಿಡಿದು ಸಂತಾಪ ಸೂಚಿಸಿದರು. ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲತಾ ಬಸವರಾಜ್ ರವರ ನೇತೃತ್ವದಲ್ಲಿ ಜಮ್ಮು ಕಾಶ್ಮೀರದ ಪಹಲ್ಗಾಮ್ ಗ್ರಾಮದಲ್ಲಿ ತೀವ್ರ ವಾದಿಗಳು ನಡೆಸಿದ ಅತಿ ಕ್ರೂರ ಆಕ್ರಮಣವನ್ನು ಹಾಗೂ ಅಮಾಯಕರ ಬಲಿ ಪಡೆದ ಕ್ರಮವನ್ನು ಖಂಡಿಸಿ ಮೃತರ ಭಾವಚಿತ್ರಗಳನ್ನು ಇರಿಸಿ ಪುಷ್ಪಾರ್ಚನೆ ಸಲ್ಲಿಸಿ ಮೊಂಬತ್ತಿ ಬೆಳಗಿಸಿ, ಮೌನಾಚರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರಾದ ಪಿ.ಸೋಮಚಂದ್ರ, ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಬಿ.ಜೋಸೆಫ್, ಸದಸ್ಯರುಗಳಾದ ರಮೇಶ್, ಸಿದ್ಧೀಕ್, ಒಕ್ಕೂಟದ ಸದಸ್ಯರುಗಳಾದ ರಶ್ಮಿ, ಉಷಾ ಶ್ರೀಧರ್, ಪಂಚಾಯಿತಿ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಇದ್ದರು.









