Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏ.27 ರಂದು ಮಂಡೇಪಂಡ ಮತ್ತು ಚೇಂದಂಡ ನಡುವೆ ಮುದ್ದಂಡ ಕಪ್ ಗಾಗಿ ರೋಚಕ ಹಣಾಹಣಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏ.27 ರಂದು ಮಂಡೇಪಂಡ ಮತ್ತು ಚೇಂದಂಡ ನಡುವೆ ಮುದ್ದಂಡ ಕಪ್ ಗಾಗಿ ರೋಚಕ ಹಣಾಹಣಿ*

ಏಪ್ರಿಲ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.26 NEWS DESK : ಹದಿನಾಲ್ಕರ ಹರೆಯದ ಪೋರ, ಗೋಲ್ ಕೀಪರ್ ಮಂಡೇಪಂಡ ದ್ಯಾನ್ ಬೆಳ್ಯಪ್ಪ ಅವರ ಅತ್ಯಮೋಘ ಆಟದ ಪ್ರದರ್ಶನದಿಂದ ಮಂಡೇಪಂಡ ಕೊಡವ ಕೌಟುಂಬಿಕ ಮುದ್ದಂಡ ಕಪ್ ಹಾಕಿ ಪಂದ್ಯಾವಳಿಯ ಫೈನಲ್ ಪ್ರವೇಶಿಸಿದ್ದು, ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಪ್ರಶಸ್ತಿಗಾಗಿ 3 ಬಾರಿಯ ಛಾಂಪಿಯನ್ ಬಲಿಷ್ಠ ಚೇಂದಂಡ ತಂಡವನ್ನು ಎದುರಿಸಲಿದೆ. ‘ಶೂಟೌಟ್’ನಲ್ಲಿ  ಎದುರಾಳಿ, ಮೂರು ಬಾರಿಯ ಕೌಟುಂಬಿಕ ಹಾಕಿ ಪಂದ್ಯಾವಳಿ ಛಾಂಪಿಯನ್ ನೆಲ್ಲಮಕ್ಕಡ ತಂಡದ ಎರಡು ಗೋಲಿನ ಅವಕಾಶಗಳನ್ನು ಗೋಲಿ ಮಂಡೇಪಂಡ ಡ್ಯಾನ್ ಬೆಳ್ಯಪ್ಪ ವಿಫಲಗೊಳಿಸುತ್ತಿರುವಂತೆಯೇ ಮಂಡೇಪಂಡ ತಂಡ 5-4 ಗೋಲುಗಳ ಅಂತರದ ಮಹತ್ವದ ಗೆಲುವನ್ನು ತನ್ನದಾಗಿಸಿಕೊಂಡಿತು. ದ್ವಿತೀಯ ಸೆಮಿಫೈನಲ್‍ನಲ್ಲಿ ಚೇಂದಂಡ ತಂಡ 3-1 ಗೋಲುಗಳ ಅ0ತರದಿಂದ ಎದುರಾಳಿ ಕುಪ್ಪಂಡ (ಕೈಕೇರಿ) ತಂಡವನ್ನು ಮಣಿಸಿ ಫೈನಲ್‍ನಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿತು. ಮಂಡೇಪಂಡ-ನೆಲ್ಲಮಕ್ಕಡ- ಆಕ್ರಮಣಕಾರಿ ಆಟದ ಪ್ರದರ್ಶನ ಕಂಡ ಮೊದಲ ಸೆಮಿಫೈನಲ್‍ನಲ್ಲಿ ಮಂಡೇಪಂಡ ಮತ್ತು ನೆಲ್ಲಮಕ್ಕಡ ತಂಡಗಳು ಆರಂಭದಿಂದಲೆ ಪಂದ್ಯದ ಮೇಲೆ ಹಿಡಿತ ಸಾಧಿಸಿ ಗೋಲುಗಳಿಸುವ ಪ್ರಯತ್ನಕ್ಕೆ ಇಳಿಯುವುದರೊಂದಿಗೆ ಪಂದ್ಯದ ರೋಚಕತೆ ಹೆಚ್ಚಿತು. ಮೊದಲ ಕ್ವಾರ್ಟರ್‍ನಲ್ಲಿ ನೆಲ್ಲಮಕ್ಕಡ ತಂಡ ಪಡೆದ ಮೊದಲ ಪೆನಾಲ್ಟಿ ಕಾರ್ನರ್‌ನಲ್ಲಿ ತಂಡದ ಪ್ರತೀಕ್ ಪೂವಣ್ಣ ಅವರು ಡ್ರಾಗ್ ಫ್ಲಿಕ್ ಮೂಲಕ ಸಿಡಿಸಿದ ಅತ್ಯಾಕರ್ಷಕ ಗೋಲು ತಂಡಕ್ಕೆ 1-0 ಗೋಲಿನ ಮುನ್ನಡೆಯನ್ನು ದೊರಕಿಸಿಕೊಟ್ಟಿತು. ಮೊದಲ ಗೋಲಿನ ಮುನ್ನಡೆಯಿಂದ ಉತ್ತೇಜಿತ ನೆಲ್ಲಮಕ್ಕಡ ತಂಡ ಸತತ ದಾಳಿಗಳ ಮೂಲಕ ಮತ್ತೆರಡು ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ಪಡೆಯಿತಾದರು, ಅದನ್ನು ಗೋಲಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಮತ್ತೊಂದೆಡೆ ನೆಲ್ಲಮಕ್ಕಡ ತಂಡಕ್ಕೆ ಸಡ್ಡು ಹೊಡೆದ ಮಂಡೇಪಂಡ ತಂಡ ಯೋಜನಾಬದ್ಧ ದಾಳಿಗಳನ್ನು ಸಂಘಟಿಸಿದ್ದಲ್ಲದೆ, ಇದೇ ಮೊದಲ ಬಾರಿ ಅಳವಡಿಸಿದ್ದ ‘ರೆಫರಲ್’ಗೆ ಮೊರೆ ಹೋಗಿ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಪಡೆಯುವ ಪ್ರಯತ್ನದಲ್ಲಿ  ಒಮ್ಮೆ ಯಶಸ್ವಿಯಾಯಿತಾದರು, ದೊರಕಿದ ಪೆನಾಲ್ಟಿ ಕಾರ್ನರ್‌ ನ್ನು ಗೋಲಾಗಿ ಪರಿವರ್ತಿಸಲು ಸಾಧ್ಯವಾಗದೆ ನಿರಾಶೆಗೊಂಡಿತು. ದ್ವಿತೀಯ ಕ್ವಾರ್ಟರ್‍ ನಲ್ಲಿ ಇತ್ತಂಡಗಳು ಸಮಬಲದ ಆಟದ ಪ್ರದರ್ಶನ ನೀಡಿದವಾದರು ಗೋಲುಗಳು ದಾಖಲಾಗದೆ ಮೊದಲ ಅವಧಿಯ ಮುಕ್ತಾಯಕ್ಕೆ ನೆಲ್ಲಮಕ್ಕಡ 1-0 ಗೋಲಿನ ಮುನ್ನಡೆಯನ್ನು ಉಳಿಸಿಕೊಂಡಿತು. ಮಂಡೇಪಂಡ ತಿರುಗೇಟು…. ತೃತೀಯ ಕ್ವಾರ್ಟರ್‌ನಲ್ಲಿ  ನಿಖರ ಪಾಸ್‍ಗಳೊಂದಿಗೆ ಎದುರಾಳಿ ತಂಡದ ಗೋಲಿನ ಆವರಣಕ್ಕೆ ಸತತ ದಾಳಿಗಳನ್ನು ಸಂಘಟಿಸಿದ ಮಂಡೇಪಂಡ ತಂಡ, ನೆರವಂಡ ತಂಡದ ರಕ್ಷಣಾ ಕೋಟೆಯನ್ನು ಭೇದಿಸಿ ಮುನ್ನುಗ್ಗಿತಲ್ಲದೆ, ಮಂಡೇಪಂಡ ತಂಡದ ಮುನ್ಪಡೆ ಆಟಗಾರ ಗೌತಮ್ ಎದುರಾಳಿಯ ‘ಡಿ’ ಆವರಣದ ಬಲ ತುದಿಯಿಂದ ಸಿಡಿಸಿದ ಚೆಂಡು ಎದುರಾಳಿ ನೆಲ್ಲಮಕ್ಕಡ ತಂಡದ ಗೋಲಿಯನ್ನು ವಂಚಿಸಿ ಗೋಲ್ ಪೋಸ್ಟ್‍ನ ಒಳಹೋಗುತ್ತಿದ್ದಂತೆಯೇ ಪ್ರೇಕ್ಷಕರ ಹರ್ಷೋದ್ಘಾರ ಮುಗಿಲು ಮುಟ್ಟಿತು, ಕೊನೆಗೂ ಮಂಡೇಪಂಡ ತಂಡ ಸಮಬಲದ ಗೋಲು ದಾಖಲಿಸಿ ಪಂದ್ಯವನ್ನು 1-1 ಗೋಲಿನ ಸಮಸ್ಥಿತಿಗೆ ತಂದು ನಿಲ್ಲಿಸಿತು.ಕೊನೆಯ ಹಾಗೂ ನಾಲ್ಕವೇ ಕ್ವಾರ್ಟರ್‍ನಲ್ಲಿ ಇತ್ತಂಡಗಳು ದಾಳಿಯ ಆಟಕ್ಕೆ ಮೊರೆಹೋಗಿ ಕೆಲ ಗೋಲಿನ ಅವಕಾಶಗಳನ್ನು ಪಡೆದವಾದರು, ಅವುಗಳು ಗೋಲಾಗಿ ಪರಿವರ್ತನೆಯಾಗದೆ ಪಂದ್ಯ 1-1 ಗೋಲಿನೊಂದಿಗೆ ಡ್ರಾನಲ್ಲಿ ಮುಕ್ತಾಯವಾಯಿತು. ಶೂಟೌಟ್- ವಿಜೇತ ತಂಡವನ್ನು ನಿರ್ಧರಿಸುವ ಶೂಟೌಟ್‍ನಲ್ಲಿ ಮಂಡೇಪಂಡ 4 ಗೋಲುಗಳನ್ನು ಗಳಿಸಿದರೆ, ನೆಲ್ಲಮಕ್ಕಡ ತಂಡ 3 ಗೋಲುಗಳನ್ನಷ್ಟೆ ಗಳಿಸಲು ಶಕ್ತವಾಯಿತು. ಮಂಡೇಪಂಡ ತಂಡದ ಗೋಲಿ ಡ್ಯಾನ್ ಬೆಳ್ಯಪ್ಪ ಅತ್ಯಾಕರ್ಷಕ ಗೋಲು ರಕ್ಷಣೆಯ ಮೂಲಕ ಪ್ರೇಕ್ಷಕರ ನಿಜ ‘ಹೀರೋ’ ಆಗಿ ಕಂಗೊಳಿಸಿದರು. ಪರಾಜಿತ ತಂಡ ನೆಲ್ಲಮಕ್ಕಡ ತಂಡದ ಸಚಿನ್ ಅವರನ್ನು ಪಂದ್ಯ ಪುರುಷೋತ್ತಮರಾಗಿ ಗೌರವಿಸಲಾಯಿತು. ಚೇಂದಂಡ-ಕುಪ್ಪಂಡ(ಕೈಕೇರಿ)- ರೋಚಕತೆಯಿಂದ ಕೂಡಿದ್ದ ದ್ವಿತೀಯ ಸೆಮಿಫೈನಲ್‍ನಲ್ಲಿ ಚೇಂದಂಡ ತಂಡ ಎದುರಾಳಿ ಕುಪ್ಪಂಡ ತಂಡದ ವಿರುದ್ಧ ಬಹುತೇಕ ಪಂದ್ಯದುದ್ದಕ್ಕೂ ಪ್ರಭುತ್ವ ಸಾಧಿಸಿ 3-1 ಗೋಲುಗಳ ಅಂತರದಿಂದ ಮಣಿಸಿತು. ಚೇಂದಂಡ ತಂಡದ ನಿಕಿನ್ ತಿಮ್ಮಯ್ಯ 1 ಹಾಗೂ ತಮ್ಮಯ್ಯ 2 ಗೋಲುಗಳನ್ನು ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಪರಾಜಿತ ಕುಪ್ಪಂಡ(ಕೈಕೇರಿ) ತಂಡದ ಪರವಾಗಿ ನಾಚಪ್ಪ 1 ಗೋಲು ಗಳಿಸಿದರು. ಕುಪ್ಪಂಡ ಪಿ. ಸೋಮಯ್ಯ ಪಂದ್ಯ ಪುರುಷೋತ್ತಮ ಗೌರವಕ್ಕೆ ಪಾತ್ರರಾದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.