
ವಿರಾಜಪೇಟೆ ಏ.29 NEWS DESK : ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 1999-20 ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಸನ್ನಿ (ಅಜಿತ್ )ಅವರ ನೇತೃತ್ವದಲ್ಲಿ ಕ್ರೀಡಾಕೂಟ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಸಂತಸ ತಂದಿದೆ. ಇನ್ನು ಮುಂದೆಯೂ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಈ ಸಂದರ್ಭ ಚಿತ್ರನಟ ಸನ್ನಿ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಕೃಷ್ಣ, ಛಾಯಾಚಿತ್ರಗಾರ ಸಿದ್ದರಾಜು, ವಿದ್ಯುತ್ ನಿಗಮದ ನೌಕರ ಗಣಪತಿ, ಸೌಕಾತಾಲಿ, ಮಮತ, ಶ್ರೀಜಾ, ಅನೀಶ್ ಹಾಗೂ ಹಲವು ವರ್ಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸ್ನೇಹಿತರು ಪಾಲ್ಗೊಂಡಿದ್ದರು.ನೆರೆದಿದ್ದ ಎಲ್ಲಾ ಹಳೆಯ ವಿದ್ಯಾರ್ಥಿಗಳು ಪುಹಾಲ್ಗಮ್ ದುರಂತದಲ್ಲಿ ಮಡಿದವರಿಗೆ ಶ್ರದ್ದಾಂಜಲಿ ಸಲ್ಲಿಸುವುದರ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.









