
ವಿರಾಜಪೇಟೆ ಮೇ 5 NEWS DESK : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯೆಯಾಗಿ ಬಿಜೆಪಿಯ ಹಿರಿಯ ಮುಖಂಡರಾದ ಮನೆಯಪಂಡ ಕಾಂತಿ ಸತೀಶ್ ಆಯ್ಕೆಯಾಗಿದ್ದಾರೆ. ವಿರಾಜಪೇಟೆಯ ಮನೆಯಪಂಡ ಕಾಂತಿ ಸತೀಶ್ ರವರು ಕೊಡಗು ಬಿಜೆಪಿ ಮಹಿಳಾ ಮೋಚಾ೯ದ ಅಧ್ಯಕ್ಷೆಯಾಗಿ ಕಾಯ೯ನಿವ೯ಹಿಸಿದ್ದರು. ಅಂತೆಯೇ, ಕೊಡಗು ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಪಂಚಾಯತ್ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಾಗೂ ವೀರಾಜಪೇಟೆ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಇದೀಗ ಲೋಕಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಒಡೆಯರ್ ಅಧ್ಯಕ್ಷರಾಗಿರುವ ಕೇಂದ್ರ ಸಕಾ೯ರಗಳ ಯೋಜನೆಗಳ ಅನುಷ್ಟಾನ ಸಂಬಂಧಿತ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸದಸ್ಯೆಯಾಗಿ ನೇಮಕಗೊಂಡಿದ್ದಾರೆ.








