Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*
  • *ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*
  • *ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*
  • *ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*
  • *ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*
  • *ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*
  • *ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*
  • *ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ 9 ರಿಂದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಆರಂಭ : ಮೇ 10 ರಂದು ನಾಗದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ 9 ರಿಂದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಆರಂಭ : ಮೇ 10 ರಂದು ನಾಗದರ್ಶನ*

ಮೇ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 5 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲವು ಮೇ 9 ರಿಂದ 11ರ ವರೆಗೆ ನಡೆಯಲಿದೆ.  ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನೆರವೇರಲಿದೆ.  ಮೇ 9 ರಂದು ಸಂಜೆ 6 ಗಂಟೆಗೆ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ಹಾಗೂ ಪ್ರಸಾದ ವಿತರಣೆ ನೆರವೇರಲಿದೆ. ಮೇ 10 ರಂದು ಬೆಳಿಗ್ಗೆ 6 ಗಂಟೆಗೆ ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಸ ಪೂಜೆ, ನವಕ ಪಂಚಗವ್ಯ ಕಳಸಾಭಿಷೇಕ, ಸರ್ವಾಲಂಕಾರ ಮಹಾಪೂಜೆ, ಶ್ರೀ ಪಾಷಾಣಮೂರ್ತಿ ದೈವದ ಕಳಸ ಪೂಜೆ, ಅಲಂಕಾರ ಪೂಜೆ ಹಾಗೂ ಮಂಗಳಾರತಿ ನಡೆಯಲಿದೆ.  ::: ನಾಗದರ್ಶನ ::: ನಾಗ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶದ ಪ್ರಯುಕ್ತ ಬೆಳಿಗ್ಗೆ 8 ಗಂಟೆಯಿಂದ ಆಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭೀಷೇಕ ನಡೆಯಲಿದ್ದು, 11 ಗಂಟೆಗೆ ನಾಗದರ್ಶನ, ಮಹಾ ಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಲಿದೆ.  ಉಡುಪಿಯ ಪೆರ್ಲಂಬಾಡಿಯ ರಮಾನಂದ ಭಟ್ ನಾಗಪಾತ್ರಿಗಳಾಗಿ ನಾಗಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ನಡೆಸಿಕೊಡಲಿದ್ದಾರೆ. ಸಂಜೆ 7.30 ರಿಂದ ಶ್ರೀ ಪಾಷಾಣಮೂರ್ತಿ ದೈವ ಕೋಲ ನಡೆಯಲಿದೆ.  ::: ಅಗೆಲು ಸೇವೆ ::: ಮೇ 11 ರಂದು ಸಂಜೆ 5 ಗಂಟೆಯಿಂದ ಶ್ರೀ ಪಾಷಾಣಮೂರ್ತಿ ದೈವದ ಅಗೆಲು ಸೇವೆ ನಡೆಯಲಿದೆ. ಅಗೆಲು ಸೇವೆ ನೀಡುವ ಭಕ್ತರು ಒಂದು ದಿನ ಮುಂಚಿತವಾಗಿ ದೇವಾಲಯದಲ್ಲಿ ರಶೀದಿಯನ್ನು ಪಡೆದುಕೊಳ್ಳಬೇಕೆಂದು ಶ್ರೀಕೋಟೆ ಮಾರಿಯಮ್ಮ ದೇವಾಲಯ ಟ್ರಸ್ಟ್ ಮನವಿ ಮಾಡಿದೆ ಮತ್ತು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಿದೆ.   ನಾಗದರ್ಶನದ, ಪಾಷಾಣಮೂರ್ತಿ ದೈವದ ಅಗೆಲು ಸೇವೆ, ಪಟ್ಟಸೀರೆ, ಚಿನ್ನ-ಬೆಳ್ಳಿ ಅರ್ಪಣೆ, ಮಲ್ಲಿಗೆ ಹೂವನ್ನು ಹರಕೆ ರೂಪದಲ್ಲಿ ಸ್ವೀಕರಿಸಲಾಗುವುದೆಂದು ತಿಳಿಸಿದರು. ದೇವಾಲಯದ ತಡೆಗೋಡೆ ಮತ್ತು ಕಟ್ಟಡ ಕಾಮಗಾರಿ :: ದೇವಾಲಯದ ತಡೆಗೋಡೆ ಮತ್ತು ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು, ದಾನಿಗಳು ಸಹಕರಿಸುವಂತೆ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಟ್ರಸ್ಟ್ ಮನವಿ ಮಾಡಿದೆ.  ದೇಣಿಗೆ ನೀಡುವ ದಾನಿಗಳು ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಟ್ರಸ್ಟ್ (ರಿ), SB A/c : 753454651 (Indian Bank, Madikeri), IFSC : IDIB000M032 ಖಾತೆ ಸಂಖ್ಯೆಗೆ ಜಮಾ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 9845836204, 9902612829, 8431747514 ಸಂಪರ್ಕಿಸಬಹುದಾಗಿದೆ.

 

 

 

 

 

 

 

 

 

 

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 8 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ಮೇ, 11…

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*

ಮೇ 8, 2026

*ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*

ಮೇ 8, 2026

*ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*

ಮೇ 8, 2026

*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*

ಮೇ 8, 2026

*ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*

ಮೇ 8, 2026

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*

ಮೇ 8, 2026

*ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 

ಮೇ 8, 2026

*ಕೋರಗಲ್ಲು ಬಸವೇಶ್ವರ ಸ್ವಾಮಿ ವಿಗ್ರಹ ಪುನರ್  ಪ್ರತಿಷ್ಠಾಪನೆ* 

ಮೇ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.