
ಮಡಿಕೇರಿ ಮೇ 7 NEWS DESK : ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸದಸ್ಯರಾಗಿ ಕಿರುಗೂರು ಗ್ರಾ.ಪಂ ಅಧ್ಯಕ್ಷರು ಹಾಗೂ ವಿರಾಜಪೇಟೆ ಮಂಡಲ ಬಿಜೆಪಿಯ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ವಿರಾಜಪೇಟೆ ಕ್ಷೇತ್ರದಲ್ಲಿ ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸುತ್ತಿರುವ ರಾಕೇಶ್ ದೇವಯ್ಯ ಅವರು ಕಿರುಗೂರು ಗ್ರಾ.ಪಂ ಸದಸ್ಯರಾಗಿ, ಅಧ್ಯಕ್ಷರಾಗಿ, ಬಿಜೆಪಿಯ ವಿವಿಧ ಘಟಕಗಳ ಪದಾಧಿಕಾರಿಯಾಗಿ ಇದೀಗ ವಿರಾಜಪೇಟೆ ಮಂಡಲದ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಒಡೆಯರ್ ಅಧ್ಯಕ್ಷರಾಗಿರುವ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಸಂಬಂಧಿತ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾಗಿ ರಾಕೇಶ್ ದೇವಯ್ಯ ಅವರು ಕಾರ್ಯನಿರ್ವಹಿಸಲಿದ್ದಾರೆ. ಪಕ್ಷದ ನಿಷ್ಠಾವಂತ ಯುವ ಕಾರ್ಯಕರ್ತರಿಗೆ ಸಂಸದರು ಅವಕಾಶ ನೀಡಿರುವುದು ಸ್ವಾಗತಾರ್ಹವೆಂದು ರಾಕೇಶ್ ದೇವಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.









