
ಮಡಿಕೇರಿ ಮೇ 9 NEWS DESK : ಕುಶಾಲನಗರ ಪುರಸಭೆ ವ್ಯಾಪ್ತಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ನ್ನು ಮೇ 10 ರಂದು ಬೆಳಗ್ಗೆ 11.30 ಗಂಟೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಮಸ್ತ ನಾಗರಿಕರು ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕುಶಾಲನಗರ ಪುರಸಭೆ ಅಧ್ಯಕ್ಷರು ಕೋರಿದ್ದಾರೆ.









