Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭಾರತೀಯ ಜ್ಞಾನ ಪರಂಪರೆ ಶೈಕ್ಷಣಿಕ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭಾರತೀಯ ಜ್ಞಾನ ಪರಂಪರೆ ಶೈಕ್ಷಣಿಕ ಕಾರ್ಯಾಗಾರ*

May 12, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪುತ್ತೂರು ಮೇ 12 NEWS DESK : ಭಾರತೀಯ ಜ್ಞಾನ ಪರಂಪರೆಯು ಅತ್ಯಂತ ಹೆಚ್ಚು ಅವಜ್ಞೆಗೊಳಗಾಗಿದೆ ಮತ್ತು ನಮ್ಮವರಿಂದಲೇ ನಿರಾಕರಿಸಲ್ಪಟ್ಟಿದೆ. ಅಧರ್ಮವನ್ನು ಧರ್ಮ ಎಂದು ಬಿಂಬಿಸುವ ಕೆಲಸಗಳು ನಡೆಯುತ್ತಿವೆ. ಇದರಿಂದಾಗಿ ನಾವು ಕಳೆದುಕೊಂಡದ್ದು ಅಪಾರ ಎಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಹಾಗೂ ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್.ಕೆ.ಎನ್ ಹೇಳಿದರು. ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಸಂಯುಕ್ತ ಆಶ್ರಯದಲ್ಲಿ ನಡೆದ ಭಾರತೀಯ ಜ್ಞಾನ ಪರಂಪರೆ ಪರಿಚಯ ಮತ್ತು ಅವಲೋಕನ ಎನ್ನುವ ಎರಡು ದಿನಗಳ ಶೈಕ್ಷಣಿಕ ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ ಅವರು ಮಾತಾಡಿದರು. ಕಳೆದುಕೊಂಡಿರುವುದನ್ನು ಅಲ್ಲಿಯೇ ಹುಡುಕಬೇಕು, ಆಗ ನಮಗೆ ಪ್ರೇರಣೆ ಸಿಗಬಹುದು. ಆ ಬಳಿಕ ಏನು ಮಾಡಬೇಕೆಂಬುದನ್ನು ವಿಮರ್ಶಿಸಬೇಕು ಹಾಗಾಗಿ ಆ ಪ್ರೇರಣೆ ತುಂಬುವ ಕೆ¯ಸವನ್ನು ಇಲ್ಲಿ ಮಾಡಲಾಗುತ್ತಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕಿ ಡಾ.ಸುಧಾ.ಎಸ್.ರಾವ್ ಮಾತನಾಡಿ ನಮ್ಮತನದ ಬಗ್ಗೆ ಹೆಮ್ಮೆ ಮೂಡುವಂತಹ ಶೈಕ್ಷಣಿಕ ಚಟುವಟಿಕೆಗಳು ನಡೆಯಬೇಕು. ಭಾರತೀಯ ಜ್ಞಾನ ಪರಂಪರೆಯ ವಿಷಯವನ್ನು ಬೋಧಿಸುವುದಕ್ಕೆ ಯಾವ ವಯೋಮಾನದ ವಿದ್ಯಾರ್ಥಿಗಳಿಗೆ ಯಾವ ರೀತಿಯ ಚಟುವಟಿಕೆಗಳು ಹೆಚ್ಚು ಸೂಕ್ತ ಎನ್ನುವ ಚರ್ಚೆಯಾಗಬೇಕು. ಅದರ ಬಗ್ಗೆ ಅವಲೋಕನವನ್ನು ಮಾಡಿ ಅದಕ್ಕೆ ತಕ್ಕುದಾದ ಪಠ್ಯ ಕ್ರಮವನ್ನು ತಯಾರಿಸಬೇಕು ಎಂದರು. ಎರಡು ದಿನಗಳ ಕಾಲ ನಡೆದ ಈ ಕಾರ್ಯಾಗಾರದಲ್ಲಿ ಪ್ರಾಚೀನ ಭಾರತದ ವೇದಗ್ರಂಥ, ತತ್ವಶಾಸ್ತ್ರಗಳ ವ್ಯಾಪ್ತಿ ಮತ್ತು ಪ್ರಾಮುಖ್ಯತೆ, ಸಾಂಪ್ರದಾಯಿಕ ಜ್ಞಾನ ಮತ್ತು ಪಾಶ್ಚಿಮಾತ್ಯ ಜ್ಞಾನದ ಅವಲೋಕನ, ಪ್ರಾಚೀನ ಭಾರತದ ಭಾಷಾ ಶಾಸ್ತ್ರ, ಸಂಖ್ಯೆ ಮತ್ತು ಮಾಪನ, ಕಲೆ, ಕರಕುಶಲತೆ ಮತ್ತು ವ್ಯಾಪಾರ, ಪ್ರಾಚೀನ ಭಾರತದ ಗಣಿತಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಭೌತಶಾಸ್ತಗಳ ಪರಿಚಯ ಮತ್ತು ಅವಲೋಕನÀ, ಪ್ರಾಚೀನ ಭಾರತದ ಖಗೋಳ ಶಾಸ್ತ್ರ, ಜೋತಿಷ್ಯ ಶಾಸ್ತ್ರ ಹಾಗೂ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಪ್ರಾಚೀನ ಭಾರತದ ನಗರಯೋಜನೆಗಳು ಮತ್ತು ವಾಸ್ತುಶಿಲ್ಪ, ಕೃಷಿ, ಸಾರ್ವಜನಿಕ ಆಡಳಿತ ವ್ಯವಸ್ಥೆ, ಪ್ರಾಚೀನ ಭಾರತದ ಆರೋಗ್ಯ, ಸ್ವಾಸ್ಥ್ಯ ಮತ್ತು ಮನೋವಿಜ್ಞಾನ, ಔಷಧ ಪದ್ದತಿ ಹಾಗೂ ಸುಸ್ಥಿರ ಅಭಿವೃದ್ಧಿಯ ಗುರಿಗಳು ಹೀಗೆ ಆರು ಅವಧಿಗಳಲ್ಲಿ ಸಂಪನ್ಮೂಲ ವ್ಯಕ್ತಿಗಳು ವಿಷಯ ವಿಸ್ತಾರವನ್ನು ಮಾಡಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿದ್ದ ವಿವೇಕಾನಂದ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲೆ ಡಾ.ಶೊಭಿತಾ ಸತೀಶ್ ಮಾತನಾಡಿ ಭಾರತೀಯ ಜ್ಞಾನ ಪರಂಪರೆಯನ್ನು ನಾವು ಒಂದಲ್ಲ ಒಂದು ರೀತಿಯಲ್ಲಿ ಮಕ್ಕಳಿಗೆ ಬೋಧಿಸುತ್ತಾ ಬಂದಿದ್ದೇವೆ. ಬದಲಾದ ಶೈಕ್ಷಣಿಕ ನೀತಿಯಲ್ಲಿ ಇದಕ್ಕೆ ಹೆಚ್ಚಿನ ಪ್ರಾಶಸ್ತ್ಯ ದೊರಕಿದ್ದು ಇದರ ಬಗ್ಗೆ ಹೆಚ್ಚು ಯೋಚಿಸುವಂತಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ ನಾಯಕ್ ಮಾತನಾಡಿ ಅಗಾಧವಾದ ವಿಷಯಗಳುಳ್ಳ ಭಾರತೀಯ ಜ್ಞಾನ ಪರಂಪರೆಯನ್ನು ಎರಡು ದಿನಗಳಲ್ಲಿ ಪರಿಚಯಿಸಲು ಸಾಧ್ಯವಿಲ್ಲ ಆದರೂ ಅದನ್ನು ಪೂರ್ಣವಾಗಿ ತಿಳಿದುಕೊಳ್ಳಬೇಕೆಂಬ ಮನಸ್ಥಿತಿ ಉಂಟುಮಾಡುವುದೇ ಈ ಕಾರ್ಯಾಗಾರದ ಉದ್ದೇಶ ಎಂದರು. ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಸ್ವಾಗತಿಸಿ ಪ್ರಸ್ತಾವನೆಗೈದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ ಮತ್ತು ಕಾರ್ಯಕ್ರಮ ಸಂಯೋಜಕ ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ನವೀನ್.ಎಸ್.ಪಿ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಎಲೆಕ್ಟ್ರಾನಿಕ್ಸ್ ವಿಭಾಗದ ಹಿರಿಯ ಪ್ರಯೋಗಾಲಯ ಬೋಧಕ ಸತೀಶ್.ಕೆ ವಿವಿಧ ಜವಾಬ್ಧಾರಿಗಳನ್ನು ನಿರ್ವಹಿಸಿದರು. ಎಲೆಕ್ಟ್ರಾನಿಕ್ಸ್ ವಿಭಾಗದ ಪ್ರಯೋಗಾಲಯ ಮೇಲ್ವಿಚಾರಕ ಹರಿಪ್ರಸಾದ್.ಡಿ ಕಾರ್ಯಕ್ರಮ ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು ಜಿಲ್ಲೆಗೆ ವಿಶೇಷ ಪ್ಯಾಕೇಜ್ : ಆಮ್ ಆದ್ಮಿ ಪಾರ್ಟಿ ಒತ್ತಾಯ*
Next Article *ಕೊಡಗು : ಗೌತಮ ಬುದ್ಧನ ಸಂದೇಶ ಇಡೀ ಮಾನವಕುಲಕ್ಕೆ ಮಾರ್ಗದರ್ಶಿ : ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.