Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೆಬ್ಬಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ : ಅಂಬೇಡ್ಕರ್‌ ಒಂದು ವರ್ಗಕ್ಕೆ ಸೀಮಿತವಲ್ಲ : ಶಾಸಕ ಡಾ.ಮಂಥರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೆಬ್ಬಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ : ಅಂಬೇಡ್ಕರ್‌ ಒಂದು ವರ್ಗಕ್ಕೆ ಸೀಮಿತವಲ್ಲ : ಶಾಸಕ ಡಾ.ಮಂಥರ್ ಗೌಡ*

ಮೇ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 16 NEWS DESK : ಹೆಬ್ಬಾಲೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಸಂಭ್ರಮದಿಂದ ನಡೆಯಿತು. ಭೀಮ ರಥೋತ್ಸವವನ್ನು ರಾಜ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಗಳನ್ನು ಜನರಿಗೆ ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶ ಕಂಡ ಅಪ್ರತಿಮ ನಾಯಕ. ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿಗೆ ಸೀಮಿತವಾದ ವ್ಯಕ್ತಿಯಲ್ಲ ಎಲ್ಲಾ ಜಾತಿಯ ಜನರು ಗೌರವಿಸುವಂತಾಗಬೇಕು ಎಂದರು. ಮುಖ್ಯ ಭಾಷಣಕಾರರಾಗಿ ಮಾತನಾಡಿದ ಡಾ. ಜೆ.ಸೋಮಣ್ಣ, ಬಹುಜನರ ನಾಯಕ ಡಾ. ಬಿ.ಆರ್.ಅಂಬೇಡ್ಕರ್ ಅವರು ಬಾಲ್ಯದಿಂದಲೂ ಅನೇಕ ಕಷ್ಟಗಳನ್ನು ಅನುಭವಿಸುವ ಮೂಲಕ ತಮ್ಮ ಜನಕ್ಕೆ ಆಗುತ್ತಿದ್ದ ದೌರ್ಜನ್ಯ ದಬ್ಬಾಳಿಕೆ ಕಣ್ಣಿಂದಲೇ ನೋಡಿದರು. ತಾನು ಕೂಡ ಅನುಭವಿಸಿದರು ಶಾಲೆಯಲ್ಲಿ ಓದುವಾಗ ಹೊರಗಡೆ ಕೂತು ಪಾಠ ಕೇಳುತ್ತಿದ್ದರು ಈ ತಾರತಮ್ಯವನ್ನು ಪಣತೊಟ್ಟು ಪೋಷಿತ ಸಮುದಾಯಗಳಿಗೆ ಸಮಾನ ಹಕ್ಕುಗಳನ್ನು ಕೊಡಿಸುವ ಮೂಲಕ ಸಮಾಜದಲ್ಲಿ ಎಲ್ಲರಂತೆ ಸಮಾನವಾಗಿ ಬದುಕಲು ಭಾರತದ ಸಂವಿಧಾನದಲ್ಲಿ ಮೀಸಲಾತಿಯನ್ನು ಕೊಡುವ ಮೂಲಕ ಎಲ್ಲರಿಗೂ ನ್ಯಾಯವನ್ನು ಕೊಡಿಸಿದರು. ಗಂಡು ಮಕ್ಕಳಂತೆ ಹೆಣ್ಣು ಮಕ್ಕಳಿಗೂ ಸಮಾನವಾಗಿ ಬದುಕುವ ಹಕ್ಕನ್ನು ಕೊಡಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಎಲ್ಲಾ ಸಮುದಾಯ ಮಂದಿ ಗೌರವಿಸುವಂತಾಗಬೇಕು ಎಂದು ಜೆ.ಸೋಮಣ್ಣ ಹೇಳಿದರು.  ಕಾಂಗ್ರೆಸ್ ಮುಖಂಡ ವಿ.ಪಿ.ಶಶಿಧರ್ ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್ ಅವರು ಬಾಲ್ಯದಿಂದಲೂ ಅನೇಕ ರೀತಿಯ ಶೋಷಣೆಗೆ ಒಳಗಾಗಿ ವಿದೇಶದಲ್ಲಿ ಓದಿ ವಿಶ್ವದ ನಂಬರ್ ಒನ್ ವಿದ್ಯಾರ್ಥಿಯಾಗಿ ಉನ್ನತ ಶಿಕ್ಷಣವನ್ನು ಪಡೆದು ವಿದೇಶದಲ್ಲಿ ಉಳಿಯದೆ ಸ್ವದೇಶಕ್ಕೆ ಬಂದು ಎಲ್ಲ ವರ್ಗದ ಜನರಿಗೆ ಉತ್ತಮವಾದ ಸಂವಿಧಾನವನ್ನು ಬರೆದು ಕೊಟ್ಟು ದೇಶ ಕಂಡ ಅಪ್ರತಿಮ ನಾಯಕ ಎಂದು ಹೋಗಳುವಂತೆ ನಡೆದುಕೊಂಡರು. ಅವರ ಆದರ್ಶ ಗುಣಗಳನ್ನು ತಾವೆಲ್ಲರೂ ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಬೇಕೆಂದು ಶಶಿಧರ್ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಿರಣ್ ಕುಮಾರ್   ಮುಂದಿನ ದಿನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್  ಅವರ ಜಯಂತಿಯನ್ನು ವಿಜೃಂಭಣೆಯಿಂದ ಮಾಡುವುದಾಗಿ ತಿಳಿಸಿದರು. ಬುದ್ಧ, ಬಸವ, ಅಂಬೇಡ್ಕರ್ ಅವರ ಮಾರ್ಗದರ್ಶನವನ್ನು ಇಟ್ಟುಕೊಂಡು ಉತ್ತಮ ಬಾಂಧವ್ಯವನ್ನು ಬಳಸಿಕೊಂಡು ಹೋಗುತ್ತೇವೆ ಎಂದು ಕಿರಣ್ ಕುಮಾರ್ ಹೇಳಿದರು. ಜೈ ಭೀಮ್ ಯುವಕ ಸಂಘದ ಪ್ರಮುಖ ಹೆಚ್.ಆರ್.ಸಚಿನ್ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನಮ್ಮೆಲ್ಲರ ಆಶಾಕಿರಣ.  ಶೋಷಿತ ಸಮುದಾಯಗಳ ಏಳಿಗೆಗಾಗಿ ತಮ್ಮ ಬದುಕಿನ ಉದ್ದಕ್ಕೂ ಕಷ್ಟಗಳನ್ನು ಅನುಭವಿಸಿ ನಮ್ಮೆಲ್ಲರಿಗೂ ಸುಖದಿಂದ ಬದುಕಲು ದಾರಿದೀಪವಾಗಿದ್ದಾರೆ ಎಂದು ಸಚಿನ್ ಹೇಳಿದರು. ಕದಸಂಸ ಭೀಮವಾದ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ.ರಾಜು ಮಾತನಾಡಿ, ಶತಮಾನಗಳಿಂದ ತುಳಿತಕ್ಕೆ ಒಳಗಾದ ಜನರಿಗೆ ಬದುಕನ್ನು ಕಟ್ಟಿಕೊಟ್ಟ ಭಾರತ ರತ್ನ ವಿಶ್ವ ರತ್ನ ಡಾ. ಬಿಆರ್ ಅಂಬೇಡ್ಕರ್, ಈ ದೇಶ ಕಂಡ ಅಪ್ರತಿಮ ನಾಯಕ 32 ಪದವಿಯನ್ನು ಪಡೆದು 60,000 ಪುಸ್ತಕಗಳನ್ನು ಮನೆಯಲ್ಲಿ ಇಟ್ಟುಕೊಂಡು ಸಮಾನ ಹಕ್ಕನ್ನು ಕೊಡಿಸುವ ಮೂಲಕ ಸಮಾಜದಲ್ಲಿ ನನ್ನಂತೆ ಬಾಳಿ ಸ್ವಾಭಿಮಾನಿಗಳಾಗಿ ಎಂದು ಡಾ.ಬಿ.ಆರ್.ಭೀಮರಾವ್ ಅಂಬೇಡ್ಕರ್ ಕರೆ ನೀಡಿದ್ದು, ಎಲ್ಲರೂ ಅವರ ಆದರ್ಶಗಳನ್ನು ಪಾಲಿಸುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ರಂಜನ್ ಕುಶಾಲನಗರ, ಹಸಿರು ಸೇನೆಯ ಶರತ್ ಕುಮಾರ್, ಸಂತೋಷ್ ಮಾತನಾಡಿದರು. ಹೆಬ್ಬಾಲೆ ಗ್ರಾ.ಪಂ ಅಧ್ಯಕ್ಷ ಅಣ್ಣಯ್ಯ ಅರುಣ್, ಕೆಪಿಸಿಸಿ ಸಂಯೋಜಕರಾದ ನಟೇಶ್ ಗೌಡ,  ರಾಜಶೇಖರ್ ಹೆಬ್ಬಾಲೆ, ಮಂಜುನಾಥ್, ಬಾಬು, ಮಿಥುನ್ ಗೌಡ, ಶೇಖರ್, ಪ್ರಜ್ವಲ್, ಲೋಕೇಶ್, ರವಿ, ಚೇತನ್, ಸಚಿನ್, ಲೋಕೇಶ್,  ಗಣೇಶ್ ಹಾಗೂ ಅನೇಕ ಹೋರಾಟಗಾರರು ಭಾಗವಹಿಸಿದರು. ವೆಂಕಟ್ ನಾಯಕ್ ಸ್ವಾಗತಿಸಿ, ವಂದಿಸಿದರು. ವೇದಿಕೆಯಲ್ಲಿ ಹಾಜರಾಗಿದ್ದ ಅತಿಥಿಗಳನ್ನು ಸನ್ಮಾನಿಸಲಾಯಿತು.

ವರದಿ : ಕೆ.ಬಿ.ರಾಜು  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.