Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರದಲ್ಲಿ ಬಸವ ಜಯಂತಿ ಆಚರಣೆ : ವಿಶ್ವ ಸಾಹಿತ್ಯಕ್ಕೆ ವಚನ ಸಾಹಿತ್ಯದ ಕೊಡುಗೆ ಅಪಾರ : ಎಸ್.ಎಂ.ಸಿದ್ದರಾಜಪ್ಪ ಅಭಿಮತ*
ಇತ್ತೀಚಿನ ಸುದ್ದಿಗಳು

*ಕುಶಾಲನಗರದಲ್ಲಿ ಬಸವ ಜಯಂತಿ ಆಚರಣೆ : ವಿಶ್ವ ಸಾಹಿತ್ಯಕ್ಕೆ ವಚನ ಸಾಹಿತ್ಯದ ಕೊಡುಗೆ ಅಪಾರ : ಎಸ್.ಎಂ.ಸಿದ್ದರಾಜಪ್ಪ ಅಭಿಮತ*

May 19, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಮೇ 19 NEWS DESK :  ಬಸವಣ್ಣನವರ ವಚನಗಳು ಹಾಗೂ ಶಿವಶರಣೆಯರ ವಚನಗಳು ಜನಸಾಮಾನ್ಯರ ಬದುಕಿಗೆ ಹತ್ತಿರವಾಗಿವೆ.ವಿಶ್ವ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿರುವ ವಚನ ಸಾಹಿತ್ಯವು ಕನ್ನಡ ಸಾಹಿತ್ಯದ ಮಹತ್ವದ ಕೊಡುಗೆ ನೀಡಿದೆ‌ ಎಂದು
ಗುಂಡ್ಲುಪೇಟೆ ತಾಲ್ಲೂಕಿನ ಕಬ್ಬಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ‌ ಪ್ರೌಢಶಾಲಾ ವಿಭಾಗದ ‌ಉಪ ಪ್ರಾಂಶುಪಾಲ ಎಸ್.ಎಂ ಸಿದ್ದರಾಜಪ್ಪ ಹೇಳಿದರು.
ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ಕುಶಾಲನಗರ‌ ಪಟ್ಟಣದ ಗಾಯತ್ರಿ ಕಲ್ಯಾಣ ಮಂದಿರದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ಐದನೇ ವರ್ಷದ ಬಸವ ಜಯಂತಿ ಕಾರ್ಯಕ್ರಮದಲ್ಲಿ 12 ನೇ ಶತಮಾನದ ‌ವಚನ ಸಾಹಿತ್ಯ ಹಾಗೂ ಶಿವ ಶರಣ- ಶರಣೆಯರ ಕೊಡುಗೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಭಕ್ತಿ ಭಂಡಾರಿ, ಮಹಾನ್ ಮಾನವತಾವಾದಿ ಹಾಗೂ ಸಾಮಾಜಿಕ ಕ್ರಾಂತಿ ಪುರುಷ
ಜಗಜ್ಯೋತಿ ಬಸವಣ್ಣನವರ ವಚನಗಳು ಸಾರ್ವಕಾಲಿಕ ಸತ್ಯವನ್ನು ಸಾರುತ್ತವೆ. ಬಸವಣ್ಣನವರ ಸಾರಥ್ಯದಲ್ಲಿ 12 ನೇ ಶತಮಾನದಲ್ಲಿ‌ ನಡೆದ ವಚನ ಚಳವಳಿಯು ಸಾಮಾಜಿಕ ಚಳವಳಿಯಾಗಿ ರೂಪುಗೊಂಡಿತ್ತು ಎಂದರು. ‘ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕಲ್ಪನೆಯನ್ನು ಜಗತ್ತಿಗೆ ತೋರಿಸಿದವರು ಬಸವಣ್ಣನವರು. ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ಆರೋಗ್ಯವಂತ ಸಮಾಜಕ್ಕೆ ಅಡಿಪಾಯ ಹಾಕಿದವರು ಬಸವೇಶ್ವರರು’ ಎಂದು ಸಿದ್ದರಾಜಪ್ಪ ಬಣ್ಣಿಸಿದರು. 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರು ವಚನಗಳ ಮೂಲಕ ಹಾಕಿಕೊಟ್ಟ ಭಕ್ತಿ ಮಾರ್ಗ, ಜಾತಿ ವ್ಯವಸ್ಥೆ, ಕಂದಾಚಾರ, ಮೌಢ್ಯ ರಹಿತ ವರ್ಗರಹಿತ ಸಮಾಜ ನಿರ್ಮಾಣಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದರು. 12 ನೇ ಶತಮಾನದಲ್ಲಿ ಬಸವಣ್ಣನವರು ಮಾನವೀಯತೆಗೆ ಮಾರ್ಗದರ್ಶಕ ಬೆಳಕಾಗಿದ್ದರು ಎಂದು ಬಣ್ಣಿಸಿದರು ಮತ್ತು ಅವರ ತತ್ವಶಾಸ್ತ್ರದ ನಿರಂತರ ಪ್ರಸ್ತುತತೆಯನ್ನು ಒತ್ತಿ ಹೇಳಿದರು.
ಮಹಾಪುರುಷರು ಬೌದ್ಧಿಕವಾಗಿ ಬದುಕಿದ್ದಾರೆ. ಆ ಸಾಲಿನಲ್ಲಿ ಬಸವಣ್ಣನವರು ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದರು. ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಮಾತನಾಡಿ, ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸಿ, ಅದರಲ್ಲಿ ಎಲ್ಲಾ ವರ್ಗಗಳ ವಚನಕಾರರ ಕಾಯಕ ಸಮಾಜವನ್ನು ನಿರ್ಮಾಣ ಮಾಡಿದ್ದಾರೆ. ಪ್ರತಿಯೊಬ್ಬರೂ ಬಸವಣ್ಣನವರ ಆದರ್ಶಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ತೊರೆನೂರು ವಿರಕ್ತಮಠದ ಮಲ್ಲೇಶ ಸ್ವಾಮೀಜಿ ಮಾತನಾಡಿ,
ಬಸವಣ್ಣನವರಂತಹ ಪರಮಜ್ಞಾನಿಗಳ ವಚನಗಳನ್ನು ಕೇಳಿ ಪಾಲಿಸಿದರೆ ಪ್ರತಿಯೊಬ್ಬರ ಬದುಕು ಹಸನಾಗುತ್ತದೆ ಎಂದರು. ಮೌಲ್ಯಯುತವಾದ ವಚನ ಸಾಹಿತ್ಯವನ್ನು ಮಕ್ಕಳಿಗೆ ಬಾಲ್ಯದಿಂದಲೇ ಬೋಧಿಸುವ ಕೆಲಸದಲ್ಲಿ ಪೋಷಕರ ಪಾತ್ರವು ಪ್ರಮುಖವಾಗಿದೆ ಎಂದರು. ಶನಿವಾರಸಂತೆ ಶಿಡಿಗಳಲೆ ಮಠ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಸೋಮವಾರಪೇಟೆ ವಿರಕ್ತ ಮಠದ ನಿಶ್ಚಲ ದೇಶಿ ಕೇಂದ್ರ ಸ್ವಾಮೀಜಿ, ಅರಕಲಗೂಡು ಚಿಲುಮೆ ಮಠದ ಜಯದೇವ ಸ್ವಾಮೀಜಿ, ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ವಿ. ಶಿವಪ್ಪ, ಡಿವೈಎಸ್ಪಿ ಆರ್. ವಿ. ಗಂಗಾಧರಪ್ಪ ಮಾತನಾಡಿದರು. ಜಿಲ್ಲಾ ವೀರಶೈವ- ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್ ನಂದೀಶ್ , ಸಮಾಜ ಸೇವಕ ಕೆ.ಎನ್ ವಸಂತ್, ಮಹಾಸಭಾದ ವಿವಿಧ ಘಟಕಗಳ
ಪ್ರಮುಖರಾದ ಎಂ.ಎಸ್.ಶಿವಾನಂದ, ಶುಭಶೇಖರ್, ಧರ್ಮೇಂದ್ರ, ಕೆ.ಯು.ಎಂ ಬಸವರಾಜ್, ಆದರ್ಶ್, ಎನ್ ಎಂ ರಾಜೇಶ್, ರುದ್ರ ಪ್ರಸನ್ನ, ದೀಪಿಕಾ ಕರುಣ್, ಕಮಲಾ ಉದಯಕುಮಾರ್, ಮನು ಜಗದೀಶ್, ಎಂ.ಕೆ.ಧನರಾಜ್, ಸುಶೀಲಮ್ಮ ಬಸವರಾಜ್,, ಬಿ.ಬಿ. ಲೋಕೇಶ್, ವಿ.ಸಿ.ಅಜಿತ್, ವಿಜಯ ಪಾಲಾಕ್ಷ, ಸರೋಜ ಆ ರಾಧ್ಯ, ಇದ್ದರು. ಅಧ್ಯಕ್ಷತೆ ವಹಿಸಿದ್ದ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್ ಮಾತನಾಡಿ, ಇಂತಹ ಕಾರ್ಯಕ್ರಮಗಳು ಜನರಲ್ಲಿ ಪರಸ್ಪರ ಪ್ರೀತಿ- ವಿಶ್ವಾಸ ಹಾಗೂ ಸಹಬಾಳ್ವೆಗೆ ಸಹಕಾರಿಯಾಗಿವೆ ಎಂದರು. ಶಿಕ್ಷಕಿ ಎಚ್.ಎಸ್. ಉಮಾದೇವಿ ಸ್ವಾಗತಿಸಿದರು. ಶಿಕ್ಷಕಿಯವರಾದ ಟಿ.ವಿ.ಶೈಲಾ, ಬಿ.ಬಿ.ಹೇಮಲತಾ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ವಿದ್ಯಾ ಅಜಿತ್ ವಂದಿಸಿದರು.
ಸಂಭ್ರಮದಿಂದ ಸಾಗಿದ ಮೆರವಣಿಗೆ: ಕುಶಾಲನಗರ ಪಟ್ಟಣದಲ್ಲಿ ಬಸವ ಜಯಂತಿ ಅಂಗವಾಗಿ ಶನಿವಾರ ಸಂಜೆ ನಡೆದ ಅದ್ಧೂರಿ ಮೆರವಣಿಗೆಯು ಗಮನ ಸೆಳೆಯಿತು. ಮೆರವಣಿಗೆಯಲ್ಲಿ ವೀರಗಾಸೆ ನೃತ್ಯ, ನಂದಿದ್ವಜ ಕುಣಿತ, ಮತ್ತು ಮಹಿಳೆಯರ ಸಾಂಪ್ರದಾಯಿಕ- ಜಾನಪದ ನೃತ್ಯಗಳು ಮೆರವಣಿಗೆ ಮುಂಭಾಗದಲ್ಲಿದ್ದರೆ, ಹಿಂಭಾಗದ ಅಲಂಕೃತ ರಥದಲ್ಲಿ ಬಸವೇಶ್ವರರ ಭಾವಚಿತ್ರ ಇಟ್ಟು, ಬೈಚನಹಳ್ಳಿ ಮಾರಿಯಮ್ಮ ದೇವಾಲಯದ ಬಳಿಯಿಂದ ಆರಂಭಗೊಂಡ ಮೆರವಣಿಗೆ ನಗರದ ಬಿ.ಎಂ.ರಸ್ತೆ,ರಥಬೀದಿ ಮೂಲಕ ಸಾಗಿ ಗಾಯತ್ರಿ ಕಲ್ಯಾಣ ಮಂದಿರದ ಆವರಣದಲ್ಲಿ ಸಮಾಪನಗೊಂಡಿತು. ಮೆರವಣಿಗೆಯಲ್ಲಿ ಮಳೆಯ ಸಿಂಚನ ಕೆಲಕಾಲ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಡ್ಡಿ ಉಂಟಾಯಿತು. ಮೆರವಣಿಗೆಯಲ್ಲಿ ಅಕ್ಕನ ಬಳಗದ ಸದಸ್ಯರು, ನೂರಾರು ಭಕ್ತರು ಬಸವಣ್ಣನವರ ವಚನಗಳನ್ನು ಹಾಡಿದರು. ಬಸವ ಜಯಂತಿ ಅಂಗವಾಗಿ ನಗರದ ಮೆರವಣಿಗೆ ಹಾದಿ ಹಸಿರು ತಳಿರು- ತೋರಣ, ಹಾಗೂ ಕೇಸರಿ ಧ್ವಜಗಳಿಂದ ಕಂಗೊಳಿಸಲಾಗಿತ್ತು.

Share. Facebook Twitter Pinterest LinkedIn Tumblr Email WhatsApp
Previous Article*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಮುತ್ತು ಬಂದಿದೆ ಕೇರಿಗೆ” : ಭಕ್ತಿ ಬೀದಿಯ ಸರಕಾಗಬಾರದು : ಕಾ.ತ.ಚಿಕ್ಕಣ್ಣ ಅಭಿಮತ*
Next Article *ರೆ.ಫಾ.ಸಬಾಸ್ಟಿನ್ ಪೂವತ್ತಗಲ್‌ಗೆ ಬೀಳ್ಕೊಡುಗೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.