Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಕರ್ನಾಟಕ»*ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ಬೂಕರ್ ಪ್ರಶಸ್ತಿ*
ಕರ್ನಾಟಕ

*ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ಬೂಕರ್ ಪ್ರಶಸ್ತಿ*

ಮೇ 21, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಲಂಡನ್ ಮೇ 21 NEWS DESK : ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್‌ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು. 1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕತೆಯನ್ನು ಬರೆಯಲಾಗಿತ್ತು. ಮೇ 21ರಂದು ಲಂಡನ್‌ನಲ್ಲಿ ಟೇಟ್ ಮಾಡರ್ನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪ್ರಶಸ್ತಿಯನ್ನು ಘೋಷಿಸಲಾಯಿತು. ಸಿಎಂ ಸಿದ್ದರಾಮಯ್ಯ ಅಭಿನಂದನೆ ::  ಇನ್ನೂ ಬೂಕರ್ ಪ್ರಶಸ್ತಿ ಪಡೆದ ಬಾನು ಮುಸ್ತಾಕ್ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು. ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಸ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ. ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ ‘ಹೃದಯ ದೀಪ’ವನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಗೌಡ ಸಮಾಜಗಳ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ*

ಆಗಷ್ಟ್ 22, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.