Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈಗೆ ಅಬುಧಾಬಿ ಹಿಂದೂ ಮಂದಿರದಲ್ಲಿ “ಸಂಸ್ಕೃತಿ ಶಿಲ್ಪಕಲಾ ರತ್ನ ಪ್ರಶಸ್ತಿ” ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈಗೆ ಅಬುಧಾಬಿ ಹಿಂದೂ ಮಂದಿರದಲ್ಲಿ “ಸಂಸ್ಕೃತಿ ಶಿಲ್ಪಕಲಾ ರತ್ನ ಪ್ರಶಸ್ತಿ” ಪ್ರದಾನ*

ಜೂನ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಜೂ.10 : ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಮೊದಲಬಾರಿಗೆ ಅರಬ್ ಸಂಯುಕ್ತ ಸಂಸ್ಥಾನದ ಅಬುಧಾಬಿ ಬಿ.ಎ.ಪಿ.ಎಸ್. ಹಿಂದೂ ದೇವಾಲಯದಲ್ಲಿ ಇತ್ತೀಚೆಗೆ ನಡೆದ ಗುರುವಂದನಾ ಸಂಸ್ಕೃತಿ ಸಿಂಚನ ಕಾರ್ಯಕ್ರಮದಲ್ಲಿ ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರಿಗೆ “ಸಂಸ್ಕೃತಿ ಶಿಲ್ಪಕಲಾ ರತ್ನ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸನಾತನ್ ವೇದಿಕ್ ಸಂಸ್ಥಾನದ ಗುರುಗಳಾದ ಶ್ರೀ ಶ್ರೀ ಶ್ರೀ ಪ್ರೋಫೆಸರ್ ಸ್ವಾಮಿ ಚೈತನ್ಯಾನಂದ ಸರಸ್ವತಿಯವರ ಸಮ್ಮುಖದಲ್ಲಿ ಕಲಾವಿದ ಬಿ.ಕೆ.ಗಣೇಶ್ ರೈ ಹಾಗೂ ಮಂಜುಳಾ ಗಣೇಶ್ ರೈ ದಂಪತಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಹಿಂದೂ ಮಂದಿರದ ಅವರಣದಲ್ಲಿರುವ ಪ್ರಮುಖ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬುಧಾಬಿ ಹಿಂದೂ ಮಂದಿರದ ಮುಖ್ಯಸ್ಥರಾದ ಶ್ರೀ ಬ್ರಹ್ಮವಿಹಾರಿ ದಾಸ್ ಸ್ವಾಮೀಜಿ, ಬೆಳಗಾವಿ ನಿಡಸೊಸಿ ಶ್ರೀ ಜಗದ್ಗುರು ದುರುದುಂಡೇಶ್ವರ ಮಠದ ಶ್ರೀ ಶ್ರೀ ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ, ಗೋವಾ ರಾಜ್ಯದ ಶ್ರೀ ದತ್ತ ಪದ್ಮನಾಭ ಪೀಠದ ಪದ್ಮಶ್ರೀ ಪುರಸ್ಕöÈತ ಶ್ರೀ ಶ್ರೀ ಸದ್ಗುರು ಬ್ರಹ್ಮೇಶನಂದನಾಚಾರ್ಯ ಸ್ವಾಮೀಜಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದು ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿದರು.
*ಖ್ಯಾತ ಕಲಾವಿದ ಗಣೇಶ್ ರೈ* ಮೂಲತ: ಮಡಿಕೇರಿಯವರಾದ ಗಣೇಶ್ ರೈ ಅವರು ಮೈಸೂರಿನಲ್ಲಿ ಚಿತ್ರಶಿಲ್ಪ ಕಲೆಯಲ್ಲಿ ತರಬೇತಿ ಪಡೆದಿರುವ ಕಲಾವಿದರು. ಮಡಿಕೇರಿ ಪುರಭವನದ ಎದುರಿನಲ್ಲಿರುವ ಕೊಡಗಿನ ಕುಲದೇವತೆ ಕಾವೇರಿ ಮಾತೆಯ ವಿಗ್ರಹವನ್ನು ನಿರ್ಮಿಸಿದವರು. ತಲಕಾವೇರಿಯಲ್ಲಿ ಪ್ರಥಮ ಬಾರಿಗೆ ಕಾವೇರಿ ಮಾತೆಯ ಚಿತ್ರವನ್ನು ಶಿವಕಾಶಿಯಲ್ಲಿ ಮುದ್ರಿಸಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರಿಂದ ಬಿಡುಗಡೆ ಮಾಡಿಸಿದ್ದರು. ಇತ್ತೀಚೆಗೆ ಕಂಪ್ಯೂಟರ್ ಗ್ರಾಫಿಕ್ಸ್ ನಲ್ಲಿ ಕಾವೇರಿ ಮಾತೆಯ ಚಿತ್ರವನ್ನು ರಚಿಸಿ ಬಿಡುಗಡೆ ಮಾಡದ್ದಾರೆ. ಮಡಿಕೇರಿ ಗಣಪತಿ ಉತ್ಸವ ಮತ್ತು ದಸರಾ ಉತ್ಸವಕ್ಕೆ ಹಲವಾರು ವಿವಿಧ ಭಂಗಿಯಲ್ಲಿ ಪೇಪರ್ ಪಲ್ಪ್ ದೇವತಾ ಮೂರ್ತಿಗಳನ್ನು ನಿರ್ಮಿಸಿದ್ದಾರೆ. ಬಹುಮುಖ ಪ್ರತಿಭೆಯ ಗಣೇಶ್ ರೈ ಅವರು ಲೇಖಕರಾಗಿದ್ದು, ಇತ್ತೀಚೆಗೆ “ಕಡಲಾಚೆಯ ರಮ್ಯ ನೋಟ ದುಬಾಯಿ” ಕೃತಿಯನ್ನು ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮಗಳ ನಿರೂಪಕರಾಗಿಯೂ ಜನಮಾನಸದಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದಾರೆ. ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸೇವೆ ಹಾಗೂ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಯು.ಎ.ಇ. ಘಟಕದ ಉಪಾಧ್ಯಕ್ಷರಾಗಿ ಹಾಗೂ ಹಲವಾರು ಸಂಘ ಸಂಸ್ಥೆಗಳಿಗೆ ಸಲಹೆಗಾರರಾಗಿದ್ದಾರೆ. ಸ್ವತ: ರಕ್ತದಾನಿಯಾಗಿರುವ ಗಲ್ಫ್ ನಾಡಿನಲ್ಲಿ ರಕ್ತದಾನ ಶಿಬಿರದ ಆಯೋಜನೆಯನ್ನು ಮಾಡಿರುವ ಇವರಿಗೆ ಯು.ಎ.ಇ. ಸರ್ಕಾರ ಪ್ರಶಂಸಾ ಪತ್ರವನ್ನು ನೀಡಿದೆ. ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಚಿತ್ರಕಲಾ ಅಧ್ಯಾಪಕರಾಗಿ ಮಾತು ವಿರಾಜಪೇಟೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಸಂಸ್ಥೆಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಇವರು ವಿದೇಶದ ಗಲ್ಫ್ ನಾಡಿನಲ್ಲಿ ಬಹುರಾಷ್ಟ್ರೀಯ ಜಾಹೀರಾತು ಸಂಸ್ಥೆಯಲ್ಲಿ ಕ್ರಿಯಾತ್ಮಕ ಕಲಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಗಣೇಶ್ ರೈ ಕೆಲಿಯಾಡೋ ಸ್ಕೋಪ್ ಎಂಬ ಯೂಟ್ಯೂಬ್ ಚಾನೆಲ್ ಹೊಂದಿದ್ದು, ಭಾರತ ಮತ್ತು ಗಲ್ಫ್ ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿ ಎರಡು ದೇಶಗಳ ಬಾಂಧವ್ಯಕ್ಕೆ ಸಂಬಂಧಿಸಿದ ನೂರಾರು ವೀಡಿಯೊಗಳು ವಿಶ್ವವ್ಯಾಪಿಯಾಗಿದೆ. ಗಣೇಶ್ ರೈಯವರ ಬಹುಮುಖ ಪ್ರತಿಭೆಗೆ ದುಬಾಯಿ ಸರ್ಕಾರ ಹತ್ತು ವರ್ಷಗಳ ಕಲ್ಚರಲ್ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ. “ಸಂಸ್ಕೃತಿ ಶಿಲ್ಪಕಲಾ ರತ್ನ ಪ್ರಶಸ್ತಿ” ಸ್ವೀಕರಿಸಿರುವ ಗಣೇಶ್ ರೈ ಅವರು ತಮ್ಮ ಶಿಲ್ಪಕಲೆ, ಲೇಖನ, ಸಮಾಜಸೇವೆಯ ಪಯಣದಲ್ಲಿ ಆಶೀರ್ವಾದ, ಪ್ರೋತ್ಸಾಹ, ಬೆಂಬಲ ನೀಡಿರುವ ಸರ್ವರಿಗೂ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ…

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.