


ಮಡಿಕೇರಿ ಜೂ.21 NEWS DESK : ಪ್ರಸಕ್ತ (2025-26) ಸಾಲಿಗೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ, ಬ್ಯಾಂಕ್ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ, ವಾಸವಿ ಜಲಶಕ್ತಿ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್ಲೈನ್ kacdc.karnataka.gov.in ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು(ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಶೇಷಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ). ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಖುದ್ದಾಗಿ ಅಥವಾ ದೂ.ಸಂ.08272-221656 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.









