
ಕೊಡ್ಲಿಪೇಟೆ ಜೂ.21 NEWS DESK : ಕಿರಿಕೂಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಂಗ್ಲ ಮಾಧ್ಯಮ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯುಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕೊಡ್ಲಿಪೇಟೆಯ ಸಂಸ್ಥಾಪಕ ಅಧ್ಯಕ್ಷ ಶ್ರೀ ಸದಾಶಿವ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಎಸ್ಜಿಎಸ್ ವಿದ್ಯಾಪೀಠದ ಕಾರ್ಯದರ್ಶಿ ಕೆ.ಪಿ.ನಂಜುಂಡಯ್ಯ ಪಿಯು ಕಾಲೇಜಿನ ಪ್ರಾಂಶುಪಾಲರಾದ ಕೆ.ಎಸ್.ತನುಜ, ಉಪನ್ಯಾಸಕರದ ಚಂದ್ರಶೇಖರ್ ಹಾಗೂ ಭಾಗ್ಯ ಹಾಜರಿದ್ದರು. ಸ್ಪಂದನ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳು ವಿವಿಧ ಭಂಗಿಗಳ ಯೋಗ ಪ್ರದರ್ಶಿಸಿ ಗಮನ ಸೆಳೆದರು.









