Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕತ೯ರ ಸಂಘ, ರೋಟರಿ ಮಿಸ್ಟಿ ಹಿಲ್ಸ್ ನಿಂದ ಯೋಗ ಪ್ರದಶ೯ನ : ಡಿಂಬಾಸನ ಯೋಗದಲ್ಲಿ ವಿಶ್ವದಾಖಲೆಗೆ ಸೇಪ೯ಡೆಯಾಗಲು ಅಹ೯ತೆ ಪಡೆದ ಕೊಡಗಿನ ಸಿಂಚನಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕತ೯ರ ಸಂಘ, ರೋಟರಿ ಮಿಸ್ಟಿ ಹಿಲ್ಸ್ ನಿಂದ ಯೋಗ ಪ್ರದಶ೯ನ : ಡಿಂಬಾಸನ ಯೋಗದಲ್ಲಿ ವಿಶ್ವದಾಖಲೆಗೆ ಸೇಪ೯ಡೆಯಾಗಲು ಅಹ೯ತೆ ಪಡೆದ ಕೊಡಗಿನ ಸಿಂಚನಾ*

ಜೂನ್ 22, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಜೂ.22 : ಯೋಗದಲ್ಲಿನ ಡಿಂಬಾಸನ  ಭಂಗಿಯಲ್ಲಿ 30 ನಿಮಿಷ 5 ಸೆಕೆಂಡ್ ಗಳ ಪ್ರದಶ೯ನದ ಮೂಲಕ ಮದೆನಾಡಿನ  ವಿದ್ಯಾಥಿ೯ನಿ ಬಿ.ಕೆ. ಸಿಂಚನಾ ಗಿನ್ನೀಸ್ ವಿಶ್ವ ದಾಖಲೆಗೆ  ಸೇಪ೯ಡೆಯಾಗಲು  ಅಹ೯ತೆ ಪಡೆದಿದ್ದಾಳೆ. ಕೊಡಗು ಪತ್ರಕರ್ತರ ಸಂಘ (ರಿ) ಮತ್ತು ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ಶನಿವಾರ ಸಂಜೆ ಆಯೋಜಿತ ವಿನೂತನ ಕಾಯ೯ಕ್ರಮದಲ್ಲಿ  ಬಿ.ಸಿ. ಕೀತಿ೯ಕುಮಾರ್ , ರೇಣುಕಾ ಅವರ ಪುತ್ರಿ ಶ್ರೀ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್ ಗೆ ಒಳಪಟ್ಟ  ಮದೆನಾಡು ಬಿಜಿಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ    ಬಿ.ಕೆ. ಸಿಂಚನ ಈ ವಿಶಿಷ್ಟ ಸಾಧನೆ ಮಾಡಿ ಗಮನ ಸೆಳೆದಳು. ಯೋಗಾಸನದ ‘ಡಿಂಬಾಸನ’ ಭಂಗಿಯಲ್ಲಿ ಇಲ್ಲಿಯವರೆಗೆ  ಆಸ್ಟ್ರೀಯಾದ   32 ವಷ೯ದ ಸ್ಚೇಫಿನಿ  ಮಿಲಿಂಗರ್  ಎಂಬ ಯೋಗಪಟು , 30 ನಿಮಿಷ  3 ಸೆಕೆಂಟ್‌ಗಳ ಕಾಲ ಸ್ಥಿರವಾಗಿರುವ ಮೂಲಕ ಗಿನ್ನಿಸ್ ವಿಶ್ವದಾಖಲೆ ಮಾಡಿದ್ದರು. ಈ ದಾಖಲೆಯನ್ನು 2 ಸೆಕೆಂಡ್‌ಗಳಷ್ಟು ಉತ್ತಮ ಪಡಿಸುವ ಮೂಲಕ ಸಿಂಚನ ಇದೀಗ ಗಿನ್ನಿಸ್ ದಾಖಲೆಯ ಕದ ತಟ್ಟಿದ್ದಾಳೆ. ಸಿಂಚನಳ ಯೋಗಾಸನದಲ್ಲಿನ ಈ ವಿಶಿಷ್ಟ ಸಾಧನೆ  ಅಧಿಕೖತವಾಗಿ ಸದ್ಯದಲ್ಲಿಯೇ ಗಿನ್ನಿಸ್ ದಾಖಲೆ ಸೇರಲಿದೆ. ಈಕೆ ದಾಖಲೆಯ ಅವಧಿಯವರೆಗೆ ಡಿಂಬಾಸನ ಭಂಗಿಯಲ್ಲಿದ್ದು, ಹಳೆಯ ದಾಖಲೆಯನ್ನು ಮುರಿದ ಹಿನ್ನೆಲೆಯಲ್ಲಿ,  ಕೊಡಗು ಪತ್ರಕರ್ತರ ಸಂಘ ಮತ್ತು ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಸಂಘಟನೆಗಳು ಕಾರ್ಯಕ್ರಮದಲ್ಲಿ ಸಿಂಚನಾಳಿಗೆ ಅಭಿನಂದನಾ ಪತ್ರ  ನೀಡಿ  ಗೌರವಿಸಿದವು. *ಪ್ರಶಾಂತ ಚಿತ್ತಕ್ಕೆ ಡಿಂಬಾಸನ ಸಹಕಾರಿ* ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದ  ಮಡಿಕೇರಿಯ ಯೋಗ ಗುರು ಕೆ.ಕೆ.ಮಹೇಶ್ ಕುಮಾರ್ ಮಾತನಾಡಿ, ಡಿಂಬಾಸನ ಎನ್ನುವುದು ಚಕ್ರಾಸನದ ಮುಂದುವರೆದ ಭಾಗವೇ ಆಗಿದೆ. ಈ ಆಸನ ಪ್ರಶಾಂತ ಚಿತ್ತತೆಗೆ ಮತ್ತು ಬೆನ್ನು ಹುರಿ, ಕಾಲು,  ಸೊಂಟದ ಭಾಗದ ಕೀಲುಗಳ ಆರೋಗ್ಯಕ್ಕೆ ಅತ್ಯಂತ ಪೂರಕವಾದುದುದೆಂದು ವಿವರಿಸಿದರು. ದಾಖಲೆಯ ಆಸನ ಪ್ರದರ್ಶನದ ಬಳಿಕ ಮದೆ ಮಹೇಶ್ವರ ಶಾಲೆಯ ನಿವೃತ್ತ ಪ್ರಾಂಶುಪಾಲರಾದ ಬಿ.ಆರ್. ಜೋಯಪ್ಪ ಅವರು ಮಾತನಾಡಿ, ಎಳೆವೆಯ ಹಂತದಿಂದಲೆ ಅಮ್ಮ ಅಪ್ಪನ ಪ್ರೋತ್ಸಾಹದಿಂದ ಸಿಂಚನ ಇದೀಗ ವಿಶ್ವ  ದಾಖಲೆಯನ್ನು ಮಾಡಿದ್ದಾಳೆ. ತಂದೆಯ ಬೆಂಬಲ, , ಅಮ್ಮನ ತಾಳ್ಮೆಯ ಗುಣದಿಂದಾಗಿ  ಇಂದು ಈಕೆ ಲೋಕ ವಿಖ್ಯಾತಿಗೆ ಪಾತ್ರಳಾಗಲು ಕಾರಣವಾಗಿರುವುದಾಗಿ ಅಭಿಪ್ರಾಯ ಪಟ್ಟರಲ್ಲದೆ, ಸಿಂಚನಳ  ಯೋಗಸಾಧನೆಯ ಕುರಿತು ಕವನವೊಂದನ್ನು ವಾಚಿಸಿ ಗಮನ ಸೆಳೆದರು. ನಿವೃತ್ತ ಆಕಾಶವಾಣಿ ಉದ್ಘೋಷಕರು ಹಾಗೂ ಸಾಹಿತಿ ಸುಬ್ರಾಯ ಸಂಪಾಜೆ   ಮಾತನಾಡಿ, ಇದೊಂದು ಅತ್ಯಂತ ಅಪೂರ್ವವಾದ ಕಾರ್ಯಕ್ರಮ ಮಾತ್ರವಲ್ಲ, ಇಡೀ ರಾಜ್ಯ ಮತ್ತು ದೇಶವೆ ಹೆಮ್ಮೆ ಪಡುವ ಗಳಿಗೆಯಾಗಿದೆ. ದೀಪಾ ಭಾಸ್ತಿ ಅವರು ಸಾಹಿತ್ಯಿಕ ನೆಲೆಯಲ್ಲಿ ಅಂತರಾಷ್ಟ್ರೀಯ  ಮನ್ನಣೆಗೆ ಪಾತ್ರರಾಗಿದ್ದರೆ, ಪುಟಾಣಿ ಸಿಂಚನ ಯೋಗದ ಮೂಲಕ ಅಂತರಾಷ್ಟಿಯ ಮಟ್ಟದಲ್ಲಿ ಗಮನ ಸೆಳೆಯುವ ಸಾಧನೆ ಮಾಡಿರುವುದು ಸಂತಸವನ್ನು ಉಂಟುಮಾಡಿದೆ ಎಂದು ತಿಳಿಸಿ, ಬಿ.ಆರ್. ಜೋಯಪ್ಪ ಅವರು ಬರೆದ ಕವನ ‘ಸಿಂಚನ’ಕ್ಕೆ ರಾಗ ಮತ್ತು ಭಾವ ತುಂಬಿ ಹಾಡುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು. ಸಿಂಚನಳ ಅಮ್ಮ ರೇಣುಕಾ ಮಾತನಾಡಿ,  ಗಿನ್ನಿಸ್ ವಿಶ್ವ ದಾಖಲೆಯ ಪ್ರಯತ್ನವನ್ನು ಮಗಳು ಸಿಂಚನ ನಡೆಸಿ ಯಶಸ್ವಿಯಾಗಿರುವುದು ಸಂತಸವನ್ನು ತಂದಿದೆ. ಯೋಗ ಕೇವಲ ಪ್ರದರ್ಶನಕ್ಕಷ್ಟೆ ಸೀಮಿತವಾಗಬಾರದು. ಆರೋಗ್ಯಕ್ಕಾಗಿ ಯೋಗ ಮಾಡಬೇಕಾಗಿದೆಯೆಂದು ಅಭಿಪ್ರಾಯಪಟ್ಟರು. ಮಗಳ ಯೋಗದಾಖಲೆಗೆ ಸಹಾರ ನೀಿದ ಕೊಡಗು ಪತ್ರಕತ೯ರ ಸಂಘ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಸಂಘಟನೆಗಳಿಗೆ ಧನ್ಯವಾದ ಸಮಪಿ೯ಸಿದರು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ  ಮತ್ತು ರೋಟರಿ ಮಿಸ್ಟಿ ಹಿಲ್ಸ್ ನಿದೇ೯ಶಕ  ಅನಿಲ್ ಹೆಚ್.ಟಿ.  ಮಾತನಾಡಿ. ಮದೆನಾಡಿನಂಥ ಕೊಡಗಿನ ಪುಟ್ಟ ಗ್ರಾಮದವಳಾದ ಸಿಂಚನಾ ಯೋಗದಲ್ಲಿ ತನಗೆ ಇರುವ ಆಸಕ್ತಿಯನ್ನು ಸಾಕಷ್ಟು ಯೋಗಭ್ಯಾಸದ ಮೂಲಕ ಮುಂದುವರೆಸಿಕೊಂಡು ಇಂದು ವಿಶ್ವದಾಖಲೆ ಮಾಡುವ ಹಂತಕ್ಕೆ ತಲುಪಿರುವುದು ನಾಡಿಗೇ ಹೆಮ್ಮೆ ತಂದಿದೆ ಎಂದು ಶ್ಲಾಘಿಸಿದರು. ಛಲ ಮತ್ತು ಪ್ರತಿಭೆಯಿದ್ದಲ್ಲಿ ಮಾತ್ರ ಇಂಥ ಅಪರೂಪದ ಸಾಧನೆ ಸಾಧ್ಯ ಎಂದೂ ಅನಿಲ್ ಅಭಿಪ್ರಾಯಪಟ್ಟರು. ಮಗಳ ಯೋಗದ ಆಸಕ್ತಿಗೆ ಪ್ರೋತ್ಸಾಹ ನೀಡಿ ವಿಶ್ವದಾಖಲೆಯ  ಹಂತಕ್ಕೆ ತಲುಪಿಸಿದ ತಾಯಿ ರೇಣುಕಾ , ತಂದೆ ಕೀತಿ೯ಕುಮಾರ್ ಅವರ ಪಾತ್ರವನ್ನೂ ಅನಿಲ್ ಅಭಿನಂದಿಸಿದರು. ಉಪನ್ಯಾಸಕಿ ಕೆ.ಜಯಲಕ್ಷ್ಮಿ ಪ್ರಾಥಿ೯ಸಿದ ಕಾಯ೯ಕ್ರಮದಲ್ಲಿ ಕೊಡಗು ಪತ್ರಕತ೯ರ ಸಂಘ ದ ನಿದೇ೯ಶಕ  ಕುಡೆಕಲ್ ಸಂತೋಷ್ , ಯೋಗಪಟು ಸಿಂಚನಳ ಪರಿಚಯ ಮಾಡಿಕೊಟ್ಟರು. ಸಿಂಚನಳ ದಾಖಲೆಯ ಯೋಗ ಪ್ರದರ್ಶನಕ್ಕೆ ಯೋಗ ಪಟು ರಾಜೇಶ್  ಗುಪ್ತ,, ವಾಂಡರಸ್ಸ್  ಕ್ಲಬ್‌ನ ಬಾಬು ಸೋಮಯ್ಯ, ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನಿದೇ೯ಶಕರಾದ ಎಂ.ಧನಂಜಯ್, ಜಿ.ಆರ್.  ರವಿ ಶಂಕರ್,  ವಿಜಯಲಕ್ಷ್ಮಿ ಚೇತನ್, ಪತ್ರಕತ೯ರ ಸಂಘದ ಕ್ಷೇಮನಿಧಿಯ ಅಧ್ಯಕ್ಷ ಜಿ.ವಿ.ರವಿ ಕುಮಾರ್,  ಕಾಯ೯ದಶಿ೯ ಅರುಣ್ ಕೂಗ್೯, ಸಂಘದ ಖಜಾಂಚಿ ಟಿ.ಕೆ. ಸಂತೋಷ್, ನಿದೇ೯ಶಕರಾದ ಹನೀಫ್, ಲಕ್ಷ್ಮೀಶ್, ಪತ್ರಿಕಾಭವನ ಟ್ರಸ್ಟ್ ಪ್ರಧಾನ ಕಾಯದಶಿ೯ ಎಸ್.ಜಿ.ಉಮೇಶ್, ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದ ಅಧ್ಯಕ್ಷ ವಿಘ್ನೇಷ್ ಭೂತನಕಾಡು  ಉಪಸ್ಥಿತರಿದ್ದರು. *ಹಷ೯ದ ಕ್ಷಣಗಳು* ಡಿಂಬಾಸನ ಎಂಬ ಭಂಗಿಯಲ್ಲಿ ನಿರಂತರ 30 ನಿಮಿಷ 5 ಸೆಕೆಂಡ್ ಗಳು ಸ್ಥಿರವಾಗಿ ನಿಲ್ಲುವ ಮೂಲಕ ಸಿಂಚನಾ ವಿಶ್ವಗಿನ್ನೀಸ್ ಧಾಖಲೆಗೆ ಸೇಪ೯ಡೆಯಾಗುತ್ತಿದ್ದಂತೆಯೇ ಮಡಿಕೇರಿಯ ಪತ್ರಿಕಾಭವನದಲ್ಲಿ ಹಾಜರಿದ್ದ ಆಹ್ವಾನಿತ ಗಣ್ಯರು, ಭಾವಪರವಶರಾಗಿ ಎದ್ದು ನಿಂತು ಚಪ್ಪಾಳೆ ತಟ್ಟುವ ಹಷೋ೯ದ್ದಾರ ವ್ಯಕ್ತಪಡಿಸಿದರು. ಅಧ೯ಗಂಟೆಗಳ ಕಾಲ ಯೋಗ ದಾಖಲೆ ನಡೆಯುವ ಸಂದಭ೯ ನಿಶ್ಯಬ್ದವಾಗಿದ್ದ ಪತ್ರಿಕಾಭವನ ಸಭಾಂಗಣ ಸಿಂಚನಾಳ , ದಾಖಲೆ ಆಗುತ್ತಿರುವಂತೆಯೇ ಹಷ೯ದ ಕ್ಷಣಗಳಿಗೆ ಸಾಕ್ಷಿಯಾಯಿತು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.