
ಕುಶಾಲನಗರ ಜೂ.23 NEWS DESK : ಕುಶಾಲನಗರ ಲಯನ್ಸ್ ಇಂಟರ್ನ್ಯಾಷನಲ್ ನೂತನ ಅಧ್ಯಕ್ಷರಾಗಿ ಎನ್.ಟಿ.ನಾರಾಯಣ, ಕಾರ್ಯದರ್ಶಿಯಾಗಿ ಎಂ.ಜಿ.ಕಿರಣ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಡಾ.ಶರತ್ ಕುಮಾರ್ ಮ್ಯಾಥ್ಯೂ ನೇಮಕಗೊಂಡಿದ್ದಾರೆ. 2025-26 ರ ಆಡಳಿತ ಮಂಡಳಿಯ ತಂಡದ ಪ್ರತಿಜ್ಞಾವಿಧಿ ಸಮಾರಂಭ ಜೂ.24ರಂದು ಕುಶಾಲನಗರ ಗೌಡ ಸಮಾಜದಲ್ಲಿ ನಡೆಯಲಿದೆ. ಲಯನ್ಸ್ ಇಂಟರ್ನ್ಯಾಷನಲ್ ಹಿಂದಿನ ಸಾಲಿನ ಜಿಲ್ಲಾ ರಾಜ್ಯಪಾಲ ಎಂ.ಬಿ.ಸದಾಶಿವ ಪ್ರತಿಜ್ಞಾವಿಧಿ ಭೋದಿಸಲಿದ್ದಾರೆ.









