Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ : ಹಲವು ವಿಚಾರಗಳ ಕುರಿತು ಚರ್ಚೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ : ಹಲವು ವಿಚಾರಗಳ ಕುರಿತು ಚರ್ಚೆ*

ಜೂನ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.24 NEWS DESK : ಅನುಸೂಚಿತ ಮತ್ತು ಅನುಸೂಚಿತ ಪಂಗಡಗಳ(ದೌರ್ಜನ್ಯ ನಿಯಂತ್ರಣ) ನಿಯಮ ರೀತಿಯ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಎಚ್.ಎಸ್.ಮುತ್ತಪ್ಪ ಅವರು ಹೊದ್ದೂರು, ಹೊದವಾಡ ಸೇರಿದಂತೆ ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಶಿಷ್ಟರು ವಾಸ ಮಾಡುತ್ತಿದ್ದು, ಇವರಿಗೆ ಶಾಶ್ವತ ನೆಲೆ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಕುಟುಂಬಗಳಿಗೆ ನಿವೇಶನ ಕಲ್ಪಿಸುವುದರ ಜೊತೆಗೆ ಮನೆ ನಿರ್ಮಿಸಿಕೊಡುವಂತಾಗಬೇಕು ಎಂದು ಮುತ್ತಪ್ಪ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೊದ್ದೂರು-ಹೊದವಾಡ ಸೇರಿದಂತೆ ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಮಾಹಿತಿ ನೀಡಿದರು. ಹೆಚ್.ಎಸ್.ಮುತ್ತಪ್ಪ ಮಾತನಾಡಿ, ಹರದೂರು ಗ್ರಾ.ಪಂ ವ್ಯಾಪ್ತಿಯ ಮಲ್ಲಿಕಾರ್ಜುನ ಕಾಲೋನಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಲವು ಕಾಮಗಾರಿ ನಡೆದಿದ್ದು, ಬಿಲ್ಲುಗಳ ಪಾವತಿಗೆ ಬಾಕಿ ಇದೆ ಎಂದರು. ಮತ್ತೊಬ್ಬ ಸಮಿತಿ ಸದಸ್ಯ ಜೆ.ಎಲ್.ಜನಾರ್ಧನ ಮಾತನಾಡಿ, ಗಂಗಾ ಕಲ್ಯಾಣ ಯೋಜನೆಯಡಿ ಹಲವು ಕೆಲಸಗಳು ಬಾಕಿ ಇದ್ದು, ಕೂಡಲೇ ಪೂರ್ಣಗೊಳಿಸಬೇಕಿದೆ ಎಂದು ಕೋರಿದರು. ಈ ಸಂದರ್ಭ ಮಾತನಾಡಿದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಚಂದ್ರಪ್ಪ ಕೆಲವು ಯೋಜನೆಗಳು ಕೇಂದ್ರ ಕಚೇರಿಯಿಂದ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಈ ಸಂಬಂಧ ಕೇಂದ್ರ ಕಚೇರಿ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜನಾರ್ಧನ ಕೊಡ್ಲಿಪೇಟೆ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದೆ ಅಲ್ಲಿನ ಸಾರ್ವಜನಿಕರು ಪ್ರತೀನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗಮನ ಸೆಳೆದರು. ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಕಾಯ್ದಿರಿಸಬೇಕು ಎಂದರು ಕೋರಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ವೈದ್ಯರ ಕೊರತೆ ಎಲ್ಲೆಡೆ ಇದ್ದು, ವೈದ್ಯರ ನಿಯೋಜನೆಗೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು. ಮತ್ತೊಬ್ಬ ಸದಸ್ಯರಾದ ಪಿ.ಪಿ.ಸುಕುಮಾರ್ ಹಾಗೂ ಜಾಯ್ಸ್ ಮೆನೇಜಸ್ ಮಾತನಾಡಿ ಬಾಳೆಗುಂಡಿ ವಾಲ್ನೂರು ತ್ಯಾಗತ್ತೂರು ವಿವಿಧ ಹಾಡಿಗಳಲ್ಲಿ ವಾಸಿಸುವ ಪರಿಶಿಷ್ಟ ವರ್ಗದ ಜನರು ಆಧಾರ್ ಕಾರ್ಡ್ ಇಲ್ಲದೆ ಪಡಿತರ ಚೀಟಿ ಪಡೆಯಲು ಸಾಧ್ಯವಾಗಿಲ್ಲ, ಆದ್ದರಿಂದ ಆಧಾರ್ ಇಲ್ಲದ ಕುಟುಂಬಗಳನ್ನು ಗುರ್ತಿಸಿ ಆಧಾರ್ ಕಾರ್ಡ್ ಮಾಡಿಸುವಂತಾಗಬೇಕು ಎಂದರು. ಸಫಾಯಿ ಕರ್ಮಚಾರಿ/ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್‍ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯು ಇದೇ ಸಂದರ್ಭದಲ್ಲಿ ನಡೆಯಿತು. ಸಮಿತಿ ಸದಸ್ಯರಾದ ರಂಗಸ್ವಾಮಿ ಮಾತನಾಡಿ ಪೌರಕಾರ್ಮಿಕರ ದಿನಾಚರಣೆಯನ್ನು ಗ್ರಾ.ಪಂ.ಮಟ್ಟದಲ್ಲಿಯೂ ಆಯೋಜಿಸುವಂತಾಗಬೇಕು ಎಂದು ಕೋರಿದರು. ಹಾಗೆಯೇ ಉನ್ನತ ವ್ಯಾಸಂಗ ಮಾಡಿದ ಪೌರಕಾರ್ಮಿಕರ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಸುಂಟಿಕೊಪ್ಪ ಹೋಬಳಿ ಕೇಂದ್ರದಲ್ಲಿ ಪೌರಕಾರ್ಮಿಕರಿಗೆ ಸ್ವಂತ ನಿವೇಶನ ಇಲ್ಲದೆ ಗುಡಿಸಿಲಿನಲ್ಲಿ ವಾಸ ಮಾಡುತ್ತಿದ್ದು, ಇವರಿಗೆ ಜಾಗ ಕಾಯ್ದಿರಿಸಿ ಮನೆ ನಿರ್ಮಿಸಿಕೊಡುವಂತಾಗಬೇಕು ಎಂದು ರಂಗಸ್ವಾಮಿ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸುಂಟಿಕೊಪ್ಪದಲ್ಲಿ ಸರ್ಕಾರಿ ಭೂಮಿ ಸಿಗುವುದು ಕಷ್ಟಸಾಧ್ಯವಾಗಿದೆ. ಹತ್ತಿರದಲ್ಲಿ ಪೈಸಾರಿ ಜಾಗ ಇದ್ದಲ್ಲಿ ಗುರುತಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಸಫಾಯಿ ಕರ್ಮಚಾರಿಗಳಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ನೇರ ಸಾಲ ಯೋಜನೆಯಡಿ ಸಹಾಯಧನ ಕಲ್ಪಿಸುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ರಂಗಸ್ವಾಮಿ ಕೋರಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಪರಿಶಿಷ್ಟರಿಗಾಗಿ ಸರ್ಕಾರದಿಂದ ಹಲವು ಸೌಲಭ್ಯಗಳಿದ್ದು, ಅವುಗಳನ್ನು ತಲುಪಿಸುವಂತಾಗಬೇಕು. ಸರ್ಕಾರದಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಅರ್ಹರಿಗೆ ಸವಲತ್ತು ತಲುಪಿಸುವಂತಾಗಬೇಕು ಎಂದು ಸೂಚಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಸಮಿತಿ ಸದಸ್ಯ ಪರಮೇಶ್, ವಿಜಯಕುಮಾರ್, ಪುಟ್ಟಮ್ಮ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಕೃಷ್ಣಮೂರ್ತಿ, ಕಿರಣ್ ಗೌರಯ್ಯ, ತಾ.ಪಂ.ಇಒಗಳಾದ ಅಪ್ಪಣ್ಣ, ಪರಮೇಶ, ಪುರಸಭೆ ಮುಖ್ಯಾಧಿಕಾರಿಗಳಾದ ಗಿರೀಶ್, ನಾಚಪ್ಪ, ಸತೀಶ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ. 4: ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಯಾಗಿದ್ದು, ಅದನ್ನು ತಡೆಹಿಡಿದಿರುವ ಹಾಗೂ ಪುನರ್‌ಪರಿಶೀಲನೆಗಾಗಿ ಉಪಸಮಿತಿ…

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.