Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*
  • *ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*
  • *ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*
  • *ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಚೀತೆರ ಕಾಳ ಮುತ್ತ್ ಮಾಲೆ” ಕೊಡವ ಕವನ ಸಂಕಲನ ಬಿಡುಗಡೆ : ಭಾಷೆಯ ಬೆಳವಣಿಗೆಯಲ್ಲಿ ಸಾಹಿತ್ಯದ ಪಾತ್ರ ದೊಡ್ಡದು : ಐಚಂಡ ರಶ್ಮಿ ಮೇದಪ್ಪ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”ಚೀತೆರ ಕಾಳ ಮುತ್ತ್ ಮಾಲೆ” ಕೊಡವ ಕವನ ಸಂಕಲನ ಬಿಡುಗಡೆ : ಭಾಷೆಯ ಬೆಳವಣಿಗೆಯಲ್ಲಿ ಸಾಹಿತ್ಯದ ಪಾತ್ರ ದೊಡ್ಡದು : ಐಚಂಡ ರಶ್ಮಿ ಮೇದಪ್ಪ ಅಭಿಮತ*

ಜೂನ್ 28, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.28 NEWS DESK : ಕೊಡವ ಮಕ್ಕಡ ಕೂಟದ 114ನೇ ಪುಸ್ತಕ, ಲೇಖಕಿ ಮಾಳೇಟಿರ ಸೀತಮ್ಮ ವಿವೇಕ್ ರಚಿತ 4ನೇ ಕೃತಿ “ಚೀತೆರ ಕಾಳ ಮುತ್ತ್ ಮಾಲೆ” ಕೊಡವ ಕವನ ಸಂಕಲನ ಬಿಡುಗಡೆಗೊಂಡಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಲೇಖಕಿ ಹಾಗೂ ಕೊಡವ ಮಕ್ಕಡ ಕೂಟದ ಸಲಹೆಗಾರರಾದ ಐಚಂಡ ರಶ್ಮಿ ಮೇದಪ್ಪ ಅವರು ಭಾಷೆಯ ಬೆಳವಣಿಗೆಯಲ್ಲಿ ಸಾಹಿತ್ಯ ಮಹತ್ವಪೂರ್ಣ ಪಾತ್ರ ವಹಿಸುತ್ತದೆ ಎಂದರು. ಕಥೆ, ಕಾದಂಬರಿ, ನಾಟಕ, ಕವನ ಸಂಕಲನಗಳು ಸಾಹಿತ್ಯ ಕ್ಷೇತ್ರದ ಸುಂದರ ಮತ್ತು ಶಕ್ತಿಯುತ ಪ್ರಕಾರಗಳಾಗಿವೆ. ಕವನಗಳು ಭಾಷೆಯ ಬಲವನ್ನು ಹೆಚ್ಚಿಸುತ್ತವೆ, ಓದುಗರ ಜೊತೆ ಕವನ ಮಾತನಾಡುತ್ತದೆ, ಮನ ಮುಟ್ಟುತ್ತದೆ ಮತ್ತು ಹೊಸ ಆಯಾಮಗಳಿಗೆ ಕೊಂಡೊಯ್ಯುತ್ತದೆ ಎಂದು ಅಭಿಪ್ರಾಯಪಟ್ಟರು. ಹಲವು ಪುಸ್ತಕಗಳನ್ನು ರಚಿಸಿರುವ ಲೇಖಕಿ ಮಾಳೇಟಿರ ಸೀತಮ್ಮ ಅವರ ಸಾಹಿತ್ಯ ಸೇವೆ ನಿರಂತರವಾಗಿರಲಿ, ಮತ್ತಷ್ಟು ಕೃತಿ ಹೊರ ಬರಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು, ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಕೊಡವ ಮಕ್ಕಡ ಕೂಟ ಹೊಸ ಬರಹಗಾರರನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ ಎಂದರು.
ಸರ್ಕಾರದ ಅನುದಾನವಿಲ್ಲದಿದ್ದರೂ ಸಾಹಿತ್ಯ ಬೆಳವಣಿಗೆಗೆ ಒತ್ತು ನೀಡುವ ನಿಟ್ಟಿನಲ್ಲಿ ದಾನಿಗಳ ಸಹಕಾರದಿಂದ ಜಿಲ್ಲೆಯ ಹಲವು ಬರಹಗಾರರು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಹಲವು ಕೃತಿಗಳನ್ನು ಬಿಡುಗಡೆ ಮಾಡಲಾಗಿದೆ. ಕೂಟದ ಹಲವು ಪುಸ್ತಕಗಳಿಗೆ ಪ್ರಶಸ್ತಿಗಳು ಲಭಿಸಿದೆ. ಇನ್ನು ಮುಂದೆಯೂ ಕೂಟ ಬರಹಗಾರರಿಗೆ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡಲಿದೆ ಎಂದು ಹೇಳಿದರು. ಬರಹಗಾರ್ತಿ ಮಾಳೇಟಿರ ಸೀತಮ್ಮ ಉತ್ತಮ ಬರಹಗಾರರಾಗಿದ್ದು, ಕೊಡವ ಸಂಸ್ಕೃತಿ, ಆಚಾರ ವಿಚಾರ ಹಾಗೂ ಕೆಲವು ವ್ಯಕ್ತಿಗಳ ಪರಿಚಯವನ್ನು ಕವನದ ಮೂಲಕ ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಮತ್ತಷ್ಟು ಕೊಡುಗೆ ನೀಡುವಂತಾಗಲಿ ಎಂದು ಹಾರೈಸಿದರು. “ಚೀತೆರ ಕಾಳ ಮುತ್ತ್ ಮಾಲೆ” ಕೊಡವ ಕವನ ಸಂಕಲನದ ಲೇಖಕಿ ಮಾಳೇಟಿರ ಸೀತಮ್ಮ ವಿವೇಕ್ ಮಾತನಾಡಿ, ಪುಸ್ತಕವು 50 ಕವನಗಳನ್ನು ಒಳಗೊಂಡಿದ್ದು, ಸುಮಾರು ಐದು ವರ್ಷಗಳ ದಾಖಲೆಗಳ ಕವನಗಳಾಗಿವೆ. ಅಲ್ಲದೇ ಅಧ್ಯಯನದ ಸಂದರ್ಭ ಸಿಕ್ಕ ಕೆಲವು ವಿಚಾರಗಳನ್ನು ಕವನ ರೂಪದಲ್ಲಿ ಹೊರತರಲಾಗಿದೆ. ಈ ಕವನಗಳಲ್ಲಿ ಹಲವು ನೀತಿ ಪಾಠಗಳಿದ್ದು, ತಾಳವಿಲ್ಲ, ಅಂತ್ಯಪ್ರಾಸ ನೀಡಲಾಗಿದೆ ಎಂದು ಹೇಳಿದರು. ಪುಸ್ತಕ ಬಿಡುಗಡೆಗೆ ಸಹಕಾರ ನೀಡಿದವರಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಲೇಖಕಿಯ ತಂದೆ ಹಾಗೂ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕಂಬೀರಂಡ ಕಿಟ್ಟು ಕಾಳಪ್ಪ ಅವರು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಈ ಪುಸ್ತಕ ಆಪ್ತತೆಯನ್ನು ಮೂಡಿಸುತ್ತದೆ. ಕಾವ್ಯಾಸಕ್ತಿ ಬೆಳೆಸಿಕೊಂಡು ಭಾವನೆಗಳಿಗೆ ಅಕ್ಷರ ರೂಪ ನೀಡಿ ಕವನ ಸಂಕಲನ ಹೊರ ತಂದಿರುವುದು ಹೆಮ್ಮೆ ಎನಿಸಿದೆ. ಕೊಡವ ಮಕ್ಕಡ ಕೂಟ ಹಲವು ಬರಹಗಾರರಿಗೆ ಪ್ರೋತ್ಸಾಹ ನೀಡುವ ಮೂಲಕ ಕೊಡವರ ಬಗ್ಗೆ ಉತ್ತಮ ಕಾಳಜಿ ವಹಿಸಿ ಕೆಲಸ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಲೇಖಕಿಯ ತಾಯಿ ಕಂಬೀರಂಡ ಮುತ್ತಮ್ಮ ಹಾಗೂ ಸಮಾಜ ಸೇವಕ ಹಂಚೆಟ್ಟಿರ ಮನು ಮುದ್ದಪ್ಪ ಉಪಸ್ಥಿತರಿದ್ದರು.
*ಕೂಕ್ಲೂರ್ ಮಾಳೇಟಿರ ಸೀತಮ್ಮ ವಿವೇಕ್ ಪರಿಚಯ* ಮಾಳೇಟಿರ ಸೀತಮ್ಮ ವಿವೇಕ್ (ತಾಮನೆ ಕಂಬೀರಂಡ) ಹಾಸನದಲ್ಲಿ ನೆಲೆಸಿರುವ ಇವರು, ಮೂಲತಃ ಕೊಡಗಿನ ಬಾಡಗ ಗ್ರಾಮದ ಬೇತ್ರಿಯ ಕಂಬೀರಂಡ ಕಿಟ್ಟು ಕಾಳಪ್ಪ ಮತ್ತು ಮುತ್ತಮ್ಮ ದಂಪತಿಯ ಮೂವರು ಮಕ್ಕಳಲ್ಲಿ ಪ್ರಥಮ ಪುತ್ರಿ.
ಬಾಲ್ಯದಲ್ಲಿ ಕ್ರೀಡಾ ವಲಯದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದ ಇವರು ವಿವಾಹದ ನಂತರ ಬರವಣಿಗೆಯಲ್ಲಿ ತೊಡಗಿಕೊಂಡಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಮಡಿಕೇರಿಯ ಸಂತ ಮೈಕಲರ ಶಾಲೆ ಹಾಗೂ ಕೂಡಿಗೆ ಕ್ರೀಡಾ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದಿದ್ದು, ಟೆರೇಷಿಯನ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಹಲವು ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿರುವ ಸೀತಮ್ಮ, “ಸ್ಟಾರ್ ಆಫ್ ಮೈಸೂರು” ಬಿರುದನ್ನು ಪಡೆದುಕೊಂಡಿದ್ದಾರೆ. ಹಾಸನದ ಕೆ.ಪಿ.ಟಿ.ಸಿ.ಎಲ್.ನಲ್ಲಿ ಉದ್ಯೋಗದಲ್ಲಿರುವ ಮಾಳೇಟಿರ ವಿವೇಕ್ ಅವರನ್ನು ವಿವಾಹವಾಗಿರುವ ಇವರಿಗೆ ಒರ್ವ ಪುತ್ರ ಇದ್ದಾನೆ. ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರದಲ್ಲಿ ಆಸಕ್ತಿ ಹೊಂದಿರುವ ಸೀತಮ್ಮ ಮೈಸೂರು ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ.ಸ್ನಾತಕೋತ್ತರ ಪದವಿ ಪಡೆದು, ಕೊಡಗಿನ ಜೈನ ಅರಸರ ಆಡಳಿತ, ಶ್ರವಣ ಬೆಳಗೊಳ ಪ್ರಾಕೃತ ವಿಶ್ವವಿದ್ಯಾಲಯದಿಂದ ಜೈನ ವಿದ್ವಾಂಸರ ಕೃತಿ-ಪುರಾಣ, ದತ್ತಿ ಶಾಸನ, ತಾಳೆಗರಿಯನ್ನೊಳಗೊಂಡು ವಿವಿಧ ವಿಷಯ ಮತ್ತು ಕ್ಷೇತ್ರಗಳಲ್ಲಿ ಅದ್ಯಯನ ಮಾಡುತ್ತಿದ್ದಾರೆ. ಮುಖ್ಯ ಶಿಕ್ಷಕಿ ಮತ್ತು ಉಪನ್ಯಾಸಕಿಯಾಗಿಯೂ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡಿದ್ದಾರೆ. ಮಾಳೇಟಿರ ತಿಮ್ಮಯ್ಯ ಬರೆದ “who are we Kodavas” ಕೃತಿನ “ನಂಗ ದಾರ್ ಕೊಡವ” ಎಂದು ಕೊಡವ ಭಾಷೆಗೆ ತರ್ಜುಮೆ ಮಾಡಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಪುಸ್ತಕ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಈಗಾಗಲೇ ಕೊಡವ ಮಕ್ಕಡ ಕೂಟದಿಂದ ಇವರು ಬರೆದ “ಮನಸ್ಸು” ಮತ್ತು “ಭಾವ ಕುಸುಮ” ಎನ್ನುವ ಎರಡು ಕನ್ನಡ ಕೃತಿಗಳು ಬಿಡುಗಡೆಯಾಗಿದೆ. ಇವರು ಉದಯ ವಾಹಿನಿಯಲ್ಲಿ ಸುದ್ದಿ ವಾಚಕಿಯಾಗಿ, ಹಾಸನ ಮಹಿಳಾ ಸಿರಿಗನ್ನಡ ವೇದಿಕೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಕೊಡವಾಮೆಗೆ ಸಂಬಂಧಿಸಿದ ಬುಡಕಟ್ಟು ಸಂಸ್ಕೃತಿ ಅಧ್ಯಯನ ಕೇಂದ್ರದಲ್ಲಿ ಜನಾಂಗಕ್ಕೆ ಸಂಬಂಧಪಟ್ಟ ವಿಷಯವನ್ನು ಕೈಗೆತ್ತಿಕೊಂಡಿದ್ದಾರೆ. “ಚೀತೆರ ಕಾಳ ಮುತ್ತ್ ಮಾಲೆ” ಇವರ ನಾಲ್ಕನೇ ಪುಸ್ತಕವಾಗಿದ್ದು, ವಿವಿಧ ವಿಷಯಗಳನ್ನು ಕ್ರೋಢೀಕರಿಸಿ ಕವನ ರೂಪದಲ್ಲಿ ಬರೆದಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾನಡ್ಕ ಕುಟುಂಬದಿoದ 12ನೇ ವರ್ಷದ ಯುಗಾದಿ ಕ್ರೀಡಾಕೂಟದ ಸಂಭ್ರಮ : ಕ್ರೀಡೆಗಳಿಂದ ಹಬ್ಬದ ಮೆರುಗು ಇಮ್ಮಡಿ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಸಮೀರ್ ಗೆ “ರತ್ನ ಶ್ರೀ” ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ*

ಮಾರ್ಚ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.22 : ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಸಮೀರ್ ಎಂ. ಮಡಿಕೇರಿ…

*ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದ ಕಾಡಾನೆ ಸೆರೆ*

ಮಾರ್ಚ್ 22, 2026

*ಹಾಕತ್ತೂರಿನ “ಯುವ ಸ್ಪಂದನ ಯೂತ್ ಫೌಂಡೇಶನ್” ಗೆ ನೂತನ ಪದಾಧಿಕಾರಿಗಳ ಆಯ್ಕೆ*

ಮಾರ್ಚ್ 22, 2026

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.