
ಮಡಿಕೇರಿ ಜು.8 NEWS DESK : ಶ್ರೀ ಕೋದಂಡ ರಾಮ ದೇವಾಲಯದ 51ನೇ ವರ್ಷದ ದಸರಾ ಉತ್ಸವದ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಆನಂದ್ ಸುಬ್ರಮಣಿ, ಕಾರ್ಯಧ್ಯಕ್ಷರಾಗಿ ಮಿಥುನ್ ಶೆಟ್ಟಿ ನೇಮಕಗೊಂಡಿದ್ದಾರೆ. ಗೌರವಧ್ಯಕ್ಷರಾಗಿ ಮಂಜುನಾಥ್, ಉಪಾಧ್ಯಕ್ಷರಾಗಿ ಗಿರೀಶ್ ಸುಬ್ರಮಣಿ, ಜೈಕುಮಾರ್, ಸಿದ್ದಿಕ್, ಪ್ರದಾನ ಕಾರ್ಯದರ್ಶಿಯಾಗಿ ವಿಜು ಖಜಾಂಚಿಯಾಗಿ ಶೇಖರ್, ಕಾರ್ಯದರ್ಶಿಯಾಗಿ ವಿಶ್ವ, ಪವನ್, ಸಹ ಕಾರ್ಯದರ್ಶಿಯಾಗಿ ತೇಜ, ಹರ್ಷ, ಸಂಘಟನಾ ಕಾರ್ಯದರ್ಶಿಯಾಗಿ ವಿಗ್ನೇಶ್, ನವೀನ್, ಅಲಂಕಾರ ಸಮಿತಿಗೆ ಹರೀಶ್, ಜೀವನ್, ಉತ್ಸವ ಸಮಿತಿಗೆ ಅಜಿತ್ ಮತ್ತು ತಂಡ ಆಯ್ಕೆಗೊಂಡರು. ಸಮಿತಿಯ ರಚನೆ ಬಳಿಕ ಮಾತನಾಡಿದ ಅಧ್ಯಕ್ಷರಾದ ಆನಂದ್ ಮಡಿಕೇರಿ ದಸರಾದಲ್ಲಿ ಪ್ರತಿ ವರ್ಷ ವಿನೂತನ ರೀತಿಯಲ್ಲಿ ಮಂಟಪ ತಯಾರಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿರುವ ಶ್ರೀ ಕೋದಂಡ ರಾಮ ದೇವಾಲಯವು ಈ ಬಾರಿಯೂ ಕೂಡ ಅದ್ದೂರಿ ದಸರಾ ಆಚರಿಸುವ ಮುಖಾಂತರ ಉತ್ತಮ ಮಂಟಪ ಹೊರತರುವಲ್ಲಿ ದೇವಾಲಯದ ಸರ್ವ ಸದಸ್ಯರು ಶ್ರಮಿಸಳಿದ್ದೇವೆ ಎಂದು ಅಭಿಪ್ರಾಯ ಹಂಚಿಕೊಂಡರು.








