
ಮಡಿಕೇರಿ ಜು.9 NEWS DESK : ಯುವ ಕಾಂಗ್ರೆಸ್ ವತಿಯಿಂದ ವಿಕಾಸ್ ಜನ ಸೇವಾ ಟ್ರಸ್ಟ್ ವೃದ್ಧಾಶ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ 51ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ವಯೋವೃದ್ಧರ ಯೋಗ ಕ್ಷೇಮ ವಿಚಾರಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನಂತರ ಹಿರಿಯರಿಗೆ ಸ್ವೇಟರ್ ಹಾಗೂ ಬ್ಲಾಂಕೆಟ್ ಗಳನ್ನು ವಿತರಿಸಿ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಕೊಡಗು ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಮೈಸಿ ಕತ್ತಾಣಿ, ರಾಹುಲ್ ಮಾರ್ಷಲ್, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ ಕೊತ್ತೊಳಿ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮೂಡ ಸದಸ್ಯರಾದ ಚಂದ್ರಶೇಖರ್ ಆರ್.ಪಿ, ಮಿನಾಜ್ ಪ್ರವೀಣ್, ಮಡಿಕೇರಿ ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೌಸರ್, ಮಡಿಕೇರಿ ನಗರಸಭ ಸದಸ್ಯರಾದ ಜಗದೀಶ್ ಜಿ.ಸಿ, ಕಾರ್ಮಿಕ ಘಟಕ ಜಿಲ್ಲಾ ಅಧ್ಯಕ್ಷ ದಿನೇಶ್ ಕೆ.ಆರ್, ಎನ್.ಎಸ್.ಯು.ಐ ಮಡಿಕೇರಿ ಬ್ಲಾಕ್ ಅಧ್ಯಕ್ಷ ಶರಣ್, ಸೇವಾದಳದ ನಜೀರ್, ಹಬೀಬ್, ಶೋಯಬ್ ಸಿದ್ದಾಪುರ, ಮಿಥುನ್ ಸಿದ್ದಾಪುರ, ಜಕ್ರಿಯ, ಬಶೀರ್, ಜಾಫರ್, ಕಾಸಿಂ, ಸಿಯಾಬ್ ಹಾಜರಿದ್ದು ಶಾಸಕ ಎ.ಎಸ್.ಪೊನ್ನಣ್ಣರಿಗೆ ಶುಭಹಾರೈಸಿದರು.


.







