Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ*

ಜುಲೈ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜು.10 NEWS DESK : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ವಿರಾಜಪೇಟೆಯಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಹಾಗೂ ನಾನಾ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ವಿರಾಜಪೇಟೆಯ ಕಾರು ನಿಲ್ದಾಣದಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಿತು. ವಿರಾಜಪೇಟೆಯ ಮಾರಿಯಮ್ಮ ದೇವಾಲಯದ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿ ಕಾರು ನಿಲ್ದಾಣದಲ್ಲಿ ಜಮಾವಣೆಗೊಂಡರು. ನಂತರ ಮಾತನಾಡಿದ ಸಿ.ಐ.ಟಿ.ಯು ಪ್ರಧಾನ ಕಾರ್ಯದರ್ಶಿ ಎ.ಸಿ. ಸಾಬು, ಕೇಂದ್ರ ಸರಕಾರವು ಕಾರ್ಮಿಕ ನೀತಿಗಳಿಗೆ ವಿರುದ್ದವಾಗಿ ಕಾನೂನುಗಳನ್ನು ಜಾರಿಗೆ ತಂದಿದೆ. ಇಂದು ರಾಜ್ಯಾದಾದ್ಯಂತ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿ ಮುಷ್ಕರ ನಡೆಯುತ್ತಿದೆ. ಬೆಲೆ ಏರಿಕೆಯಿಂದಾಗಿ ಕಾರ್ಮಿಕರ ಬದುಕು ಶೋಚನೀತ ಸ್ಥಿತಿಗೆ ತಲುಪಿದ್ದಾರೆ. ಸುಮಾರು 70 ವರ್ಷಗಳಿಂದ ಕಾರ್ಮಿಕರಿಗೆ ನಿಗದಿಗೊಳಿಸಿರುವ ದುಡಿಮೆಯ ಸಮಯ 8 ಗಂಟೆ. ಆದರೆ ಕೇಂದ್ರ ಸರಕಾರವು 8 ಗಂಟೆ ಬದಲು 12 ಗಂಟೆ ದುಡಿಯುವಂತೆ ಕಾನೂನು ಜಾರಿಗೆ ತಂದಿದೆ. ಇದರಿಂದ ಕಾರ್ಮಿಕರ ಶ್ರೇಯಸ್ಸು ಕಾಯುವ ಬದಲು ಕಾಪೋರೇಟ್ ಸಂಸ್ಥೆಗಳಿಗೆ ಲಾಭ ತರುವಂತಿದೆ. ದುಡಿಮೆಯ ಹಣವು ಅಭಿವೃದ್ಧಿ ಹೆಸರಲ್ಲಿ ಕಾರ್ಪೋರೇಟ್ ಸಂಸ್ಥೆಯ ಮಡಿಲಿಗೆ ಸೇರುತ್ತಿದೆ ಎಂದು ಟೀಕಿಸಿದರು. ಸಂಘಟನೆಯ ಪ್ರಮುಖರಾದ ಡಾ. ದುರ್ಗಾ ಪ್ರಸಾದ್ ಮಾತನಾಡಿ, ಎಂಟು ಗಂಟೆ ಕೆಲಸದ ಅವಧಿ, ಕಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ, ಮುಷ್ಕರದ ಹಕ್ಕು ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕೇಂದ್ರ ಸರಕಾರ ಕಾಪೆರ್Çರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದು ಪಡಿಸಬೇಕು. ಇವತ್ತಿನ ಬೆಲೆಗಳಿಗೆ ಅನುಗುಣವಾಗಿ ಎಲ್ಲ ಸಂಘಟಿತ ಅಸಂಘಟಿತ ಗುತ್ತಿಗೆ ಕಾರ್ಮಿಕರು ರಾಷ್ಟ್ರ ವ್ಯಾಪಿ 26 ಸಾವಿರ ಹಾಗೂ ರಾಜ್ಯವ್ಯಾಪಿ ಮೂವತ್ತಾರು ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು. ಗುತ್ತಿಗೆ ಮುಂತಾದ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಅವಕಾಶ ವೇತನ ಜಾರಿ ಮಾಡಬೇಕು. ಕಟ್ಟಡ ಕಾರ್ಮಿಕರು ಆಟೋ ಟ್ಯಾಕ್ಸಿ ಚಾಲಕರು ಮನೆ ಕೆಲಸಗಾರರು ಸೇರಿದಂತೆ ಇನ್ನಿತರ ಎಲ್ಲ ಅಸಂಘಟಿತ ಕಾರ್ಮಿಕರ ಮತ್ತು ಕೃಷಿ ತೋಟ ಕಾರ್ಮಿಕರು ಸೇರಿದಂತೆ ಎಲ್ಲಾ ವಿಭಾಗದ ಕಾರ್ಮಿಕರಿಗೆ ಕನಿಷ್ಠ ಮಾಸಿಕ 9000 ಪಿಂಚಣಿ ಹಾಗೂ ಸಾಮಾಜಿಕ ಭದ್ರತೆಯನ್ನು ಖಾತ್ರಿಪಡಿಸಬೇಕು. ಎನ್‍ಪಿಎಸ್ ಮತ್ತು ಯುಪಿಎಸ್ ರದ್ದುಪಡಿಸಿ ಹಳೆಯ ಪೆನ್ಷನ್ ಸ್ಕೀಮ್ ಅನ್ನು ಮರು ಸ್ಥಾಪಿಸಬೇಕು. ಎಲ್ಲರಿಗೂ ಉಚಿತ ಶಿಕ್ಷಣದ ಹಕ್ಕು ಆರೋಗ್ಯದ ಹಕ್ಕು ನೀರು ಮತ್ತು ನೈರ್ಮಲ್ಯದ ಹಕ್ಕು ಹಾಗೂ ಎಲ್ಲರಿಗೂ ವಸತಿ ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದರು. ರೈತರ ಒಪ್ಪಿಗೆ ಇಲ್ಲದೆ ಬಲವಂತದ ಭೂಸ್ವಾಧೀನ ಹಾಗೂ ಮೂರು ಕರಾಳ ಕೃಷಿ ಕಾ0iÉ್ದು ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ವಾಪಸ್ಸು ಪಡೆಯಬೇಕು. ಸರರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು, ಪ್ರತಿ 5ನೇ ತಾರೀಖಿನ ಒಳಗೆ ಕಾರ್ಮಿಕರ ವೇತನ ನೀಡಬೇಕು, ಹೆರಿಗೆ ಭತ್ಯೆ, ಇಎಸ್‍ಐ ಸೌಲಭ್ಯ, ಪಿ.ಎಫ್ ಹಣವನ್ನು ಸರಿಯಾದ ರೀತಿಯಲ್ಲಿ ಗುತ್ತಿಗೆದಾರರು ನೀಡುವಂತಹ ನೀತಿಯನ್ನು ಜಾರಿಗೊಳಿಸಬೇಕು, ಕಾರ್ಮಿಕರ ಸಮಸ್ಯೆ ಮತ್ತು ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ. ಸರಕಾರ ಇದನ್ನು ಕಾರ್ಮಿಕ ವಿರೋಧಿ ನೀತಿಯನ್ನು ಕೈಬಿಟ್ಟು ಕಾರ್ಮಿಕರ ಏಳಿಗೆಗಾಗಿ ನೀತಿಗಳನ್ನು ರೂಪಿಸಬೆಕೆಂದು ಒತ್ತಾಯಿಸಿದರು. ಮುಖಂಡರುಗಳಾದ ಎ.ಐ.ಟಿ.ಯು. ಯ ವಕೀಲರಾದ ಸುನೀಲ್ ಮತ್ತು ಮಣಿ, ಸಿ.ಐ.ಟಿ.ಯು ಸಂಘಟನೆಯ ಪದಾಧಿಕಾರಿಗಳಾದ ಎನ್ ಡಿ ಕುಟ್ಟಪ್ಪ, ಎ. ಮಹಾದೇವ, ಶಾಜಿ ರಮೇಶ್, ರಾಚಪ್ಪಜಿ, ಪುಷ್ಪ, ಹರಿದಾಸ್, ಅಂಗನವಾಡಿ ನೌಕರರ ಸಂಘಟನೆಯ ಜಿಲ್ಲಾಧ್ಯಕ್ಷೆ ಸುಮಿತ್ರ, ವಿರಾಜಪೇಟೆ ತಾಲೂಕು ಅಧ್ಯಕ್ಷೆ ಶೀಲಾ, ಬಿಸಿಯೂಟ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಕುಸುಮ, ಪೊನ್ನಂಪೇಟೆಯ ತಾಲೂಕು ಅಧ್ಯಕ್ಷರಾದ ಜಯಂತಿ ಮತ್ತು ನ್ಯಾನ್ಸಿ, ತೋಟ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷರಾದ ಪುಷ್ಪ, ಜನರಲ್ ವರ್ಕರ್ಸ್ ಯೂನಿಯನ್ ಜಿಲ್ಲಾ ಅಧ್ಯಕ್ಷರಾದ ಹೆಚ್. ಬಿ. ರಮೇಶ್,ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಂಚಾಲಕಿ ಪದ್ಮಿನಿ ಶ್ರೀಧರ್, ಎಲ್‍ಐಸಿ ಮತ್ತು ಆಸ್ಪತ್ರೆ ಸಿಬ್ಬಂದಿ, ನೌಕರರ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ NEWS DESK ಸೆ.3 : ಕೊಡವ ಸಂಪ್ರದಾಯ, ಕುಟುಂಬದ ಒಗ್ಗಟ್ಟು ಹಾಗೂ ಶೌರ್ಯದ ಪ್ರತೀಕವಾಗಿರುವ ಕೈಲ್ ಪೊಳ್ದ್ ಹಬ್ಬವನ್ನು…

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.