Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಐ.ಬಿ.ಪಿ.ಎಸ್ ನ ಅಧಿಕಾರಿ ಹುದ್ದೆಗಳಿಗೆ ಈ ಸಲದ ಪರೀಕ್ಷಾ ಬದಲಾವಣೆಗಳೇನು..?*
ಇತ್ತೀಚಿನ ಸುದ್ದಿಗಳು

*ಐ.ಬಿ.ಪಿ.ಎಸ್ ನ ಅಧಿಕಾರಿ ಹುದ್ದೆಗಳಿಗೆ ಈ ಸಲದ ಪರೀಕ್ಷಾ ಬದಲಾವಣೆಗಳೇನು..?*

July 12, 20255 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಾಹಿತಿ -ಭಾಗ 2

ದೇಶದ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿಯಿರುವ 5208 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಪೂರ್ವ ಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಮೊದಲ ಬಾರಿಗೆ ವ್ಯಕ್ತಿತ್ವ ಪರೀಕ್ಷೆಯ ಜೊತೆಯಲ್ಲಿ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಅರ್ಜಿ ಸಲ್ಲಿಕೆ ಮತ್ತಿತರ ವಿವರಗಳನ್ನು ಭಾಗ -1 ರಲ್ಲಿ ನೀಡಲಾಗಿತ್ತು. ಪರೀಕ್ಷೆಯಲ್ಲಿ ಆದ ಬಹು ಮುಖ್ಯ ಬದಲಾವಣೆ ಕುರಿತಾದ ವಿಸ್ತೃತ ಮಾಹಿತಿ ಇದೆ. ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು: ಅಭ್ಯರ್ಥಿ ಬ್ಯಾಂಕ್ ಆಯ್ಕೆ ಮಾಡಿಕೊಳ್ಳುವುದಕ್ಕೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಬ್ಯಾಂಕ್ ಆದ್ಯತೆಯ ಆದೇಶವನ್ನು ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್ ಗಳ ಆದ್ಯತೆಯ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು. ಯಾವ್ಯಾವ ಬ್ಯಾಂಕ್ ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಹಾಗೂ ನಮ್ಮ ರಾಜ್ಯದಲ್ಲಿ ಶಾಖೆಗಳಿವೆಯಾ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ. ಒಮ್ಮೆ ನೀವು ಆಯ್ಕೆಯಾದರೆ ನಂತರದ ದಿನಗಳಲ್ಲಿ ಬ್ಯಾಂಕ್/ಸ್ಥಳ ಬದಲಾವಣೆಗಾಗಿ ಸಲ್ಲಿಸುವ ವಿನಂತಿಯನ್ನು ಪರಿಗಣಿಸಲಾ ಗುವುದಿಲ್ಲ. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ಮೆಂಟ್ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದುವಾರಿಕೆಯ ನ್ನು ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿಸಲ್ಲಿಸುವಾಗ ಬಹಳ ಎಚ್ಚರಿಕೆ ವಹಿಸುವುದು ಒಳಿತು. ಅಭ್ಯರ್ಥಿಯ ಹೆಸರು, ವರ್ಗ, ಜನ್ಮ ದಿನಾಂಕ, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಪರೀಕ್ಷಾ ಕೇಂದ್ರ, ಭಾಗವಹಿಸುವ ಬ್ಯಾಂಕ್ಗಳಿಗೆ ಆದ್ಯತೆಗಳ ನೋಂದಣಿ ಇತ್ಯಾದಿ ಸೇರಿದಂತೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ನಮೂದಿಸಲಾದ ಎಲ್ಲಾ ವಿವರಗಳನ್ನು ಅಂತಿಮವೆಂದು ಪರಿಗಣಿಸಲಾಗುತ್ತದೆ ಮತ್ತು ಆನ್ಲೈನ್ ಅರ್ಜಿ ನಮೂನೆಯನ್ನು ಸಲ್ಲಿಸಿದ ನಂತರ ಯಾವುದೇ ಬದಲಾವಣೆ/ಮಾರ್ಪಾಡುಗಳನ್ನು ಅನುಮತಿಸಲಾಗುವುದಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ. ವಿವರಗಳ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ಪತ್ರವ್ಯವಹಾರವನ್ನುಪರಿಗಣಿಸಲಾಗುವುದಿಲ್ಲವಾದ್ದರಿಂದ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ನಮೂನೆಯನ್ನು ಅತ್ಯಂತ ಎಚ್ಚರಿಕೆಯಿಂದ ಭರ್ತಿ ಮಾಡಲು ಸೂಚಿಸಲಾಗಿದೆ. ಅರ್ಜಿ ನಮೂನೆಯಲ್ಲಿ ನೋಂದಾಯಿಸಲಾದ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿಯನ್ನು ಕಾಮನ್ ರಿಕ್ರೂಟ್ಮೆಂಟ್ ಪೆÇ್ರೀಸೆಸ್ ಮುಗಿಯುವವರೆಗೆ ಅಭ್ಯರ್ಥಿಯು ಸಕ್ರಿಯವಾಗಿರಿಸಿಕೊಳ್ಳಬೇಕು.

ನೇಮಕಾತಿ ಪ್ರಕ್ರಿಯೆ: ಆಫೀಸರ್ ಆಯ್ಕೆಗೆ ನಾಲ್ಕು ಹಂತಗಳ ಪರೀಕ್ಷೆ:

ಪೂರ್ವ ಭಾವಿ ಪರೀಕ್ಷೆ: ಪೂರ್ವ ಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕು. ಆದರೆ ಒಟ್ಟಾರೆ ಹೆಚ್ಚು ಅಂಕಗಳಿಸುವುದು ಮುಖ್ಯ. ಪೂರ್ವ ಭಾವಿ ಪರೀಕ್ಷೆ ಒಂದು ಗಂಟೆ ಅವಧಿಯದ್ದು (ಪ್ರತಿ ಪತ್ರಿಕೆಗೂ 20 ನಿಮಿಷಗಳು). 100 ಅಂಕಗಳಿರುತ್ತವೆ (ಅಂದರೆ ಪ್ರತಿ ಪ್ರಶ್ನೆಗೆ ಒಂದೊಂದು ಅಂಕ ನಿಗದಿ) ಇದರಲ್ಲಿ ಇಂಗ್ಲಿಷ್ ಭಾಷಾ ಪತ್ರಿಕೆಗೆ 30ಪ್ರಶ್ನೆ/30 ಅಂಕ ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ ಗೆ 35ಪ್ರಶ್ನೆ/30 ಅಂಕ( ಈ ಸಲ 5 ಅಂಕ ಕಡಿಮೆ ಮಾಡಲಾಗಿದೆ) ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆ 40 ಅಂಕಗಳಿರಲಿವೆ. (5 ಅಂಕ ಹೆಚ್ಚಿಸಲಾಗಿದೆ)ಇಲ್ಲಿ ಗಮನಿಸಬೆಕಾಗಿದ್ದು ಪ್ರಶ್ನೆಗಳ ಸಂಖ್ಯೆ ಕಳೆದ ವರ್ಷದಷ್ಟೆ ಇದ್ದು ರೀಸನಿಂಗ್ ನಲ್ಲಿ ಅಂಕ ಹೆಚ್ಚಿಸಲಾಗಿದೆ.ಸಿಟ್ಟಿಂಗ್ ಅರೇಂಜ್ ಮೆಂಟ್ ಮತ್ತು ಪಝಲ್ಸ್ ಡಾಟಾ ಸಫೀಶೀಯನ್ಸಿ,ಮಶೀನ್ ಇನ್ ಪುಟ್, ಹೆಚ್ಚು ಅಂಕ ಗಳಿಸಲು ಸಹಕಾರಿಯಾಗಬಹುದು.ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕೆಂಬ ನಿಯಮವಿದೆ. ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ.ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ.

ಮುಖ್ಯ ಪರೀಕ್ಷೆ ವಿವರಗಳು: ಕ್ರ. ಸಂ ವಿಷಯ ಹಾಗೂ ಪತ್ರಿಕೆ ಪ್ರಶ್ನೆಗಳು ಅಂಕಗಳು ಅವಧಿ
I ರೀಸನಿಂಗ್ 40 60 50 ನಿಮಿಷಗಳು
II ಜನರಲ್/ಎಕಾನಮಿ/ಬ್ಯಾಂಕಿಂಗ್ ಅವೇರ್ನೆಸ್/ಡಿಜಿಟಲ್ ಫೈನಾನ್ಸ್ ಅವಾರ್ನೆಸ್, ಆರ್ ಬಿ ಆಯ್ ಸುತ್ತೋಲೆ ಒಳಗೊಂಡಿದೆ 35 50 25 ನಿಮಿಷಗಳು
III ಇಂಗ್ಲಿಷ್ ಭಾಷೆ 35 40 40 ನಿಮಿಷಗಳು
Iಗಿ ಡೇಟಾ ಅನಾಲಿಸಿಸ್ ಆ?ಯಂಡ್ ಇಂಟರ್ ಪ್ರಿಟೇಷನ್ 35 50 45 ನಿಮಿಷಗಳು
ಒಟ್ಟು 145 200 2 ಗಂಟೆ 40 ನಿಮಿಷಗಳು
ಗಿ ಪತ್ರ ಬರವಣಿಗೆ ಮತ್ತು ಪ್ರಬಂಧ(ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳು, ಬ್ಯಾಂಕಿಂಗ್ ಮತ್ತು ತಂತ್ರಜ್ಞಾನದಲ್ಲಿನ ಉದಯೋನು ಖ ಪ್ರವೃತ್ತಿಗಳು, ಪ್ರಸ್ತುತ ಘಟನೆಗಳು, ನೀತಿಶಾಸ್ತ್ರ ಇತ್ಯಾದಿಗಳನ್ನು ಆಧರಿಸಿರಬಹುದು. 02 25 30 ನಿಮಿಷಗಳು
ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇರುತ್ತವೆ. ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯದ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದ 0.25 ಅಂಕ ವನ್ನು ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ. ಪ್ರಶ್ನೆಗೆ ಉತ್ತರ ಗುರುತಿಸಲಾಗಿಲ್ಲದಿದ್ದರೆ ಅಂಕ ಕಳೆಯುವುದಿಲ್ಲ.
ಮುಖ್ಯ ಪರೀಕ್ಷೆ ಮುಗಿಯುತ್ತಿದ್ದಂತೆ ಇಂಗ್ಲಿಷ್ ಭಾಷೆಗೆ (Letter Writing & Essay- with two questions) ಸಂಬಂಧಿಸಿದಂತೆ 25 ಅಂಕಗಳಿಗೆ ಡಿಸ್ಸ್ಕ್ರಿಟಿವ್ ಟೆಸ್ಟ್ ನಡೆಸಲಾಗುತ್ತದೆ. ಅವಧಿ 30 ನಿಮಿಷಗಳು. ಅಭ್ಯರ್ಥಿಗಳು ಕಂಪ್ಯೂಟರ್ ನಲ್ಲಿಯೇ ಉತ್ತರ ಬರೆಯಬೇಕು. ಇಂಗ್ಲಿಷ್ ಭಾಷೆಯ ವಿವರಣಾತ್ಮಕ ಪೇಪರ್ (ಪತ್ರ ಬರವಣಿಗೆ ಮತ್ತು ಪ್ರಬಂಧ) ಅನ್ನು ಸ್ವಯಂಚಾಲಿತ ಸ್ಕೋರಿಂಗ್ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ. ಬರವಣಿಗೆಯ ಪ್ರಾವೀಣ್ಯಕ್ಕೆ ಸಂಬಂಧಿಸಿದಂತೆ ವೈಶಿಷ್ಟಗಳನ್ನು ಗುರುತಿಸುವುದು ಇದರ ಕಾರ್ಯ ವಿಧಾನವಾಗಿದೆ. ಆಂಗ್ಲ ಭಾಷೆಯಲ್ಲಿ ಹಾಗೂ ಬರವಣಿಗೆಯಲ್ಲಿ ಪರೀಕ್ಷೆ ಬರೆಯುವವರ ಪ್ರಾವೀಣ್ಯವನ್ನು ವಸ್ತುನಿಷ್ಠ ರೀತಿಯಲ್ಲಿ ಮೌಲ್ಯಮಾಪನ ಮಾಡುವ ವಿಶಿಷ್ಟ ವಿಧಾನವಾಗಿದೆ. ಮುಖ್ಯ ಪರೀಕ್ಷೆಯಲ್ಲಾದ ಬಹು ದೊಡ್ಡ ಬದಲಾವಣೆಯನ್ನು ಗಮನಿಸೋಣ. ರೀಸನಿಂಗ್ ಪೇಪರ್ ನ ಜೊತೆಯಲ್ಲಿದ್ದ ಕಂಪ್ಯೂಟರ್ ಅಪ್ಟಿಟ್ಯೂಡ್ ನ್ನು ಕೈ ಬಿಡಲಾಗಿದೆ.ಹಿಂದೆ ಕಂಪ್ಯೂಟರ್ ಮೇಲೆ ಪ್ರಶ್ನೆಗಳು ಕೇಳಿದ್ದು ಕಡಿಮೆ. 5 ಪ್ರಶ್ನೆಗಳು ಕಡಿತವಾಗಿದ್ದು, ಸಮಯ ಕೂಡಾ 10 ನಿಮಿಷ ಕಡಿತಗೊಳಿಸಲಾಗಿದೆ. ಅಂಕಗಳು 60.
II.General/ Economy/ Banking Awareness 40 ಪ್ರಶ್ನೆ 40 ಅಂಕಗಳು 35 ನಿಮಿಷಗಳ ಬದಲಾಗಿ ನಿರ್ದಿಷ್ಟವಾಗಿ ಸಿಲೆಬಸ್ ನ್ನು ಜನರಲ್/ ಎಕಾನಮಿ/ ಬ್ಯಾಂಕಿಂಗ್ ಅವೇರ್ನೆಸ್ /ಡಿಜಿಟಲ್ ಫೈನಾನ್ಸ್ ಅವಾರ್ನೆಸ್/ಆರ್ ಬಿ ಆಯ್ ಸುತ್ತೋಲೆ ಎಂದು ವಿಂಗಡಿಸಿ 35 ಪ್ರಶ್ನೆ / 50ಅಂಕ/ 25 ನಿಮಿಷಗಳ ಸಮಯವನ್ನು ನಿಡಲಾಗಿದೆ. ಅಂದರೆ ಪ್ರಶ್ನೆಗಳ ಸಂಖ್ಯೆ ಕಡಿಮೆಗೊಳಿಸಿ ಅಂಕ ಹೆಚ್ವಿಸಲಾಗಿದ್ದು, ಸಮಯ ಕಡಿತಗೊಳಿಸಲಾಗಿದೆ. ಇಂಗ್ಲಿಷ್ ಭಾಷೆಗೆ ಸಂಬಂಧಿಸಿದಂತೆ ಬದಲಾವಣೆ ಮಾಡಿಲ್ಲ. Data Analysis & Interpretation 35 ಪ್ರಶ್ನೆಗಳಲ್ಲಿ ಬದಲಾವಣೆ ಮಾಡದೆ 60 ಅಂಕಗಳನ್ನು 50 ಕ್ಕೆ ಇಳಿಸಿದ್ದು ಸಮಯ 45 ನಿಮಿಷಗಳಲ್ಲಿ ಬದಲಾವಣೆ ಮಾಡಲಾಗಿಲ್ಲ.

ನೆನಪಿಡಿ: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ .

ಹಂತ-III ವ್ಯಕ್ತಿತ್ವ ಪರೀಕ್ಷೆ:
ಈ ಎರಡೂ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತದ ವ್ಯಕ್ತಿತ್ವ ಪರೀಕ್ಷೆಗೆ ಅರ್ಹರಾಗುತ್ತಾರೆ. ಈ ಮೊದಲು ಎಸ್ ಬಿ ಆಯ್ ಇದನ್ನು ಪರಿಚಯಿಸಿತ್ತು.ಇವಾಗ ಮೊದಲ ಬಾರಿಗೆ ಐಬಿಪಿಎಸ್ ಪರಿಚಯಿಸಿದೆ. ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ವ್ಯಕ್ತಿತ್ವ ಪರೀಕ್ಷೆಗೆ (ಸ್ವಯಂ ವರದಿ) ಕರೆಯಲಾಗುವುದು. ಅಭ್ಯರ್ಥಿಗಳ ವ್ಯಕ್ತಿತ್ವ ಪೆÇ್ರಫೈಲ್ ಅನ್ನು ಸಂದರ್ಶನ ಸಮಿತಿಯ ಮುಂದೆ ಇಡಲಾಗುತ್ತದೆ. ವ್ಯಕ್ತಿತ್ವ ಪರೀಕ್ಷೆಯು ಅರ್ಹತಾ ಸ್ವಭಾವದ್ದಾಗಿರುವುದಿಲ್ಲ. ಆದಾಗ್ಯೂ, ಸಂದರ್ಶನ ಪ್ರಕ್ರಿಯೆಗೆ ಹಾಜರಾಗಲು ಅರ್ಹತೆ ಪಡೆಯಲು ವ್ಯಕ್ತಿತ್ವ ಪರೀಕ್ಷೆಯನ್ನು ಎದುರಿಸುವುದು ಕಡ್ಡಾಯ.

ಹಂತ-IV ಸಂದರ್ಶನ:
ವ್ಯಕ್ತಿತ್ವ ಪರೀಕ್ಷೆಯಲ್ಲಿ ನಿಮ್ಮಿಂದ ಸಂಗ್ರಹಿಸಿದ ಮಾಹಿತಿಯನ್ನು ಸಂದರ್ಶನ ದ ಕಮಿಟಿ ಮುಂದೆ ಇಡಲಾಗುವುದು.ವ್ಯಕ್ತಿತ್ವ ಪರೀಕ್ಷೆ ಗೆ ಅಂಕಗಳಿಲ್ಲವಾದರೂ ಪ್ರತಿಯೊಬ್ಬ ಅಭ್ಯರ್ಥಿಯ ಹಾಜರಾತಿ ಖಡ್ಡಾಯವಾಗಿದೆ. ಒಬಿಸಿ ವರ್ಗದ ಅಭ್ಯರ್ಥಿಗಳು ಭಾರತ ಸರ್ಕಾರವು ನಿಗದಿಪಡಿಸಿದ ‘ನಾನ್-ಕ್ರೀಮಿ ಲೇಯರ್’ ಷರತ್ತನ್ನು ಹೊಂದಿರುವ, 01.04.2025 ಅಥವಾ ನಂತರ ನೀಡಲಾದ ನಮೂನೆಯಲ್ಲಿ ಒಬಿಸಿ ಪ್ರಮಾಣಪತ್ರವನ್ನು ಸಂದರ್ಶನದ ದಿನಾಂಕದವರೆಗೆ ಸಲ್ಲಿಸಬೇಕು. ಅಭ್ಯರ್ಥಿಯು ಸಂದರ್ಶನದ ದಿನಾಂಕದವರೆಗೆ ಸಲ್ಲಿಸಬೇಕು. ಅಭ್ಯರ್ಥಿಯು ಸಂದರ್ಶನದ ದಿನಾಂಕದಂದು / ಅಥವಾ ಅದಕ್ಕಿಂತ ಮೊದಲು ಮೀಸಲಾತಿ ಪಡೆಯುವ ಹಕ್ಕನ್ನು ಬೆಂಬಲಿಸಲು ನಿಗದಿತ ನಮೂನೆಯಲ್ಲಿ ಅಗತ್ಯವಾದ ಒಬಿಸಿ (ಎನ್ಸಿಎಲ್) ಪ್ರಮಾಣಪತ್ರವನ್ನು ಹೊಂದಿರಬೇಕು.

ಆಯ್ಕೆ ಪಟ್ಟಿ: ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ-II ಮತ್ತು ಹಂತ-IV ಎರಡರಲ್ಲೂ ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು. ಸಂದರ್ಶನಕ್ಕೆ ನಿಗದಿ ಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಶೇ 40 ((SC/ST/OBC/PWBD ಅಭ್ಯರ್ಥಿಗಳಿಗೆ ಶೇ 35).ಆನ್ಲೈನ್ ಮುಖ್ಯ ಪರೀಕ್ಷೆ ಮತು ಸಂದರ್ಶನದ ಅಂಕಗಳ ಅನುಪಾತ ಕ್ರಮವಾಗಿ 80:20 ಆಗಿರುತ್ತದೆ.

ಮೀಸಲು ಪಟ್ಟಿ: ಐ ಬಿ ಪಿ ಎಸ್, ಪ್ರತಿ ವರ್ಗದ ಖಾಲಿ ಹುದ್ದೆಗಳ ಸರಿ ಸುಮಾರು 20 ಪ್ರತಿ ಶತದಷ್ಟು ಮೀಸಲು ಪಟ್ಟಿಯನ್ನು ಅಭ್ಯರ್ಥಿಗಳ ಲಭ್ಯತೆಗೆ ಒಳಪಟ್ಟು ಇಟ್ಟುಕೊಳ್ಳಬಹುದು. ಇದು ಭಾಗವಹಿಸುವ ಬ್ಯಾಂಕ್(ಗಳು) ನಿಂದ ತಾತ್ಕಾಲಿಕ ಹಂಚಿಕೆ/ನೇಮಕಾತಿಯನ್ನು ಖಾತರಿಪಡಿಸು ವುದಿಲ್ಲ.ಮೀಸಲು ಪಟ್ಟಿಯ ಮಾನ್ಯತೆಯ ಅವಧಿಯೊಳಗೆ, ವಿವಿಧ ಭಾಗವಹಿಸುವ ಬ್ಯಾಂಕ್ಗಳು ಮಧ್ಯಂತರಗಳಲ್ಲಿ ಮತ್ತಷ್ಟು ಖಾಲಿ ಹುದ್ದೆಗಳನ್ನು ಒದಗಿಸಿದರೆ, ಮೀಸಲು ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ತಾತ್ಕಾಲಿಕ ಹಂಚಿಕೆಯನ್ನು ಮೂರರಿಂದ ನಾಲ್ಕು ಬಾರಿ ಕೈಗೊಳ್ಳಬಹುದು.

ನೆನಪಿಡಿ: ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ ಇದೀಗ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ನಡೆಸುವ ಪರೀಕ್ಷೆಗಳಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಣಕಾಸು ಸಚಿವಾಲಯ ಮಹತ್ವದ ಹೆಜ್ಜೆಯಿಟ್ಟಿದೆ. ಮೊದಲ ಬಾರಿಗೆ ಸಾಮಾನ್ಯ ನೇಮಕಾತಿ ಪ್ರಕ್ರಿಯೆಗಾಗಿ ಅಭ್ಯರ್ಥಿಗಳು ಮಾನ್ಯವಾದ ಆಧಾರ್ ಕಾರ್ಡ್ ಅನ್ನು ಹೊಂದಿರುವುದು ಕಡ್ಡಾಯವಾಗಿದೆ. IBPS ನಲ್ಲಿ ಭಾಗವಹಿಸುವ ಬ್ಯಾಂಕುಗಳು ಆಯ್ಕೆ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಅಭ್ಯರ್ಥಿಗಳ ಆನ್ಲೈನ್ ಆಧಾರ್ ಪರಿಶೀಲನೆಯನ್ನು ಸಹ ನಡೆಸುತ್ತವೆ. ಐಬಿಪಿಎಸ್ ನ ಅಧೀಕೃತ ವೆಬ್ ಸೈಟ್ ನಲ್ಲಿ ನೀಡಿದ ಮಾಹಿತಿ ಬಳಸಿ ಸಾಧ್ಯವಾದಷ್ಟು ಕ್ರೋಢೀಕರಿಸಿ ಲೇಖನ ನೀಡಲು ಪ್ರಯತ್ನಿಸಿದ್ದೇವೆ.ಆದಾಗ್ಯೂ ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ.

ಮಾಹಿತಿ : ಆರ್.ಕೆ.ಬಾಲಚಂದ್ರ. ಲೇಖಕರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ಹಾಗೂ ಸಾಪ್ಟ್ ಸ್ಕಿಲ್ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಬೆಂಗಳೂರು.

Share. Facebook Twitter Pinterest LinkedIn Tumblr Email WhatsApp
Previous Article*ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ 5208 ಹುದ್ದೆಗಳ ನೇಮಕಾತಿ ಪರ್ವ : ಐ.ಬಿ.ಪಿ.ಎಸ್ ನಿಂದ ಅರ್ಜಿ ಆಹ್ವಾನ*
Next Article *ಬೆಂಗಳೂರು ಕಾಲ್ತುಳಿತ ದುರಂತ : ವರದಿ ಸಲ್ಲಿಸಿದ ಜಸ್ಟೀಸ್ ಕುನ್ಹಾ ಆಯೋಗ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.