Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*
  • *ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*
  • *ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*
  • *ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*
  • *ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*
  • *ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*
  • *ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*
  • *ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಂದೂಕು ವಿನಾಯಿತಿ ಪ್ರಮಾಣ ಪತ್ರ : ಕೊಡವ ಜನಾಂಗೀಯ ಪ್ರಮಾಣ ಪತ್ರ ಪಡೆಯಲು ಸಿಎನ್‍ಸಿ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಂದೂಕು ವಿನಾಯಿತಿ ಪ್ರಮಾಣ ಪತ್ರ : ಕೊಡವ ಜನಾಂಗೀಯ ಪ್ರಮಾಣ ಪತ್ರ ಪಡೆಯಲು ಸಿಎನ್‍ಸಿ ಸಲಹೆ*

ಜುಲೈ 12, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.12 NEWS DESK : ಕೊಡವರು ಬಂದೂಕು ವಿನಾಯಿತಿ ಪ್ರಮಾಣಪತ್ರವನ್ನು ಪಡೆಯಲು ಜಮ್ಮಾ ಪ್ರಮಾಣ ಪತ್ರಗಳನ್ನು ಅವಲಂಬಿಸುವ ಬದಲು ಕೊಡವ ಜನಾಂಗೀಯ ಪ್ರಮಾಣ ಪತ್ರವನ್ನು ಪಡೆಯುವಂತೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಸಲಹೆ ನೀಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಂವಿಧಾನದ 25 ಮತ್ತು 26ನೇ ವಿಧಿಗಳ ಅಡಿಯಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದುವ ಕೊಡವ ಸಮುದಾಯದ ಹಕ್ಕನ್ನು ಧಾರ್ಮಿಕ ಸಂಸ್ಕಾರವಾಗಿ ಸಂರಕ್ಷಿಸಲು ಕೊಡವ ಜನಾಂಗೀಯ ಪ್ರಮಾಣ ಪತ್ರವನ್ನು ಪಡೆಯುವ ಕ್ರಮ ಸಹಕಾರಿಯಾಗಲಿದೆ. ಕೊಡವ ಸಮುದಾಯದ ಸಂಪ್ರದಾಯ ಮತ್ತು ಹಕ್ಕುಗಳ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಕೊಡವ ಜನಾಂಗ ಪ್ರಮಾಣ ಪತ್ರದ ಅಗತ್ಯವಿದೆ. ಕೊಡವ ಪ್ರಮಾಣ ಪತ್ರವು ಜಮ್ಮಾ ಹೊಂದಿರುವವರ ಪ್ರಮಾಣ ಪತ್ರಗಳನ್ನು ಅವಲಂಬಿಸದೆ ಬಂದೂಕು ವಿನಾಯಿತಿಯ ಹಕ್ಕನ್ನು ಗಟ್ಟಿಗೊಳಿಸುತ್ತದೆ ಎಂದು ತಿಳಿಸಿದ್ದಾರೆ. ಜಮ್ಮಾ ಭೂಮಿಯನ್ನು ಖರೀದಿಸುವ ಮೂಲಕ ಅಥವಾ ಈ ಉದ್ದೇಶಕ್ಕಾಗಿ ಮಾತ್ರ ಕೊಡವ ಮಹಿಳೆಯರೊಂದಿಗೆ ವಿವಾಹವಾಗುವ ಮೂಲಕ ಕೊಡವರಲ್ಲದ ಹೊರಗಿನವರು ಬಂದೂಕು ವಿನಾಯಿತಿ ಸವಲತ್ತನ್ನು ಬಳಸಿಕೊಳ್ಳುವುದನ್ನು ತಡೆಯಬೇಕು. ಕೊಡವ ಸಮುದಾಯದ ಜಾನಪದ ಕಾನೂನು ವ್ಯವಸ್ಥೆಗಳು ಮತ್ತು ಆದಿಮಸಂಜಾತ ಏಕ-ಜನಾಂಗೀಯ ಗುರುತನ್ನು ಬಲಪಡಿಸಬೇಕು. ಕೊಡವ ಸಮುದಾಯದ ಅರ್ಹ ಸದಸ್ಯರು ಬಂದೂಕು ವಿನಾಯಿತಿ ಪ್ರಮಾಣ ಪತ್ರವನ್ನು ಪಡೆಯುತ್ತಿದ್ದಾರೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿರುವ ಅವರು, ಇದರಿಂದಾಗಿ ರಾಷ್ಟ್ರೀಯ ಭದ್ರತೆಗೆ ಮತ್ತು ಸುರಕ್ಷತೆಗೆ ಕೊಡುಗೆ ನೀಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಡಗಿನ ಹೊರಗಿನ ಕೆಲವು ವ್ಯಕ್ತಿಗಳು ಭಾಗಮಂಡಲದಲ್ಲಿ ಜಮ್ಮಾ ಭೂಮಿಯನ್ನು ಖರೀದಿಸಿ, ಜಮ್ಮಾಲ್ಯಾಂಡ್ ಒಕ್ಕಲುತನದ ನೆಪದಲ್ಲಿ ಬಂದೂಕು ಪರವಾನಗಿ ವಿನಾಯಿತಿ ಪ್ರಮಾಣಪತ್ರಗಳನ್ನು ಪಡೆದು ಬಂದೂಕುಗಳನ್ನು ಹೊಂದಿದ್ದರು. ಇದರಿಂದಾಗಿ ಆದಿಮಸಂಜಾತ ಕೊಡವರು ಮತ್ತು ಜಮ್ಮಾ ಒಕ್ಕಲುದಾರರಿಗೆ ಮಾತ್ರ ಇರುವ ಈ ಶಾಸನಬದ್ಧ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ರಾಜದ್ರೋಹ ಎಸಗಿದರು ಮತ್ತು ದುರುಪಯೋಗಪಡಿಸಿಕೊಂಡರು. ಇದನ್ನು ಇತ್ತೀಚೆಗೆ ಪೊಲೀಸ್ ಇಲಾಖೆಯೂ ಖಚಿತಪಡಿಸಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. :: *ಕೊಡಗರು ಮತ್ತು ಕೊಡವ* :: ಸರ್ಕಾರಿ ದಾಖಲೆಗಳಲ್ಲಿ ಕೊಡವ ಸಮುದಾಯದ ನಾಮಕರಣವನ್ನು ಸರಿಪಡಿಸುವಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ನಿರ್ಣಾಯಕ ಪಾತ್ರ ವಹಿಸಿದೆ. ಕೊಡಗರು ಎಂದು ತಪ್ಪಾಗಿದ್ದ ಕೊಡವ ನಾಮಕರಣದ ವಿಷಯವನ್ನು ಸಿಎನ್‍ಸಿ ಸಂಘಟನೆ 2008 ರಲ್ಲಿ ಸಕ್ಷಮ ಪ್ರಾಧಿಕಾರವಾದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗ ಆಯೋಗದ (ಕೆಎಸ್‍ಬಿಸಿ) ಗಮನಕ್ಕೆ ತಂದಿತು. 2009 ರಲ್ಲಿ, ಸಿಎನ್‍ಸಿ ಸಮಾಜ ವಿಜ್ಞಾನಿ ಡಾ. ದ್ವಾರಕನಾಥ್ ನೇತೃತ್ವದ ಆಯೋಗಕ್ಕೆ, ಕೊಡವ ಜನಾಂಗೀಯ ಸಮುದಾಯದ ಜಾನಪದ ಸಂಪತ್ತನ್ನು ಅನಾವರಣಗೊಳಿಸುವ ಮೂಲಕ “ಕೊಡಗರು” ನಿಂದ “ಕೊಡವ” ಗೆ ನಾಮಕರಣವನ್ನು ಸರಿಪಡಿಸಲು ಮನವರಿಕೆ ಮಾಡಿತು. ನಮ್ಮ ಮನವಿಗೆ ಸ್ಪಂದಿಸಿದ ದ್ವಾರಕನಾಥ್ ಆಯೋಗವು ಕೊಡಗರು ಬದಲಿಗೆ ಕೊಡವರು ಎಂದು ತಿದ್ದುಪಡಿ ಮಾಡಲು ಕರ್ನಾಟಕ ಸರ್ಕಾರಕ್ಕೆ ಶಿಫಾರಸ್ಸು ಮಾಡಿತು. ಆಯೋಗದ ಶಿಫಾರಸು ವರದಿಯನ್ನು ಜಾರಿಗೆ ತರಲು ಕರ್ನಾಟಕ ಸರ್ಕಾರ ವಿಫಲವಾದಾಗ ಕೊಡವರ ಸಂವಿಧಾನಿಕ ಹಕ್ಕುಗಳನ್ನು ಅನುಷ್ಠಾನಗೊಳಿಸುವಲ್ಲಿ ಹೈಕೋರ್ಟ್ ಆದೇಶ ಹೊರಡಿಸಿತು. ಹೈಕೋರ್ಟ್ ಅಂತಿಮ ಆದೇಶವನ್ನು ಕೂಡ ಪಾಲಿಸದ ಕಾರಣ ಕೊಡವ ನ್ಯಾಷನಲ್ ಕೌನ್ಸಿಲ್ ನ್ಯಾಯಾಂಗ ನಿಂಧನೆ ಪ್ರಕ್ರಿಯೆ ಮುಂದುವರಿಸಿತು. 14 ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿ ಹೈಕೋರ್ಟ್ ಮೆಟ್ಟಿಲೇರಿತು. ಡಿಸೆಂಬರ್ 8, 2021 ರಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಹೊರಡಿಸಿದ ಹೈಕೋರ್ಟ್‍ನ ಅಂತಿಮ ತೀರ್ಪು ದ್ವಾರಕನಾಥ್ ಆಯೋಗದ ಶಿಫಾರಸನ್ನು ಜಾರಿಗೆ ತರುವುದಾಗಿತ್ತು. ಸದರಿ ಹೈಕೋರ್ಟ್ ಆದೇಶವನ್ನು ಜಾತಿಗೆ ತರುವಲ್ಲಿ ಕರ್ನಾಟಕ ಸರ್ಕಾರ ವಿಫಲವಾಗುವುದರೊಂದಿಗೆ ಕೊಡವರ ದೀರ್ಘಕಾಲಿನ ಸಂವಿಧಾನಿಕ ಹಕ್ಕುಗಳನ್ನು ವಿಳಂಬಗೊಳಿಸುತ್ತಾ ಬಂತು. ಈ ಹಿನ್ನೆಲೆಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಮುಂದುವರೆಸಿತು. ಅಂತಿಮವಾಗಿ, ಸರ್ಕಾರವು ಡಿಸೆಂಬರ್ 2023 ರಲ್ಲಿ ಗೆಜೆಟ್ ಅಧಿಸೂಚನೆಯ ಮೂಲಕ ಬದಲಾವಣೆಯನ್ನು ಜಾರಿಗೆ ತಂದಿತು, ಸಮುದಾಯದ ಏಕ-ಜನಾಂಗೀಯ ಗುರುತನ್ನು “ಕೊಡವ” ಎಂದು ಗುರುತಿಸಿತು. ಈ ಸಾಧನೆಯು ಆದಿಮಸಂಜಾತ, ಏಕ-ಜನಾಂಗೀಯ ಕೊಡವ ಸಮುದಾಯದ ಗುರುತು, ಹಕ್ಕುಗಳು ಮತ್ತು ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸಿಎನ್‍ಸಿಯ ಸಮರ್ಪಣೆಯನ್ನು ಎತ್ತಿ ತೋರಿಸುತ್ತದೆ. ಈ ದೀರ್ಘ ಕಾಲದ ಕಾನೂನು ಪ್ರಯಾಣದಲ್ಲಿ ಹೈಕೋರ್ಟ್ ವಕೀಲ ಬಲ್ಲಚಂಡ ಬೊಳ್ಳಿಯಪ್ಪ ಅವರು ಯಶಸ್ಸು ಸಾಧಿಸುವವರೆಗೂ ಬಂಡೆಯಂತೆ ನಿಂತರು. ಸಾಂವಿಧಾನಿಕ ವಕೀಲರು ಮತ್ತು ಪ್ರಾದೇಶಿಕ ಸ್ವಾಯತ್ತತೆಯ ಪರಿಣಿತರಾದ ವಿಕ್ರಮ್ ಹೆಗ್ಡೆ ಅವರು 2022 ರ ಗನ್ ವಿನಾಯಿತಿ ಮೇಲ್ಮನವಿ ಪ್ರಕರಣ, ಎಸ್‍ಎಲ್‍ಪಿ (ಸಿವಿಲ್) ಸಂಖ್ಯೆ 2925 ರಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಪರವಾಗಿ ಭಾರತದ ಸುಪ್ರೀಂ ಕೋರ್ಟ್‍ನಲ್ಲಿ ಹಾಜರಾಗುತ್ತಿದ್ದಾರೆ. ಇದರಲ್ಲಿ ತಾವು ಕೂಡ ಪ್ರತಿವಾದಿಯಾಗಿರುವುದಾಗಿ ಎನ್.ಯು.ನಾಚಪ್ಪ ವಿವರಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ಮಾನವ ಸಂಘರ್ಷ ತಡೆಗೆ ಕೇಂದ್ರ ಸರಕಾರ ಏನು ಕ್ರಮ ಕೈಗೊಂಡಿದೆ*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಸಿಎನ್‌ಸಿ ವಿಚಾರಣ ಸಂಕಿರಣ : ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಲು ಕೊಡವರು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿಲ್ಲ : ಕೆ.ಪಿ.ಬಾಲಸುಬ್ರಹ್ಮಣ್ಯ ಅಭಿಮತ*

ಮಾರ್ಚ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.21 : ಯಾರಿಗೂ ಹೋಲಿಕೆಯಿಲ್ಲದ ಒಂದು ಅಪರೂಪದ ಮಾನವ ಸಂಕುಲವಾಗಿರುವ ಕೊಡವರು ತಮ್ಮತನವನ್ನು ಉಳಿಸಿಕೊಳ್ಳಲು ಹಕ್ಕುಗಳನ್ನು…

*ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ : ಇಬ್ಬರ ಸಾವು*

ಮಾರ್ಚ್ 21, 2026

*ವಿರಾಜಪೇಟೆ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮುತ್ತಪ್ಪ ತೆರೆ ಮಹೋತ್ಸವ*

ಮಾರ್ಚ್ 21, 2026

*ಕೂಡಿಗೆ : ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ : ಶಿಕ್ಷಕರ ಸೇವೆ ಅನನ್ಯ : ಎಸ್.ಎ.ಯೋಗೇಶ್*

ಮಾರ್ಚ್ 21, 2026

*ಭಾಗಮಂಡಲದಲ್ಲಿ ಜನಸ್ಪಂದನ ಸಭೆ : ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ*

ಮಾರ್ಚ್ 21, 2026

*ಕಳೆದ ಮೂರು ವರ್ಷದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 21, 2026

*ಮಾ.24 ರಂದು ಕಣ್ಣಿನ ತಪಾಸಣಾ ಶಿಬಿರ*

ಮಾರ್ಚ್ 21, 2026

*ರೋಟರಿ ಮಡಿಕೇರಿಯಿಂದ ಮೂರ್ನಾಡಿನಲ್ಲಿ ಕ್ಯಾನ್ಸರ್ ನಿರೋಧಕ ಲಸಿಕೆ ವಿತರಣೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದ ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಮಾರ್ಚ್ 21, 2026

*ಕೊಡಗು ಕಲಾವಿದರ ಸಂಘದಿಂದ ಎ.ಟಿ.ರಘು ಪುಣ್ಯ ಸ್ಮರಣೆ : ಪುಸ್ತಕ ಬಿಡುಗಡೆ, ಸಮಿತಿ ಪುನರ್‌ರಚನೆ*

ಮಾರ್ಚ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.