Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 
  • *ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪಾಲೆಮಾಡು ಕಾನ್ಸಿರಾಂ ನಗರದಲ್ಲಿ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ : ಗ್ರಾಮಗಳು ಅಭಿವೃದ್ಧಿಯಾದರೆ ದೇಶದ ಪ್ರಗತಿ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪಾಲೆಮಾಡು ಕಾನ್ಸಿರಾಂ ನಗರದಲ್ಲಿ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ : ಗ್ರಾಮಗಳು ಅಭಿವೃದ್ಧಿಯಾದರೆ ದೇಶದ ಪ್ರಗತಿ : ಶಾಸಕ ಡಾ.ಮಂತರ್ ಗೌಡ*

ಜುಲೈ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜು.14 NEWS DESK : ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಡಿಕೇರಿ ವಿಧಾನಸಭೆ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಹೇಳಿದರು. ಹೊದ್ದೂರು ಗ್ರಾಮ ಪಂಚಾಯಿತಿಯ ಪಾಲೆಮಾಡು ಕಾನ್ಸಿರಾಂ ನಗರದಲ್ಲಿ ಸುಮಾರು 2.10 ಕೋಟಿರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು. ಪಾಲೆಮಾಡುವಿನಲ್ಲಿ ಸುಮಾರು 230 ಕುಟುಂಬಗಳಿಗೆ 9.00 ಸೆಂಟ್ ನ ಅಳತೆಯ ಮನೆ ನಿವೇಶನದ ಹಕ್ಕು ಪತ್ರವನ್ನು ವಿತರಿಸಿದ್ದು ಖುಷಿ ತಂದಿದೆ. ಅಧಿಕಾರಿಗಳ ಮಟ್ಟದಲ್ಲಿ ಗ್ರಾಮ ಪಂಚಾಯಿತಿಯ ಕಾರ್ಯ ಶ್ಲಾಘನೀಯ ಎಂದರು. ಗ್ರಾಮದ ಅಭಿವೃದ್ಧಿ ಕಾರ್ಯಗಳಲ್ಲಿ ರಾಜಕೀಯರಹಿತವಾಗಿ ಜನರ ಸಮಸ್ಯೆಗಳನ್ನು ಬಗೆಹರಿಸುವುದು ಅತೀ ಮುಖ್ಯ ಎಂದ ಅವರು, ಪಾಲೆಮಾಡು ಕಾನ್ಸಿರಾಂ ನಗರದಲ್ಲಿ ಇನ್ನು ಅಂಬೇಡ್ಕರ್ ಭವನವನ್ನು ನಿರ್ಮಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ರಾಜ್ಯದ ಸಚಿವರನ್ನು ಮತ್ತು ಮನೆ ಹಕ್ಕು ಪತ್ರ ನೀಡಲು ಸಹಕರಿಸಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ಸ್ಮರಿಸಿಕೊಂಡ ಶಾಸಕರು ಜಿಲ್ಲೆಯಾದ್ಯಂತ ಬಡ ಜನರ ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಡಲು ಮುಂದಿನ ದಿನಗಳಲ್ಲಿ ಯೋಜನೆಗಳನ್ನು ಹಾಕಿಕೊಳ್ಳಲಾಗುವುದು ಬಡವರ ಪರವಾದ ಕಾನೂನಾತ್ಮಕ ಹೋರಾಟಗಳು ಮತ್ತಷ್ಟು ನಡೆಯಲಿ ಎಂದರು. ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಮಾತನಾಡಿ, ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳಲ್ಲಿ ಶಾಸಕರು ಬೆನ್ನೆಲುಬಾಗಿ ನಿಂತಿದ್ದಾರೆ. ಪಾಲೆಮಾಡುವಿಗೆ ಮೊದಲ ಸರ್ಕಾರಿ ಬಸ್ಸು, ಹಕ್ಕು ಪತ್ರವನ್ನು ನೀಡಿರುವುದು, ನೂತನವಾದ ಕಾಂಕ್ರೀಟ್ ರಸ್ತೆ ಹೀಗೆ ಅಭಿವೃದ್ಧಿ ಕಾರ್ಯಗಳಲ್ಲಿ ಶಾಸಕರು ಪ್ರಮಾಣಿಕವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು. ಪ್ರಾಸ್ತವಿಕ ಮಾತನಾಡಿದ ಹೊದ್ದೂರು ಗ್ರಾಮ ಪಂಚಾಯಿತಿಯ ಸದಸ್ಯ ಕೆ.ಮೊಣ್ಣಪ್ಪ ಪಾಲೆಮಾಡು ಕಾನ್ಸಿರಾಂ ನಗರದ ಅಭಿವೃದ್ಧಿಗೆ ನಿರಂತರವಾಗಿ ನಮ್ಮ ಅಹವಾಲುಗಳಿಗೆ ಉತ್ತಮವಾದ ಸ್ಪಂದನೆಯನ್ನು ನೀಡಿರುವ ಶಾಸಕ ಡಾ. ಮಂತರ್ ಗೌಡ ಅವರು, ನಗರಕ್ಕೆ ಅಗತ್ಯವಿರುವ ಅಂಬೇಡ್ಕರ್ ಭವನ ಮತ್ತು ಇನ್ನಿತರ ಬೇಡಿಕೆಗಳ ಅರ್ಜಿಯನ್ನು ಸಲ್ಲಿಸುವಂತೆ ಮನವಿ ಮಾಡಿಕೊಂಡರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಕುಸುಮಾವತಿ, ಪ್ರಮುಖರಾದ ಮೈದು ಕೊಟ್ಟಮುಡಿ, ಎಂ.ಬಿ.ಹಮೀದ್ ಕಬಡಕೇರಿ, ವೈ.ಎಂ.ಲಕ್ಷ್ಮಿ ಮತ್ತು ಪೆಗ್ಗೋಳಿ ನಿವೇಶನ ಹೋರಾಟಗಾರಾದ ಕಿರಣ್ ಜಗದೀಶ್, ಮಹೇಶ್, ನಗರದ ಅಭಿವೃದ್ಧಿ ಸಮಿತಿಯ ಸದಸ್ಯರು, ಮಹಿಳಾ ಸಂಘಟನಾ ಸದಸ್ಯರು, ಅಂಬೇಡ್ಕರ್ ಯುವಕ ತಂಡದವರು ಹೋರಾಟಗಾರರು ಮತ್ತು ನಗರದ ಸಾರ್ವಜನಿಕರು ಹಾಜರಿದ್ದರು. ಎಂ.ರಂಜಿತ್ ಮೌರ್ಯ ನಿರೂಪಿಸಿ, ವಂದಿಸಿದರು. :: ಸನ್ಮಾನ :: ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎ.ಹಂಸ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಗ್ರಾಮ ಲೆಕ್ಕಾಧಿಕಾರಿ, ನಿರ್ಮಿತಿ ಕೇಂದ್ರದ ಕಾರ್ಯಪಾಲಕ ಅಭಿಯಂತರರು, ಮತ್ತು ಗುತ್ತಿಗೆದಾರರನ್ನು ಸನ್ಮಾನಿಸಲಾಯಿತು.

ವರದಿ : ದುಗ್ಗಳ ಸದಾನಂದ  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*

ಸೆಪ್ಟೆಂಬರ್ 2, 2026

*ಸೆ.5 ಮತ್ತು 6 ರಂದು ಮಡಿಕೇರಿಯಲ್ಲಿ ‘KOA-MYCON’ ಮಧ್ಯವಾರ್ಷಿಕ ಸಮ್ಮೇಳನ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.